Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ವಠಾರದಲ್ಲಿ ‘ಶ್ರೀದೇವಿ ಮಹಿಷಮರ್ದಿನಿ’ ಯಕ್ಷಗಾನ ಬಯಲಾಟ
    Yakshagana

    ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ವಠಾರದಲ್ಲಿ ‘ಶ್ರೀದೇವಿ ಮಹಿಷಮರ್ದಿನಿ’ ಯಕ್ಷಗಾನ ಬಯಲಾಟ

    September 23, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ವಠಾರದಲ್ಲಿ ಶ್ರೀಕಾಳಿಕಾಂಬಾ ವಿನಾಯಕ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಂದ ‘ಶ್ರೀದೇವಿ ಮಹಿಷಮರ್ದಿನಿ’ ಎನ್ನುವ ಯಕ್ಷ ಕಥಾನಕವನ್ನು ದಿನಾಂಕ 17-09-2023ರ ಶ್ರೀವಿಶ್ವಕರ್ಮ ಪೂಜಾ ಮಹೋತ್ಸವದ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು.
    ಯಕ್ಷ ಗುರು ಡಾ. ದಿನಕರ್ ಪಚ್ಚನಾಡಿಯವರ ನಿರ್ದೇಶನದಲ್ಲಿ ಪ್ರದರ್ಶಿಸಲ್ಪಟ್ಟ ಈ ಪ್ರಸಂಗದ ಹಿಮ್ಮೇಳದಲ್ಲಿ ಭಾಗವತರಾಗಿ ಭವ್ಯಶ್ರೀ ಮಂಡೆಕೋಲು ಅತ್ಯುತ್ತಮ ಸ್ವರ ಮಾಧುರ್ಯದ ಮೂಲಕ ಅಪಾರ ಜನ ಮೆಚ್ಚುಗೆಗೆ ಪಾತ್ರರಾದರು. ಹಾಗೆಯೇ ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಪ್ರದರ್ಶನವನ್ನು ನೀಡಿದರೂ ಕೂಡ ಯಾವುದೇ ವೃತ್ತಿಪರರಿಗೆ ಕಡಿಮೆ ಇಲ್ಲದಂತೆ ತಮ್ಮ ಆಂಗಿಕ – ವಾಚಿಕ-ಶಾರೀರಿಕ ಅಭಿನಯದ ಮೂಲಕ ಕಲಾಸಕ್ತರ
    ಮನಸೂರೆಗೊಂಡರು. ಈ ಸಂದರ್ಭದಲ್ಲಿ ಯಕ್ಷ ತರಬೇತಿ ನೀಡಿದ ದಿನಕರ್ ಪಚ್ಚನಾಡಿಯವರನ್ನು ಅಭಿನಂದಿಸಲಾಯಿತು. ಶ್ರೀಕಾಳಿಕಾಂಬಾ ವಿನಾಯಕ ದೇವಸ್ಥಾನದ ಸದಸ್ಯರಾದ ಕೆ. ಕೆ. ವಿಠ್ಠಲ್ ಹಾಗೂ ಜಯಕರ ಟಿ ಉಪಸ್ಥಿತರಿದ್ದರು. ಯಕ್ಷಗಾನ ಕೇಂದ್ರದ ಅಧ್ಯಕ್ಷರಾದ ಶ್ರೀ ಗುರುರಾಜ್ ಕೆ ಜೆ, ಸಂಚಾಲಕರಾದ ನಾಗರಾಜ್ ಆಚಾರ್ ಹಾಗೂ ಕಾರ್ಯದರ್ಶಿ ಪ್ರದೀಪ್ ಆಚಾರ್ಯ ಉರ್ವ ಉಪಸ್ಥಿತರಿದ್ದು ಮಕ್ಕಳಿಗೆ ಮಾರ್ಗದರ್ಶನವನ್ನು ನೀಡಿದರು. ಸಂತೋಷ್ ಪಂಜಿಕಲ್ ಸ್ವಾಗತಿಸಿ, ಬಿ.ಜಿ ರಮೇಶ್ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿಗೆ ಹಸ್ತಪ್ರತಿಗಳ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 12
    Next Article ಕೊಣಾಜೆ ಅಂಬುರುಹ ಯಕ್ಷ ಪ್ರತಿಷ್ಠಾನದಲ್ಲಿ ‘ಲೋಕಾಭಿರಾಮ’ ಕೃತಿ ಲೋಕಾರ್ಪಣೆ
    roovari

    Add Comment Cancel Reply


    Related Posts

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07

    June 5, 2025

    ಸರಯೂ ಸಪ್ತಾಹದಲ್ಲಿ ಸಂಧ್ಯಾ ರಾವ್ ಇವರಿಗೆ ಸನ್ಮಾನ

    June 5, 2025

    ಇಟಗುಳಿಯಲ್ಲಿ ‘ಬ್ರಹ್ಮ ಕಪಾಲ’ ಪೌರಾಣಿಕ ಯಕ್ಷಗಾನ ಪ್ರದರ್ಶನ | ಜೂನ್ 07

    June 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.