Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಸೋನೆ ಮಳೆ- ಹಸಿರು ಇಳೆ’ ಪರಿಸರ ಕವಿಗೋಷ್ಠಿ
    Literature

    ‘ಸೋನೆ ಮಳೆ- ಹಸಿರು ಇಳೆ’ ಪರಿಸರ ಕವಿಗೋಷ್ಠಿ

    July 18, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ದ.ಕ. ಜಿಲ್ಲಾ ಸಮಿತಿ ವತಿಯಿಂದ ಅರಣ್ಯ ಇಲಾಖೆ ಮತ್ತು ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಸಹಯೋಗದಲ್ಲಿ ದಿನಾಂಕ 17-07-2024 ಬುಧವಾರ ನಗರದ ಲಾಲ್‌ಬಾಗ್‌ನ ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್‌ನಲ್ಲಿ ವನಮಹೋತ್ಸವ ಹಾಗೂ ‘ಸೋನೆ ಮಳೆ-ಹಸಿರು ಇಳೆ’ ಪರಿಸರ ಕವಿಗೋಷ್ಠಿ ನಡೆಯಿತು.

    ಈ ಕಾರ್ಯಕ್ರಮವನ್ನು ದೇರಳಕಟ್ಟೆಯ ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಇವರು ಉದ್ಘಾಟಿಸಿ “ಮರಗಳು ಬಿಸಿಲಿಗೆ ಬಾಡಿದರೂ ತಂಪಾದ ನೆರಳು ನೀಡುತ್ತವೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವ ಬದುಕಿಗೆ ನೆರವಾಗುತ್ತಿರುವ ಪ್ರಕೃತಿಯಿಂದ ನಾವು ಪ್ರೇರಣೆ ಪಡೆಯಬೇಕು. ಪರರಿಗೆ ನೆರಳಾಗುವ ಬದುಕು ನಮ್ಮದಾಗಬೇಕು” ಎಂದು ಹೇಳಿದರು.

    ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ “ಮಂಗಳೂರಿನ ಜನತೆಗೆ ಸ್ವಚ್ಛ ಹಾಗೂ ಹಸುರಿನಿಂದ ಕೂಡಿದ ಪರಿಸರ ಲಭಿಸಲು ಮಂಗಳೂರು ಮಹಾ ನಗರ ಪಾಲಿಕೆ ವಿಶೇಷ ಆದ್ಯತೆ ನೀಡಿದೆ. ಜನತೆಯ ಸಹಕಾರದಿಂದ ಹಸಿರು ಮಂಗಳೂರು ಸಾಕಾರವಾಗಲಿದೆ” ಎಂದರು.

    ವನಮಹೋತ್ಸವಕ್ಕೆ ಚಾಲನೆ ನೀಡಿದ ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿ.ಎ. ಶಾಂತಾರಾಮ್ ಶೆಟ್ಟಿ ಮಾತನಾಡಿ “ಮಾನವ ಸ್ವಾರ್ಥದಿಂದ ಪ್ರಕೃತಿ ನಾಶವಾಗುವುದನ್ನು ತಡೆಯಲು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಿರಂತರ ನಡೆಯಬೇಕಾಗಿದೆ” ಎಂದರು.

    ಅ.ಭಾ.ಸಾ.ಪ. ಜಿಲ್ಲಾಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಕವಿಗಳಿಗೆ ಅಭಿನಂದನಾ ಪತ್ರ ವಿತರಿಸಿದರು. ಮಂಗಳೂರು ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಕಾರ್ಪೋರೇಟರ್ ಸಂಧ್ಯಾ ಮೋಹನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ಅ.ಭಾ.ಸಾ.ಪ. ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷೆ ಮೀನಾಕ್ಷಿ ರಾಮಚಂದ್ರ, ಪರಿಸರವಾದಿ ಕೃಷ್ಣಪ್ಪ ಉಪಸ್ಥಿತರಿದ್ದರು.

    ಅ.ಭಾ.ಸಾ.ಪ. ಜಿಲ್ಲಾ ಕೋಶಾಧಿಕಾರಿ ಭಾಸ್ಕರ ರೈ ಕಟ್ಟ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಕವಿ ಗುಣಾಜೆ ರಾಮಚಂದ್ರ ಭಟ್ ಕವಿಗೋಷ್ಠಿಗೆ ಚಾಲನೆ ನೀಡಿದರು. ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಡಾ. ಸುರೇಶ್ ನೆಗಳಗುಳಿ ಕಾವ್ಯದ ನೈಜ ಅಭಿವ್ಯಕ್ತಿ ಹಾಗೂ ಅಕ್ಷರ ವಿನ್ಯಾಸದ ಮಹತ್ವದ ಬಗ್ಗೆ ಕಿವಿಮಾತು ಹೇಳಿ ಪರಿಸರ ಸಂಬಂಧೀ ಸ್ವರಚಿತ ಗಜಲ್ ವಾಚಿಸಿದರು.

    ರೇಖಾ ಸುದೇಶ್ ರಾವ್ ನಿರೂಪಿಸಿದ ‘ಸೋನೆ ಮಳೆ- ಹಸಿರು ಇಳೆ’ ಕವಿಗೋಷ್ಠಿಯಲ್ಲಿ ಸುಮನಾ ಘಾಟೆ, ರೇಣುಕಾ ಸುಧೀರ್, ಗೀತಾ ಲಕ್ಷ್ಮೀಶ, ವಿದ್ಯಾಶ್ರೀ ಅಡೂರು, ಅರುಣಾ ನಾಗರಾಜ್, ದಿವ್ಯಾ ಎ. ಗಿರೀಶ್, ಚಂದನಾ ಕಾರ್ತಟ್ಟು, ಕೊಳ್ಚಪ್ಪೆ ಗೋವಿಂದ ಭಟ್, ರೇಖಾ ಸುದೇಶ ರಾವ್, ನಿಶಾನ್ ಅಂಚನ್, ಮನ್ಸೂರ್ ಮೂಲ್ಕಿ, ವೆಂಕಟೇಶ ಗಟ್ಟಿ, ಉಮೇಶ ಕಾರಂತ, ರಾಣಿ ಪುಷ್ಪಲತಾ ದೇವಿ, ಅನುರಾಧಾ ರಾಜೀವ್, ಸುಲೋಚನಾ ನವೀನ್, ದೀಪಾ ಜಿ.ಎಂ., ಅನಿತಾ ಶೆಣೈ, ರೇಖಾ ಸುದೇಶ್ ರಾವ್ ಇವರುಗಳು ಸ್ವರಚಿತ ಕವನ ವಾಚಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleನಂದಗೋಕುಲ ರೆಪರ್ಟರಿಯ ರಂಗಸವಾರಿ ಆರಂಭ | ಜುಲೈ 20
    Next Article ಕೀರಿಕ್ಕಾಡು ಸ್ಮಾರಕ ಸಭಾ ಭವನದಲ್ಲಿ ಯಕ್ಷಗಾನ ತಾಳಮದ್ದಳೆ
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.