Subscribe to Updates

    Get the latest creative news from FooBar about art, design and business.

    What's Hot

    ಮೈಸೂರಿನ ‘ವಸುಂಧರೋತ್ಸವ’ದಲ್ಲಿ ಭರತನಾಟ್ಯ ಪ್ರದರ್ಶನ

    November 28, 2025

    ಯಕ್ಷಾಂಗಣ ತಾಳಮದ್ದಳೆ ಸಪ್ತಾಹದಲ್ಲಿ ತಾಳಮದ್ದಳೆ ಅರ್ಥಧಾರಿ ಕಾಂತ ರೈ ಸಂಸ್ಮರಣೆ

    November 28, 2025

    ಕುವೆಂಪು ರಾಷ್ಟ್ರೀಯ ಪ್ರಶಸ್ತಿಗೆ ಕೊಂಕಣಿ ಮತ್ತು ಮರಾಠಿ ಬರಹಗಾರ ಮಹಾಬಲೇಶ್ವರ ಸೈಲ್ ಆಯ್ಕೆ

    November 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನಲ್ಲಿ ಶ್ರೀ ರಾಮಾಯಣ ದರ್ಶನಂ ತಾಳಮದ್ದಳೆ ಸಪ್ತಾಹದ ಉದ್ಘಾಟನೆ  
    Yakshagana

    ಪುತ್ತೂರಿನಲ್ಲಿ ಶ್ರೀ ರಾಮಾಯಣ ದರ್ಶನಂ ತಾಳಮದ್ದಳೆ ಸಪ್ತಾಹದ ಉದ್ಘಾಟನೆ  

    August 31, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ 55ರ ಸಂಭ್ರಮ ಇದರ ಅಂಗವಾಗಿ, ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ ಕಲ್ಲಮೆ ಇಲ್ಲಿ ನಡೆಯಲಿರುವ ಶ್ರೀ ರಾಮಾಯಣ ದರ್ಶನಂ ತಾಳಮದ್ದಳೆ ಸಪ್ತಾಹದ ಪ್ರಯುಕ್ತ ದಿನಾಂಕ 26-08-2023ರಂದು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ವತಿಯಿಂದ ‘ಶ್ರೀರಾಮ ವನ ಗಮನ’ ಎಂಬ ತಾಳಮದ್ದಳೆ ನಡೆಯಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ಲಕ್ಷ್ಮೀನಾರಾಯಣ ಭಟ್ ಬಟ್ಯಮೂಲೆ, ಶ್ರೀ ಗಿರೀಶ್ ಮುಳಿಯಾಲ, ಚಂಡೆ ಮದ್ದಳೆಗಳಲ್ಲಿ ಶ್ರೀ ಪದ್ಯಾಣ ಶಂಕರನಾರಾಯಣ ಭಟ್, ಶ್ರೀ ಮುರಳೀಧರ ಕಲ್ಲೂರಾಯ ಕುಂಜೂರುಪಂಜ, ಶ್ರೀ ಅಚ್ಯುತ ಪಾಂಗಣ್ಣಾಯ ಕೋಡಿಬೈಲು ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಭಾಸ್ಕರ ಬಾರ್ಯ (ದಶರಥ), ಶ್ರೀ ಶ್ರೀಧರ್ ರಾವ್ ಕುಂಬ್ಳೆ (ಕೈಕೇಯಿ), ಶ್ರೀ ಪಕಳಕುಂಜ ಶ್ಯಾಮ್ ಭಟ್ (ಮಂಥರೆ), ಶ್ರೀ ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀ ರಾಮ) ಮತ್ತು ಶ್ರೀ ದುಗ್ಗಪ್ಪ ನಡುಗಲ್ಲು (ಲಕ್ಷ್ಮಣ) ಸಹಕರಿಸಿದರು.

    ಶ್ರೀ ದೇವಳದ ವ್ಯವಸ್ಥಾಪಕರಾದ ಡಾ. ಸೀತಾರಾಮ ಭಟ್ ಕಲ್ಲಮೆ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮುಖ್ಯ ಅತಿಥಿ ಕೈಯೂರು ನಾರಾಯಣ ಭಟ್ ಶುಭ ಕೋರಿದರು. ಸಂಘದ ಸಂಚಾಲಕ ಶ್ರೀ ಭಾಸ್ಕರ ಬಾರ್ಯ ಸ್ವಾಗತಿಸಿ, ಕೋಶಾಧಿಕಾರಿ ಶ್ರೀ ದುಗ್ಗಪ್ಪ ನಡುಗಲ್ಲು ವಂದಿಸಿದರು. ಶ್ರೀ ಸುಧೀಂದ್ರ ಅಡಿಗ, ಶ್ರೀ ರಂಗನಾಥ ರಾವ್, ಅಚ್ಯುತ ಪಾಂಗಣ್ಣಾಯ ಕೋಡಿಬೈಲು, ಶ್ರೀ ಆನಂದ ಸವಣೂರು ಸಹಕರಿಸಿದರು. ಶ್ರೀ ವೇದವ್ಯಾಸ ರಾಮ ಕುಂಜ, ಅನುರಾಧ ಸೀತಾರಾಮ್ ಭಟ್, ಸ್ವರ್ಣಲತಾ ಕೆ.ಎನ್., ಅಧ್ಯಾಪಕಿ ವಿಜಯಲಕ್ಷ್ಮಿ, ರಾಜಗೋಪಾಲ್ ಭಟ್ ಬನ್ನೂರು ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಪ್ರಾಯೋಜಕರಾದ ಶ್ರೀ ಗುಂಪೆ ಕೇಶವ ಭಟ್ ಅವರನ್ನು ಶಾಲು ಹೊದಿಸಿ ಗೌರವಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ಸದ್ಗುರು ಸಂಗೀತ ಪಾಠ ಶಾಲೆಯಿಂದ ನಾದ ನೃತ್ಯ ಸಂಭ್ರಮ
    Next Article ಕೊಯಿಲ ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ-ಯಕ್ಷ ಶಿಕ್ಷಣಕ್ಕೆ ಚಾಲನೆ
    roovari

    Add Comment Cancel Reply


    Related Posts

    ಯಕ್ಷಾಂಗಣ ತಾಳಮದ್ದಳೆ ಸಪ್ತಾಹದಲ್ಲಿ ತಾಳಮದ್ದಳೆ ಅರ್ಥಧಾರಿ ಕಾಂತ ರೈ ಸಂಸ್ಮರಣೆ

    November 28, 2025

    ಸಾಲಿಗ್ರಾಮ ಮಕ್ಕಳ ಮೇಳದ ‘ಉಡುಪ ಹಂದೆ ಪ್ರಶಸ್ತಿ’ ಪ್ರಕಟ

    November 28, 2025

    ಯಕ್ಷಮಿತ್ರರು ಸಂಘಟನೆಯಿಂದ ವಿಂಶತಿ ಕಾರ್ಯಕ್ರಮ

    November 28, 2025

    ತಾಳಮದ್ದಳೆ ಸಪ್ತಾಹದಲ್ಲಿ ದಿ. ಎ.ಕೆ. ನಾರಾಯಣ ಶೆಟ್ಟಿ, ಮಹಾಬಲ ಶೆಟ್ಟಿ ಸಂಸ್ಮರಣೆ

    November 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.