Subscribe to Updates

    Get the latest creative news from FooBar about art, design and business.

    What's Hot

    ಪಾವಂಜೆಯಲ್ಲಿ ‘ಯಕ್ಷಾಂತರಂಗ’ ಯಕ್ಷಗಾನ ಪ್ರಸಂಗ ಸಾಹಿತ್ಯ ಮತ್ತು ರಂಗ ನಡೆಗಳ ಮಾಹಿತಿ ಕಾರ್ಯಾಗಾರ | ಆಗಸ್ಟ್ 20ರಿಂದ 24

    August 16, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಹೆಜ್ಜೆಗಳು’ ನಾಟಕ ಪ್ರದರ್ಶನ | ಆಗಸ್ಟ್ 19

    August 16, 2025

    ‘ಆವಿಷ್ಕಾರ’ ವೇದಿಕೆಯಿಂದ ‘ಕಥನ, ಕವನ, ಗಾಯನ’ ಕಾರ್ಯಕ್ರಮ | ಆಗಸ್ಟ್ 17

    August 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ‘ಸ್ಮೃತಿ ಗೌರವ’ ಮತ್ತು ಯಕ್ಷಗಾನ ತಾಳಮದ್ದಳೆ
    Felicitation

    ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ‘ಸ್ಮೃತಿ ಗೌರವ’ ಮತ್ತು ಯಕ್ಷಗಾನ ತಾಳಮದ್ದಳೆ

    August 17, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕಾಸರಗೋಡು ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಸಭಾ ಭವನದಲ್ಲಿ ದಿನಾಂಕ 10 ಆಗಸ್ಟ್ 2024ರಂದು ದೇಲಂಪಾಡಿ ಮಹಾಲಿಂಗ ಪಾಟಾಳಿ-ಸೀತಮ್ಮ ದಂಪತಿಯ ಹೆಸರಲ್ಲಿ ಪ್ರಪ್ರಥಮವಾಗಿ ಕೊಡಲ್ಪಡುವ ಸ್ಮೃತಿ ಗೌರವವನ್ನು ಖ್ಯಾತ ಹಿರಿಯ ಸಾಹಿತಿ, ಅರ್ಥಧಾರಿ ಡಾ. ರಮಾನಂದ ಬನಾರಿ ಅವರಿಗೆ ನೀಡಿ ಗೌರವಿಸಲಾಯಿತು.

    ಮಹಾಲಿಂಗ ಪಾಟಾಳಿ ಅವರ 18ನೇ ವರ್ಷದ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರ್ಥಧಾರಿ ನಿವೃತ್ತ ಪ್ರಾಧ್ಯಾಪಕ ರಾಮಣ್ಣ ಮಾಸ್ತರ್ ವಹಿಸಿದ್ದರು. ಭಾಗವತ ನಾರಾಯಣ ತೋರಣಗಂಡಿ ಸಂಸ್ಕರಣಾ ಭಾಷಣ ಮಾಡಿದರು. ಯಕ್ಷಗಾನ ಕಲೋಪಾಸಕ ಎಂ. ರಮಾನಂದ ರೈ ವಂದಿಸಿದರು. ನಾರಾಯಣ ದೇಲಂಪಾಡಿ ಅವರು ಪ್ರಾಸ್ತಾವಿಕ ಮಾತುಗಳೊಂದಿಗೆ ನಿರೂಪಣೆಗೈದರು.

    ಮೊದಲಿಗೆ ಸ್ಥಳ ಸಾನ್ನಿಧ್ಯ ಶ್ರೀ ದೇವರ ಪೂಜಾರ್ಚನೆಯೊಂದಿಗೆ ಆರಂಭಗೊಂಡ ಈ ಕಲಾ ಸಾಂಸ್ಕೃತಿಕೋತ್ಸವದಲ್ಲಿ ಸಂಘದ ಹಿರಿಯ ಭಾಗವತ, ಗುರುಗಳಾದ ವಿಶ್ವವಿನೋದ ಬನಾರಿ ಅವರ ನಿರ್ದೇಶನದಲ್ಲಿ ಪಾರ್ತಿಸುಬ್ಬ ವಿರಚಿತ ‘ಸೀತಾಪಹಾರ – ಜಟಾಯು ಮೋಕ್ಷ’ ತಾಳಮದ್ದಳೆ ನಡೆಯಿತು. ಭಾಗವತರಾದ ರಚನಾ ಚಿದ್ಗಲ್ ಇವರ ಹಾಡುಗಾರಿಕೆಗೆ ಚೆಂಡೆ ಮದ್ದಳೆ ವಾದಕರಾಗಿ ಎಂ. ಅಪ್ಪಯ್ಯ ಮಣಿಯಾಣಿ, ಕೆ. ಶಿವರಾಮ ಕಲ್ಲೂರಾಯ, ವಿಷ್ಣುಶರಣ ಬನಾರಿ, ನಾರಾಯಣ ಪಾಟಾಳಿ ಮಯ್ಯಾಳ, ಕೃಷ್ಣಪ್ರಸಾದ ಬೆಳ್ಳಿಪ್ಪಾಡಿ ಮತ್ತು ಚೈತಾಲಿ ಕಾಂಚೋಡು ಅವರು ಸಹಕರಿಸಿದರು. ಅರ್ಥಧಾರಿಗಳಾಗಿ ಬಾಲಕೃಷ್ಣ ಗೌಡ ದೇಲಂಪಾಡಿ, ‘ಮುದಿಯಾರು ಐತ್ತಪ್ಪ ಗೌಡ, ರಮಾನಂದ ರೈ ದೇಲಂಪಾಡಿ, ವೀರಪ್ಪ ಸುವರ್ಣ ಬೆಳ್ಳಿಪ್ಪಾಡಿ, ರಾಮನಾಯ್ಕ ದೇಲಂಪಾಡಿ, ಪದ್ಮನಾಭ ರಾವ್ ಮಯ್ಯಾಳ, ಭಾಸ್ಕರ ಮಾಸ್ತರ್ ದೇಲಂಪಾಡಿ ಭಾಗವಹಿಸಿದ್ದರು. ನಂದಕಿಶೋರ ಬನಾರಿ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ‘ಹಯಾತಿ’ ಏಕವ್ಯಕ್ತಿ ಕಲಾ ಪ್ರದರ್ಶನ | ಆಗಸ್ಟ್ 18ರಿಂದ 20
    Next Article ಪುಸ್ತಕ ವಿಮರ್ಶೆ | ‘ಬದುಕು ಕಟ್ಟಿದ ಬಗೆಗಳು’ ಪ್ರೊ. ಬಿ.ಎ. ವಿವೇಕ ರೈ
    roovari

    Comments are closed.

    Related Posts

    ಪಾವಂಜೆಯಲ್ಲಿ ‘ಯಕ್ಷಾಂತರಂಗ’ ಯಕ್ಷಗಾನ ಪ್ರಸಂಗ ಸಾಹಿತ್ಯ ಮತ್ತು ರಂಗ ನಡೆಗಳ ಮಾಹಿತಿ ಕಾರ್ಯಾಗಾರ | ಆಗಸ್ಟ್ 20ರಿಂದ 24

    August 16, 2025

    ಅರ್ಥಪೂರ್ಣವಾಗಿ ಜರಗಿದ ಹಂದಾಡಿ ಬಾಲಕೃಷ್ಣ ನಾಯಕ್ ಇವರ ಪ್ರಥಮ ಪುಣ್ಯತಿಥಿ

    August 16, 2025

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ‘ಉಮ್ಮಕ್ಕೆನ ನೆಂಪು’ | ಆಗಸ್ಟ್ 17

    August 16, 2025

    ನುಕ್ಕೂರು ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

    August 16, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.