Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತಿಂಗಳ ಕಾರ್ಯಕ್ರಮದಲ್ಲಿ ‘ವಿಶೇಷ ಉಪನ್ಯಾಸ’
    Literature

    ತಿಂಗಳ ಕಾರ್ಯಕ್ರಮದಲ್ಲಿ ‘ವಿಶೇಷ ಉಪನ್ಯಾಸ’

    August 22, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆ ಕಾರ್ಕಳ ಇದರ ತಿಂಗಳ ಕಾರ್ಯಕ್ರಮದಲ್ಲಿ ‘ವಿಶೇಷ ಉಪನ್ಯಾಸ’ವು ದಿನಾಂಕ 21 ಆಗಸ್ಟ್ 2024ರಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.  

     

    ಈ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ ಎಸ್.ವಿ.ಟಿ. ಪದವಿಪೂರ್ವ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕರಾದ ಶ್ರೀ ರಾಮ ಭಟ್ ಇವರು ‘ದೈನಂದಿನ ಬದುಕಿನಲ್ಲಿ ಹಾಸ್ಯ’ ಎಂಬ ವಿಷಯದ ಕುರಿತಾಗಿ ವಿಶೇಷ ಉಪನ್ಯಾಸವನ್ನು ನೀಡಿ “ದೈನಂದಿನ ಬದುಕಿನಲ್ಲಿ ಹಾಸ್ಯ ಜೀವನೋತ್ಸಾಹವನ್ನು ಹೆಚ್ಚಿಸುತ್ತದೆ. ಬದುಕಿನ ಭಾರ ಕಡಿಮೆಯಾಗಬೇಕಾದರೆ ನಮ್ಮ ಜೀವನದ ಜೇಬಿನೊಳಗೆ ಹಾಸ್ಯ ನಿತ್ಯ ತುಂಬಿರಬೇಕು. ಜೀವನದ ಪ್ರತಿಕ್ಷಣವನ್ನು ಸಂಭ್ರಮಿಸುವುದರ ಮುಖೇನ ಬದುಕನ್ನು ಹಸನುಗೊಳಿಸಬಹುದು” ಎಂದು ಅಭಿಪ್ರಾಯಪಟ್ಟರು.

     

    ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ಅಧ್ಯಕ್ಷೆ ಶ್ರೀಮತಿ ಮಿತ್ರಪ್ರಭಾ ಹೆಗ್ಡೆಯವರು ಸ್ವಾಗತಿಸಿದರು. ಅನುಪಮಾ ಚಿಪ್ಲೂಣ್ಕರ್ ಪ್ರಾರ್ಥಿಸಿ, ಡಾ. ಸುಮತಿ ಪಿ. ಉಪನ್ಯಾಸಕಾರರನ್ನು ಪರಿಚಯಿಸಿದ ಕಾರ್ಯಕ್ರಮವನ್ನು ಕಾರ್ಯದರ್ಶಿ ಮಾಲತಿ ಜಿ. ಪೈಯವರು ನಿರ್ವಹಿಸಿದರು.  ಬಿ.ವಿ. ಸುಲೋಚನಾ ಧನ್ಯವಾದವನ್ನಿತ್ತರು. ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ಸದಸ್ಯೆಯರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯ ರಾಜಾಂಗಣದಲ್ಲಿ ‘ರಾಗರತ್ನ ಮಾಲಿಕೆ- 27’ | ಆಗಸ್ಟ್ 31 
    Next Article ಕಾರ್ಕಳದ ಬಂಡಿಮಠದಲ್ಲಿ ‘ವಿಶ್ವ ಜಾನಪದ ದಿನಾಚರಣೆ’ | ಆಗಸ್ಟ್ 24
    roovari

    Comments are closed.

    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.