Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ವಿವಿಯಲ್ಲಿ ಕನ್ನಡ ಸಾಹಿತ್ಯ ಚರಿತ್ರೆ ರಚನೆ ಪ್ರಾರಂಭಿಕ ಪ್ರಯತ್ನಗಳು ಎಂಬ ವಿಷಯದಲ್ಲಿ ವಿಶೇಷೋಪನ್ಯಾಸ 
    Literature

    ಮಂಗಳೂರು ವಿವಿಯಲ್ಲಿ ಕನ್ನಡ ಸಾಹಿತ್ಯ ಚರಿತ್ರೆ ರಚನೆ ಪ್ರಾರಂಭಿಕ ಪ್ರಯತ್ನಗಳು ಎಂಬ ವಿಷಯದಲ್ಲಿ ವಿಶೇಷೋಪನ್ಯಾಸ 

    October 29, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆ ಮತ್ತು ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ಪ್ರಚಾರೋಪನ್ಯಾಸ ಮಾಲಿಕೆಯಡಿ ಕನ್ನಡ ಸಾಹಿತ್ಯ ಚರಿತ್ರೆ ರಚನೆ ಪ್ರಾರಂಭಿಕ ಪ್ರಯತ್ನಗಳು ಎಂಬ ವಿಷಯದಲ್ಲಿ ಉಪನ್ಯಾಸ ಕಾರ್ಯಕ್ರಮವು ದಿನಾಂಕ 18-10-2023ರ ಬುಧವಾರದಂದು ಮಂಗಳೂರು ವಿವಿ ಕನ್ನಡ ವಿಭಾಗದ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಹಾಗೂ  ವಿದ್ವಾಂಸ ಪ್ರೊ. ಎ.ವಿ. ನಾವಡ ಮಾತನಾಡಿ “ಕನ್ನಡ ಸಾಹಿತ್ಯ ಚರಿತ್ರೆಯನ್ನು ರೂಪಿಸಿದ ಆರಂಭದ ದಿನಗಳಲ್ಲಿ ವಿದೇಶಿ ವಿದ್ವಾಂಸರುಗಳಾದ ವೈಗ್ಲೆ, ಕಿಟ್ಟೆಲ್, ಇ.ಪಿ. ರೈಸ್, ಮೋಗ್ಲಿಂಗ್ ಮೊದಲಾದವರ ಕೊಡುಗೆ ಅಪಾರ. ಆರ್. ನರಸಿಂಹಾಚಾರ್, ಕನ್ನಡವಕ್ಕಿ, ಮುಗಳಿ, ಮರಿಯಪ್ಪ ಭಟ್ಟರಂತಹ ದೇಶೀ ವಿದ್ವಾಂಸರು ಸೇರಿಕೊಂಡು ಸಾಹಿತ್ಯ ಚರಿತ್ರೆ ನಿರ್ಮಾಣದ ಪ್ರಕ್ರಿಯೆ ಹುಲುಸಾಗಿ ಬೆಳೆಯಿತು. ವಿದೇಶದಿಂದ ಬಂದು ಇಲ್ಲಿನ ಸಂಸ್ಕೃತ, ಕನ್ನಡ ಭಾಷೆಗಳನ್ನು ಕಲಿತು ಇಲ್ಲಿನ ಲಿಖಿತ ಮತ್ತು ಮೌಖಿಕ ಸಾಹಿತ್ಯ ಸಂಗ್ರಹ ಮತ್ತು ಗ್ರಂಥ ಸಂಪಾದನೆಯನ್ನು ಮಾಡಿದ ವಿದ್ವಾಂಸರ ಶ್ರಮ, ವಿನಯ ಮತ್ತು ವಿದ್ವತ್ತು ಬೆರಗು ಹುಟ್ಟಿಸುವಂತದ್ದು. ಸಾಹಿತ್ಯ ಚರಿತ್ರೆಯಲ್ಲಿ ಮೌಖಿಕ ಸಾಹಿತ್ಯವನ್ನು ಆಕರ ಸಾಮಗ್ರಿಯಾಗಿ ಪರಿಗಣಿಸುವಾಗ ಎಚ್ಚರ ಅಗತ್ಯ. ಪಾಡ್ದನಗಳಂತಹ ಮೌಖಿಕ ಪರಂಪರೆ ನಿತ್ಯ ಹೊಸತಾಗುತ್ತಿರುತ್ತವೆ. ಅವುಗಳಿಗೆ ಕಾಲದ ಸೂತಕ ಸಲ್ಲದು. ಆದ್ದರಿಂದ ಚಾರಿತ್ರಿಕ ಆಕರವಾಗಿ ಅವುಗಳನ್ನು ವಿವೇಚನೆಯಿಂದ ಬಳಸಬೇಕು.” ಎಂದರು.

    ಮೈಸೂರಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕ ಡಾ.ಎನ್.ಎಂ. ತಳವಾರ ಮಾತನಾಡಿ, ”ವರ್ತಮಾನವನ್ನು ಅರ್ಥ ಮಾಡಿಕೊಳ್ಳಲು ಪರಂಪರೆಯ ಅರಿವು ಬೇಕು. ಈ ಹಿನ್ನೆಲೆಯಿಂದ ಕೇಂದ್ರವು ಶಾಸ್ತ್ರೀಯ ವಿಚಾರಗಳ ಆರಂಭಿಕ ಪ್ರಯತ್ನಗಳನ್ನು ಕುರಿತು ಅಧ್ಯಯನಶೀಲರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡುತ್ತಿದೆ.” ಎಂದರು.

    ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರೊ. ಸೋಮಣ್ಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ. ನಾಗಪ್ಪ ಗೌಡ, ಮೈಸೂರು ಶಾಸ್ತ್ರೀಯ ಕನ್ನಡ ಅಧ್ಯಯನ ಸಂಸ್ಥೆಯ ಚಿತ್ರಾ, ಡಾ. ಗಣೇಶ್ ಅಮೀನ್ ಸಂಕಮಾರ್, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಮಂಜಪ್ಪ, ಚಂದ್ರಶೇಖರ ಎಂ.ಬಿ. ಭಾಗವಹಿಸಿದ್ದರು. ಡಾ. ಧನಂಜಯ ಕುಂಬ್ಳೆ ಸ್ವಾಗತಿಸಿ, ವಿದ್ಯಾರ್ಥಿನಿ ವೀಕ್ಷಿತ ನಿರೂಪಿಸಿ, ಸಂಶೋಧನಾರ್ಥಿ ಆರತಿ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ಅರಿವು ತಿಳಿವು’ ತಿಂಗಳ ಕಾರ್ಯಕ್ರಮದಲ್ಲಿ “ಭೌತಿಕ ಶೋಧ” ದ ಕುರಿತು ಉಪನ್ಯಾಸ
    Next Article ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕವಿಗೋಷ್ಠಿ ಸಂಪನ್ನ
    roovari

    Add Comment Cancel Reply


    Related Posts

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.