Subscribe to Updates

    Get the latest creative news from FooBar about art, design and business.

    What's Hot

    ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ‘ಕವಿತೆಗಳು’ ಕವನ ಸಂಕಲನ ಬಿಡುಗಡೆ

    January 7, 2026

    ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ನಿಧನ

    January 7, 2026

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಂತ ಅಲೋಶಿಯಸ್ ಕಾಲೇಜಿನ ಎಲ್‌.ಸಿ.ಆರ್.ಐ. ಸಭಾಂಗಣದಲ್ಲಿ ಏಕವ್ಯಕ್ತಿ ನೃತ್ಯ ಪ್ರದರ್ಶನ
    Bharathanatya

    ಸಂತ ಅಲೋಶಿಯಸ್ ಕಾಲೇಜಿನ ಎಲ್‌.ಸಿ.ಆರ್.ಐ. ಸಭಾಂಗಣದಲ್ಲಿ ಏಕವ್ಯಕ್ತಿ ನೃತ್ಯ ಪ್ರದರ್ಶನ

    December 24, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ನೃತ್ಯಾಂಗನ್ ಸಂಸ್ಥೆ ಮತ್ತು ಅಲೋಶಿಯಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ ನೃತ್ಯ ಲಹರಿ ವತಿಯಿಂದ ‘ಶಾಸ್ತ್ರೀಯ ಭರತನಾಟ್ಯ ಉತ್ಸವ’ ಕಾರ್ಯಕ್ರಮವು ದಿನಾಂಕ 21 ಡಿಸೆಂಬರ್ 2024ರಂದು ಸಂತ ಅಲೋಶಿಯಸ್ ಕಾಲೇಜಿನ ಎಲ್‌.ಸಿ.ಆರ್.ಐ. ಸಭಾಂಗಣದಲ್ಲಿ ನಡೆಯಿತು.

    ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್ ಇವರು ಮಾತನಾಡಿ “ಕಲೆಗಳಿಂದ ಭಾರತದ ಶ್ರೀಮಂತಿಕೆ ಉಳಿದಿದೆ. ಕಲಾರಂಗದಲ್ಲಿ ತೊಡಗಿಕೊಂಡಿರುವ ಕಲಾವಿದರ ಕೊಡುಗೆ ಸ್ಮರಣೀಯ. ನಮ್ಮ ದೇಶದಲ್ಲಿ ಪ್ರದೇಶಗಳಿಗೆ ಅನುಸಾರವಾಗಿ ಹಲವು ಕಲೆಗಳಿವೆ. ಜಾನಪದ ಹಾಗೂ ಶಾಸ್ತ್ರೀಯ ಕಲೆಗಳು ಜನಮಾನಸದ ಮೇಲೆ ಅಚ್ಚಳಿಯದ ಪ್ರಭಾವ ಬೀರಿವೆ. ಕಾವ್ಯಾ ಗಣೇಶ್ ಶಾಸ್ತ್ರೀಯ ನೃತ್ಯ ಮತ್ತು ಉತ್ತರ ಭಾರತದಲ್ಲಿ ಅಳಿವಿನ ಅಂಚಿನಲ್ಲಿರುವ ಬುಡಕಟ್ಟು ಜನಾಂಗದ ಸಮಸ್ಯೆಯನ್ನು ಬಿಂಬಿಸುವ ಪ್ರಾಚಿ ಸಾಥಿ ಅವರ ನಾಟ್ಯ ಈ ದೇಸಿ ಸೊಗಡನ್ನು ಪ್ರತಿಬಿಂಬಿಸಿವೆ. ಮಂಗಳೂರಿನ ಸದಭಿರುಚಿಯ ಪ್ರೇಕ್ಷಕರು ನೃತ್ಯವನ್ನು ಸ್ವೀಕರಿಸಿದ ರೀತಿಯೂ ಶ್ಲಾಘನೀಯ” ಎಂದು ಹೇಳಿದರು.

    ಚೆನ್ನೈಯ ಕಲಾವಿದೆ ಕಾವ್ಯಾ ಗಣೇಶ್ ಇವರು ‘ಡಾನ್ಸಿಂಗ್ ಟು ಹರ್ ಓನ್ ಟ್ಯೂನ್’ ಎಂಬ ಏಕವ್ಯಕ್ತಿ ನೃತ್ಯವನ್ನು ಸಾದರಪಡಿಸಿದ ಬಳಿಕ ಮುಂಬೈಯ ಕಲಾವಿದೆ ಪ್ರಾಚಿ ಸಾಥಿ ಇವರು ‘ಭರತನಾಟ್ಯ, ವರ್ಲಿ ಕಲೆ ಮತ್ತು ತಲ್ಲೀನತೆಯ ಆನಿಮೇಷನ್’ ಎಂಬ ಕಲ್ಪನೆಯ ವೆನ್ ವಾಲ್ಸ್ ಡಾನ್ಸ್ ಎಂಬ ಎಂಬ ಏಕವ್ಯಕ್ತಿ ನೃತ್ಯ ಪ್ರಸ್ತುತಪಡಿಸಿದರು. ಯೋನಿತಾ ಜೈನ್ ಬೆಂಗಳೂರು ಬೆಳಕು ಸಂಯೋಜನೆ ನಿರ್ವಹಿಸಿ, ನೃತ್ಯಾಂಗನ್ ಸಂಸ್ಥೆ ನಿರ್ದೇಶಕಿ, ಕಲಾವಿದೆ ರಾಧಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕೊಡವ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ | ಜನವರಿ 20
    Next Article ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ 16ನೇ ವರ್ಷದ ‘ಆಸ್ರಣ್ಣ ಪ್ರಶಸ್ತಿ’ ಪ್ರದಾನ ಮತ್ತು ಯಕ್ಷಗಾನ
    roovari

    Add Comment Cancel Reply


    Related Posts

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026

    ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ನೃತ್ಯ ಸುಧಾರ್ಪಣಂ -2026’ | ಜನವರಿ 11

    January 7, 2026

    ಭರವಸೆಯ ಕಲಾವಿದೆ ಕೀರ್ತನಾ ಶಶಾಂಕ್ ರಂಗಪ್ರವೇಶ | ಜನವರಿ 10

    January 7, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.