Subscribe to Updates

    Get the latest creative news from FooBar about art, design and business.

    What's Hot

    ಪ್ರಸಿದ್ಧ ಯಕ್ಷಗಾನ ಕಲಾವಿದ ವಿದ್ಯಾಧರ ರಾವ್ ಜಲವಳ್ಳಿ ಅವರಿಗೆ ಗುರು ಮಟಪಾಡಿ ವೀರಭದ್ರ ನಾಯಕ್ ‘ಯಕ್ಷಸಾಧಕ’ ಪ್ರಶಸ್ತಿ

    July 11, 2025

    ಮಕ್ಕಳ ಮೇಳಕ್ಕೆ ಮಾಹೆಯ ‘ಸಮ್ಮರ್ ಸ್ಕೂಲ್’ ತಂಡ ಭೇಟಿ

    July 11, 2025

    ಡಾ.ವಿವೇಕ್ ರೈಗೆ ಚಿದಾನಂದ ಪ್ರಶಸ್ತಿ

    July 11, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ವಿಶೇಷ ಉಪನ್ಯಾಸ
    Kannada

    ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ವಿಶೇಷ ಉಪನ್ಯಾಸ

    July 11, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೊಪ್ಪಳ: ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚುಟುಕು ಸಂಗಮ ಕವಿಗೋಷ್ಠಿ ಹಾಗೂ ಜಾನಪದ ಸಾಹಿತ್ಯದಲ್ಲಿ ಹಾಸ್ಯ ಎನ್ನುವ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ದಿನಾಂಕ 06 ಜುಲೈ 2025ರ ಭಾನುವಾರದಂದು ಕೊಪ್ಪಳದ ಗಂಜ್ ಸರ್ಕಲ್ ಹತ್ತಿರವಿರುವ ವಿ. ಹೆಚ್. ಎಂ. ಲಾ ಅಸೋಶಿಯಟ್ಸ್ ಮತ್ತು ಬಾಳಪ್ಪ ಎಸ್ ವೀರಾಪುರ ವಕೀಲರ ಕಚೇರಿಯಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ನಿವೃತ್ತ ಪ್ರಾಚಾರ್ಯ ಸಿ. ವಿ. ಜಡಿಯವರ್ ಮಾತನಾಡಿ “ಎಲ್ಲಾ ಬಗೆಯ ಸಾಹಿತ್ಯ ಪ್ರಕಾರಗಳಿಗಿಂತ ಮೂಲ ಜಾನಪದ ಸಾಹಿತ್ಯಕ್ಕೆ ಶ್ರೇಷ್ಠತೆ ಇದೆ. ಜಾನಪದ ಸಾಹಿತ್ಯವು ಪ್ರತಿಯೊಬ್ಬರಿಗೂ ತಾಯಿ ಬೇರು ಇದ್ದಂತೆ, ಅದನ್ನು ಪೋಷಿಸಿ ಬೆಳೆಸಬೇಕಾದ ಹೊಣೆಗಾರಿಕೆ ಎಲ್ಲರ ಮೇಲಿದೆ, ಇಂದಿನ ಆಧುನಿಕ ಯುಗದಲ್ಲಿ ಮೂಲ ಜಾನಪದ ಕಲಾವಿದರನ್ನು ಕಣೆಗಣಿಸಿ ಜಾನಪದಕ್ಕೆ ತದ್ವಿರುದ್ಧ (ನಕಲಿ )ಜಾನಪದ ಕಲಾವಿದರಿಗೇ ಹೆಚ್ಚಿನ ಪ್ರಮಾಣದಲ್ಲಿ ಮನ್ನಣೆ ದೊರೆಯುತ್ತಿರುವುದು ಸರಿಯಾದ ಬೆಳವಣಿಗೆಯಲ್ಲ. ಆಧುನಿಕತೆ ಹೆಸರಿನಲ್ಲಿ ಜಾನಪದ ನಶಿಸುತ್ತಿದೆ, ಇಂದು ಜಾತಿ, ಮತ, ಪಂಥಗಳಿಂದ ಸೌಹಾದ೯ತೆ ಮಾಯವಾಗುತ್ತಿದೆ. ಜನರ ನಡುವೆ ಇದ್ದ ಸಾಹಿತ್ಯ ಅದು ಪೂವ೯ಜರ ಬಳುವಳಿಯಿಂದ ಬಂದಿದ್ದು ಅದನ್ನು ಪ್ರತಿಯೊಬ್ಬರೂ ಕಾಪಾಡಬೇಕು. ಪ್ರಸ್ತುತ ದಿನಗಳಲ್ಲಿ ಚುಟುಕು ಸಾಹಿತ್ಯವು ಜಾನಪದ ಸಂತತಿಯಾಗಿ ಬೆಳೆಯುತ್ತಿರುವುದು ಆಶಾದಾಯಕ ಬೆಳವಣಿಗೆ” ಎಂದು ವಿಶ್ಲೇಷಿಸಿದರು.


    ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕವಿ, ವಕೀಲ ವಿಜಯ ಅಮೃತರಾಜ್ ಮಾತನಾಡಿ “ಸಾಹಿತಿ ಸಂಘಟಕರಿಗೆ ಸರಕಾರದಿಂದ ನೆರವು ಪ್ರೋತ್ಸಾಹ ಯೋಜನೆಗಳಿವೆ. ಅವುಗಳನ್ನು ನಿಯಮಾನುಸಾರ ಪಡೆಯಲು ಪ್ರಯತ್ನಿಸಬೇಕು. ಬರಹಗಳಿಂದ ಬದುಕು ಸಾಧ್ಯ ಎಂಬುದನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ತೋರಿಸಿಕೊಟ್ಟಿದ್ದಾರೆ ಬರಹಗಾರರು ವಿಮುಖರಾಗಬಾರದು” ಎಂದು ಸಲಹೆ ನೀಡಿದರು.

    ಸಾಹಿತಿ ಮಹಾಂತೇಶ್ ಮಲ್ಲನಗೌಡರ ಮಾತನಾಡಿ “ಜಿಲ್ಲಾ ಮಟ್ಟದ ಸಮಾರಂಭ ಎಂದರೆ ಅಷ್ಟು ಸುಲಭದ ಕೆಲಸ ಅಲ್ಲ ಇದರ ನಡುವೆಯೇ ಕೊಪ್ಪಳ ಜಿಲ್ಲೆಯಲ್ಲಿ ಚುಟುಕು ಸಾಹಿತ್ಯ ಪರಿಷತ್ತು ನಿರಂತರ ಚಟುವಟಿಕೆ ಮಾಡುತ್ತಿರುವುದು ಶ್ಲಾಘನೀಯ. ಈ ಕಾರ್ಯವನ್ನು ಜಿಲ್ಲೆಯ ಜನತೆ ಹಾಗೂ ಸಾಹಿತ್ಯ ಮನಸ್ಸುಗಳು ಬೆಂಬಲಿಸಿ ಪ್ರೋತ್ಸಾಹಿಸಲಿ” ಎಂದು ತಿಳಿಸಿದರು. ಪರಿಷತ್ತಿನ ಜಿಲ್ಲಾ ಅಧ್ಯಕ್ಷ ರುದ್ರಪ್ಪ ಭಂಡಾರಿ ಪ್ರಾಸ್ತಾವಿಕ ಮಾತನಾಡಿ “ಬರುವ ದಿನಗಳಲ್ಲಿ ಸಾಹಿತ್ಯ ಕಮ್ಮಟ ಹಾಗೂ ವಿವಿಧ ಸಾಹಿತ್ಯ ಸಮ್ಮೇಳನ ಆಯೋಜಿಸಲು ಪರಿಷತ್ತು ಉದ್ದೇಶಿಸಿದೆ” ಎಂದು ತಿಳಿಸಿದರು.
    ಹಿರಿಯ ಸಾಹಿತಿ ವೀರಣ್ಣ ಹುರಕಡ್ಲಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಯುವ ಸಾಹಿತಿ ರಾಘವೇಂದ್ರ ಹಳ್ಳಿ, ವಕೀಲರಾದ ವಿ. ಹೆಚ್. ಮಾಲಿ ಪಾಟೀಲ್ , ಬಾಳಪ್ಪ ವೀರಾಪುರ ಮಾತನಾಡಿದರು. ಬಾಳಪ್ಪ ವೀರಾಪುರ ಸ್ವಾಗತಿಸಿ, ಡಾ. ಮಹಾಂತೇಶ್ ನೆಲಾಗಣಿ ಹಾಗೂ ಪ್ರದೀಪ್ ಹದ್ಧಣ್ಣ ವರ್ ಕಾಯ೯ಕ್ರಮ ನಿರೂಪಿಸಿದರು.

    ಸಭಾಕಾರ್ಯಕ್ರಮದ ಬಳಿಕ ನಡೆದ ಕವಿಗೋಷ್ಠಿಯಲ್ಲಿ ಎ. ಪಿ. ಅಂಗಡಿ, ಶ್ರೀಮತಿ ಸುಮಂಗಲ, ಹೆಚ್. ಪ್ರದೀಪ್ ಕುಮಾರ ಹದ್ದಣ್ಣವರ್, ರವಿ ಹಿರೇಮನಿ, ಬಾಳಪ್ಪ ವೀರಾಪುರ, ಅಕ್ಕಮಹಾದೇವಿ ಅಂಗಡಿ, ಈರಯ್ಯ ಕುತ೯ಕೋಟಿ, ಅನ್ನಪೂರ್ಣಾ ಮಹೇಶ್ ಮನ್ನಪುರ, ರೇವಣಸಿದ್ದಪ್ಪ ಕೊಲ್ಕಾರ್, ವಸಂತ್ ಗುಡಿ, ಕಂಠಯ್ಯ ಅರಳಿಕಟ್ಟಿಮಠ, ಪುಷ್ಪಲತಾ ಯೋಳುಭಾವಿ, ಶಿವಪ್ಪ ಕೋಗಳಿ, ಬಸವರಾಜ್ ಉಪ್ಪಿನ, ಸುರೇಶ್ ಕುಂಬಾರ, ಬಸವರಾಜ್ ಸಂಕನಗೌಡರ, ನಾಗರತ್ನ ಬನ್ನಿಕೊಪ್ಪ, ವಿಜಯ ಲಕ್ಷ್ಮಿ ಕೊಳ್ಳಿ ಮುಂತಾದವರು ಕವಿತೆ ವಾಚಿಸಿದರು. ಇದಕ್ಕೂ ಮುಂಚೆ ಹಲವು ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.

    baikady kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀನಾಥ್ ಬಸ್ರೂರು ಇವರ ‘ಒಮ್ಮೊಮ್ಮೆ ಅನಿಸಿದ್ದು’ ಅಂಕಣ ಬರಹಗಳ ಪುಸ್ತಕ ಬಿಡುಗಡೆ
    Next Article ‘ಕವನ ವಾಚನ ವಿಡಿಯೋ ಸ್ಪರ್ಧೆ 2025’ | ಕೊನೆಯ ದಿನಾಂಕ ಜೂನ್ 15
    roovari

    Add Comment Cancel Reply


    Related Posts

    ಪ್ರಸಿದ್ಧ ಯಕ್ಷಗಾನ ಕಲಾವಿದ ವಿದ್ಯಾಧರ ರಾವ್ ಜಲವಳ್ಳಿ ಅವರಿಗೆ ಗುರು ಮಟಪಾಡಿ ವೀರಭದ್ರ ನಾಯಕ್ ‘ಯಕ್ಷಸಾಧಕ’ ಪ್ರಶಸ್ತಿ

    July 11, 2025

    ಮಕ್ಕಳ ಮೇಳಕ್ಕೆ ಮಾಹೆಯ ‘ಸಮ್ಮರ್ ಸ್ಕೂಲ್’ ತಂಡ ಭೇಟಿ

    July 11, 2025

    ಡಾ.ವಿವೇಕ್ ರೈಗೆ ಚಿದಾನಂದ ಪ್ರಶಸ್ತಿ

    July 11, 2025

    ಭರತಾಂಜಲಿ (ರಿ.) ಕೊಟ್ಟಾರ ಸಂಸ್ಥೆಯಿಂದ ಗಣೇಶಪುರದಲ್ಲಿ ‘ಗುರು ಪೂರ್ಣಿಮ’ ಕಾರ್ಯಕ್ರಮ | ಜುಲೈ 13

    July 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.