Subscribe to Updates

    Get the latest creative news from FooBar about art, design and business.

    What's Hot

    ಉದ್ಯಾವರದ ಸರಕಾರಿ ಕಾಲೇಜಿನಲ್ಲಿ ಬಹುಭಾಷಾ ನಿರಂತರ್ ನಾಟಕೋತ್ಸವ | ಫೆಬ್ರವರಿ 05ರಿಂದ 08

    February 4, 2026

    ಕನ್ನಡ ಸಾಹಿತ್ಯ ಪರಂಪರೆ ಮತ್ತು ಸಮಕಾಲೀನತೆ ಉಪನ್ಯಾಸ ಮಾಲಿಕೆ | ಫೆಬ್ರವರಿ 05

    February 4, 2026

    ನೃತ್ಯ ವಿಮರ್ಶೆ | ಸಭಾದಲ್ಲಿ ಸಭೆಯ ಮನಗೆದ್ದ ನೃತ್ಯ ಮಾರ್ಗಂ

    February 4, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ‘ಸ್ಮೃತಿ ಗೌರವ’ ಮತ್ತು ಯಕ್ಷಗಾನ ತಾಳಮದ್ದಳೆ
    Felicitation

    ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ‘ಸ್ಮೃತಿ ಗೌರವ’ ಮತ್ತು ಯಕ್ಷಗಾನ ತಾಳಮದ್ದಳೆ

    August 17, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕಾಸರಗೋಡು ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಸಭಾ ಭವನದಲ್ಲಿ ದಿನಾಂಕ 10 ಆಗಸ್ಟ್ 2024ರಂದು ದೇಲಂಪಾಡಿ ಮಹಾಲಿಂಗ ಪಾಟಾಳಿ-ಸೀತಮ್ಮ ದಂಪತಿಯ ಹೆಸರಲ್ಲಿ ಪ್ರಪ್ರಥಮವಾಗಿ ಕೊಡಲ್ಪಡುವ ಸ್ಮೃತಿ ಗೌರವವನ್ನು ಖ್ಯಾತ ಹಿರಿಯ ಸಾಹಿತಿ, ಅರ್ಥಧಾರಿ ಡಾ. ರಮಾನಂದ ಬನಾರಿ ಅವರಿಗೆ ನೀಡಿ ಗೌರವಿಸಲಾಯಿತು.

    ಮಹಾಲಿಂಗ ಪಾಟಾಳಿ ಅವರ 18ನೇ ವರ್ಷದ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರ್ಥಧಾರಿ ನಿವೃತ್ತ ಪ್ರಾಧ್ಯಾಪಕ ರಾಮಣ್ಣ ಮಾಸ್ತರ್ ವಹಿಸಿದ್ದರು. ಭಾಗವತ ನಾರಾಯಣ ತೋರಣಗಂಡಿ ಸಂಸ್ಕರಣಾ ಭಾಷಣ ಮಾಡಿದರು. ಯಕ್ಷಗಾನ ಕಲೋಪಾಸಕ ಎಂ. ರಮಾನಂದ ರೈ ವಂದಿಸಿದರು. ನಾರಾಯಣ ದೇಲಂಪಾಡಿ ಅವರು ಪ್ರಾಸ್ತಾವಿಕ ಮಾತುಗಳೊಂದಿಗೆ ನಿರೂಪಣೆಗೈದರು.

    ಮೊದಲಿಗೆ ಸ್ಥಳ ಸಾನ್ನಿಧ್ಯ ಶ್ರೀ ದೇವರ ಪೂಜಾರ್ಚನೆಯೊಂದಿಗೆ ಆರಂಭಗೊಂಡ ಈ ಕಲಾ ಸಾಂಸ್ಕೃತಿಕೋತ್ಸವದಲ್ಲಿ ಸಂಘದ ಹಿರಿಯ ಭಾಗವತ, ಗುರುಗಳಾದ ವಿಶ್ವವಿನೋದ ಬನಾರಿ ಅವರ ನಿರ್ದೇಶನದಲ್ಲಿ ಪಾರ್ತಿಸುಬ್ಬ ವಿರಚಿತ ‘ಸೀತಾಪಹಾರ – ಜಟಾಯು ಮೋಕ್ಷ’ ತಾಳಮದ್ದಳೆ ನಡೆಯಿತು. ಭಾಗವತರಾದ ರಚನಾ ಚಿದ್ಗಲ್ ಇವರ ಹಾಡುಗಾರಿಕೆಗೆ ಚೆಂಡೆ ಮದ್ದಳೆ ವಾದಕರಾಗಿ ಎಂ. ಅಪ್ಪಯ್ಯ ಮಣಿಯಾಣಿ, ಕೆ. ಶಿವರಾಮ ಕಲ್ಲೂರಾಯ, ವಿಷ್ಣುಶರಣ ಬನಾರಿ, ನಾರಾಯಣ ಪಾಟಾಳಿ ಮಯ್ಯಾಳ, ಕೃಷ್ಣಪ್ರಸಾದ ಬೆಳ್ಳಿಪ್ಪಾಡಿ ಮತ್ತು ಚೈತಾಲಿ ಕಾಂಚೋಡು ಅವರು ಸಹಕರಿಸಿದರು. ಅರ್ಥಧಾರಿಗಳಾಗಿ ಬಾಲಕೃಷ್ಣ ಗೌಡ ದೇಲಂಪಾಡಿ, ‘ಮುದಿಯಾರು ಐತ್ತಪ್ಪ ಗೌಡ, ರಮಾನಂದ ರೈ ದೇಲಂಪಾಡಿ, ವೀರಪ್ಪ ಸುವರ್ಣ ಬೆಳ್ಳಿಪ್ಪಾಡಿ, ರಾಮನಾಯ್ಕ ದೇಲಂಪಾಡಿ, ಪದ್ಮನಾಭ ರಾವ್ ಮಯ್ಯಾಳ, ಭಾಸ್ಕರ ಮಾಸ್ತರ್ ದೇಲಂಪಾಡಿ ಭಾಗವಹಿಸಿದ್ದರು. ನಂದಕಿಶೋರ ಬನಾರಿ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ‘ಹಯಾತಿ’ ಏಕವ್ಯಕ್ತಿ ಕಲಾ ಪ್ರದರ್ಶನ | ಆಗಸ್ಟ್ 18ರಿಂದ 20
    Next Article ಪುಸ್ತಕ ವಿಮರ್ಶೆ | ‘ಬದುಕು ಕಟ್ಟಿದ ಬಗೆಗಳು’ ಪ್ರೊ. ಬಿ.ಎ. ವಿವೇಕ ರೈ
    roovari

    Comments are closed.

    Related Posts

    ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಾಟಕ ಮಹೋತ್ಸವ ಮತ್ತು ಪ್ರಶಸ್ತಿ ಪ್ರದಾನ

    February 4, 2026

    ಆನೆಗುಡ್ಡೆ ದೇಗುಲದಲ್ಲಿ ಪ್ರಸಿದ್ಧ ಅರ್ಥದಾರಿಗಳಿಂದ ‘ಅರ್ಥಾಂಕುರ’ | ಫೆಬ್ರವರಿ 05

    February 4, 2026

    ಉರ್ವಸ್ಟೋರ್ ಸಾಹಿತ್ಯ ಸದನದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಬಹುಮಾನ ಸಮಾರಂಭ | ಫೆಬ್ರುವರಿ 07

    February 3, 2026

    ಉಡುಪಿಯಲ್ಲಿ ಶ್ರೀ ಪುರಂದರದಾಸರು ಹಾಗೂ ಸಂಗೀತ ತ್ರಿಮೂರ್ತಿ ಉತ್ಸವ -2026 | ಫೆಬ್ರವರಿ 06ರಿಂದ 08

    February 2, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.