Subscribe to Updates

    Get the latest creative news from FooBar about art, design and business.

    What's Hot

    ರಾಯಚೂರು ಕನ್ನಡ ಭವನದಲ್ಲಿ ‘ಮಹಿಳಾ ಪರಿಷತ್’ ಇದರ ಉದ್ಘಾಟನಾ ಕಾರ್ಯಕ್ರಮ | ಜನವರಿ 04

    January 1, 2026

    ಕರಾವಳಿ ಉತ್ಸವದಲ್ಲಿ ಕರ್ನಾಟಕ ಯಕ್ಷ ಭಾರತಿ ತಂಡದಿಂದ ತಾಳಮದ್ದಳೆ

    January 1, 2026

    ಜಾನಪದ ಅಕಾಡೆಮಿಯ ಜಾನಪದ ತಜ್ಞ, ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಕಟ

    January 1, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಿಮ್ಮೇಳ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಇವರಿಗೆ ‘ಶ್ರೀ ಹರಿಲೀಲಾ ಯಕ್ಷನಾದ ಪ್ರಶಸ್ತಿ-2024’
    Awards

    ಹಿಮ್ಮೇಳ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಇವರಿಗೆ ‘ಶ್ರೀ ಹರಿಲೀಲಾ ಯಕ್ಷನಾದ ಪ್ರಶಸ್ತಿ-2024’

    September 27, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಗಾನದ ಗುರು ದಂಪತಿ – ಶ್ರೀಮತಿ ಲೀಲಾವತಿ ಬೈಪಾಡಿತ್ತಾಯ ಹಾಗೂ ಶ್ರೀ ಹರಿನಾರಾಯಣ ಬೈಪಾಡಿತ್ತಾಯ ಹೆಸರಿನಲ್ಲಿ ನೀಡಲಾಗುವ 2024ನೇ ಸಾಲಿನ ಪ್ರತಿಷ್ಠಿತ ‘ಶ್ರೀ ಹರಿಲೀಲಾ ಯಕ್ಷನಾದ ಪ್ರಶಸ್ತಿ’ಯನ್ನು ಹಿರಿಯ ಯಕ್ಷಗಾನ ಗುರು, ಮದ್ದಳೆಗಾರರಾಗಿರುವ ಶ್ರೀ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಇವರಿಗೆ ನೀಡಿ ಗೌರವಿಸಲಾಗುತ್ತಿದೆ. ಪ್ರಶಸ್ತಿಯು ರೂ.10,078/- ನಗದು, ಬಿನ್ನವತ್ತಳೆ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.

    ಬೈಪಾಡಿತ್ತಾಯರು ಸ್ಥಾಪಿಸಿರುವ ಡಿ.ಜಿ. ಯಕ್ಷ ಫೌಂಡೇಶನ್ (ರಿ) ಸಹಯೋಗದಲ್ಲಿ ಶಿಷ್ಯವೃಂದದವರು ಏರ್ಪಡಿಸಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಯಕ್ಷಕಲಾ ಪೊಳಲಿಯ ಸಂಪೂರ್ಣ ಸಹಕಾರದೊಂದಿಗೆ ದಿನಾಂಕ 13 ಅಕ್ಟೋಬರ್ 2024ರ ಭಾನುವಾರದಂದು ಮಧ್ಯಾಹ್ನ 2-00 ಗಂಟೆಯಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಡಿ.ಜಿ. ಯಕ್ಷ ಫೌಂಡೇಶನ್ ನಿರ್ದೇಶಕ ಅವಿನಾಶ್ ಬೈಪಾಡಿತ್ತಾಯ ತಿಳಿಸಿರುತ್ತಾರೆ.

    2021, 2022 ಹಾಗೂ 2023ರಲ್ಲಿ ಅನುಕ್ರಮವಾಗಿ ಯಕ್ಷಗಾನ ರಂಗದ ದಿಗ್ಗಜ ಹಿಮ್ಮೇಳವಾದಕರಾದ ಶ್ರೀ ಲಕ್ಷ್ಮೀಶ ಅಮ್ಮಣ್ಣಾಯ, ಶ್ರೀ ಪೆರುವಾಯಿ ನಾರಾಯಣ ಭಟ್ ಹಾಗೂ ಶ್ರೀ ಮಿಜಾರು ಮೋಹನ ಶೆಟ್ಟಿಗಾರ್ ಇವರುಗಳಿಗೆ ‘ಶ್ರೀ ಹರಿಲೀಲಾ ಯಕ್ಷನಾದ ಪ್ರಶಸ್ತಿ’ ಸಂದಿದೆ. 4ನೇ ವರ್ಷದ ಕಾರ್ಯಕ್ರಮವು ಯಕ್ಷಗಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಶೇಷವಾದುದು. ಇಬ್ಬರು ಶ್ರೇಷ್ಠ ಗುರುಗಳ ಸಂಗಮದ ಕಾರ್ಯಕ್ರಮವಿದು. ಬೈಪಾಡಿತ್ತಾಯರು ಮತ್ತು ಮಾಂಬಾಡಿಯವರ ಶಿಷ್ಯಂದಿರು ಇಂದು ಯಕ್ಷಗಾನ ರಂಗದಲ್ಲಿ ವಿಜೃಂಭಿಸುತ್ತಿದ್ದಾರೆ. ಬೈಪಾಡಿತ್ತಾಯರು ತಮ್ಮದೇ ಕಾಯಕದಲ್ಲಿ ನಿರತರಾಗಿರುವ ಮತ್ತೊಬ್ಬ ಗುರು ಮಾಂಬಾಡಿಯವರನ್ನು ಗೌರವಿಸುವುದು ಈ ಬಾರಿಯ ವಿಶೇಷವಾಗಿದ್ದು, ಈ ಮೂಲಕ ಪ್ರಶಸ್ತಿಯ ಪ್ರತಿಷ್ಠೆ ಹೆಚ್ಚಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಶಿವಮೊಗ್ಗದಲ್ಲಿ ಮಾಣಿಕ್ಯ ಪ್ರಶಸ್ತಿ ಹಾಗೂ ಜನ್ನ ಕಾವ್ಯ ಪ್ರಶಸ್ತಿ ಪ್ರದಾನ ಮತ್ತು ರಾಜ್ಯ ಮಟ್ಟದ ಕವಿಗೋಷ್ಠಿ | ಸೆಪ್ಟೆಂಬರ್ 28
    Next Article ಬಿ.ಎಂ.ಶ್ರೀ. ಪ್ರತಿಷ್ಠಾನದಲ್ಲಿ ‘ಹಾಡು ಹೊಸ ಹಾಡು’ ಭಾವಗೀತೆಗಳ ಗಾಯನ ಸರಣಿ ಕಾರ್ಯಕ್ರಮ | ಸೆಪ್ಟೆಂಬರ್ 28
    roovari

    Comments are closed.

    Related Posts

    ರಾಯಚೂರು ಕನ್ನಡ ಭವನದಲ್ಲಿ ‘ಮಹಿಳಾ ಪರಿಷತ್’ ಇದರ ಉದ್ಘಾಟನಾ ಕಾರ್ಯಕ್ರಮ | ಜನವರಿ 04

    January 1, 2026

    ಕರಾವಳಿ ಉತ್ಸವದಲ್ಲಿ ಕರ್ನಾಟಕ ಯಕ್ಷ ಭಾರತಿ ತಂಡದಿಂದ ತಾಳಮದ್ದಳೆ

    January 1, 2026

    ಜಾನಪದ ಅಕಾಡೆಮಿಯ ಜಾನಪದ ತಜ್ಞ, ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಕಟ

    January 1, 2026

    ರಿಶಲ್ ಬ್ರಿಟ್ನಿ ಫೆರ್ನಾಂಡಿಸ್‌ಗೆ ‘ದೇಶ್ ರತ್ನಾ’ ಪ್ರಶಸ್ತಿ

    December 31, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.