Subscribe to Updates

    Get the latest creative news from FooBar about art, design and business.

    What's Hot

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025

    ಕಲಾಕುಲ್ ಕೊಂಕಣಿ ನಾಟಕ ರೆಪರ್ಟರಿಗೆ ಅರ್ಜಿ ಆಹ್ವಾನ

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀಪತಿ ತಂತ್ರಿಗಳ ‘ಭಾರತೀಯ ದರ್ಶನಗಳ ಇತಿಹಾಸ – ಒಂದು ಮಾನವ ಶಾಸ್ತ್ರೀಯ ವಿಮರ್ಶೆ’ ಕೃತಿ ಲೋಕಾರ್ಪಣೆ
    Literature

    ಶ್ರೀಪತಿ ತಂತ್ರಿಗಳ ‘ಭಾರತೀಯ ದರ್ಶನಗಳ ಇತಿಹಾಸ – ಒಂದು ಮಾನವ ಶಾಸ್ತ್ರೀಯ ವಿಮರ್ಶೆ’ ಕೃತಿ ಲೋಕಾರ್ಪಣೆ

    March 4, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    04 ಮಾರ್ಚ್ 2023, ಮಂಗಳೂರು: ಜ್ಞಾನವೇ ಎಲ್ಲ ಧರ್ಮಗಳ ಸಾರ: ಪ್ರೊ.ಯಡಪಡಿತ್ತಾಯ

    ಮಂಗಳಗಂಗೋತ್ರಿ: ಭಾರತೀಯ ದರ್ಶನಗಳು ಬದುಕಿನ ಮಾನಸಿಕ, ಬೌದ್ದಿಕ, ಅಧ್ಯಾತ್ಮಿಕ ವಿಕಸನದ ಜೊತೆಗೆ ಸಾಮಾಜಿಕ ಸಂಸ್ಕಾರವನ್ನು ಉನ್ನತಿಗೇರಿಸುವ ಜ್ಞಾನ ಪರಂಪರೆಯನ್ನು ಹೊಂದಿದೆ. ಜ್ಞಾನಕ್ಕೆ ಯಾವುದೇ ಮಿತಿಯಿಲ್ಲ, ಗಡಿಗಳಿಲ್ಲ, ಜ್ಞಾನ ಎಲ್ಲಕ್ಕಿಂತ ಮಿಗಿಲು ಎಂಬುದು ಜಗತ್ತಿನ ಎಲ್ಲ ಧರ್ಮಗಳ ಸಾರವಾಗಿದೆ. ಭಾರತೀಯ ವೇದೊಪನಿಷತ್ತುಗಳು ಮತ್ತು ದರ್ಶನಗಳು ಜಾಗತಿಕ ಮನ್ನಣೆಗೆ ಪಾತ್ರವಾಗಿದೆ ಎಂದು ಮಂಗಳೂರು ವಿವಿಯ ಕುಲಪತಿ ಪ್ರೊ. ಪಿ.ಎಸ್ ಯಡಪಡಿತ್ತಾಯ ಹೇಳಿದರು. ಅವರು ಸೋಮವಾರ ಮಂಗಳೂರು ವಿವಿ ಪ್ರಸಾರಾಂಗ ಪ್ರಕಟಿಸಿದ ಸಮಾಜಶಾಸ್ತ್ರಜ್ಞ ಉಡುಪಿ ಶ್ರೀಪತಿ ತಂತ್ರಿ ಇವರ ‘ಭಾರತೀಯ ದರ್ಶನಗಳ ಇತಿಹಾಸ – ಒಂದು ಮಾನವ ಶಾಸ್ತ್ರೀಯ ವಿಮರ್ಶೆ’ ಎಂಬ ಕೃತಿಯನ್ನು ಸಿಂಡಿಕೇಟ್ ಸಭಾಂಗಣದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು. ಶ್ರೀಪತಿ ತಂತ್ರಿಯವರದು ವಿದ್ವತ್ಪೂರ್ಣ ನೇರ ನಡೆ ನುಡಿಯ ವ್ಯಕ್ತಿತ್ವ . ಚಿಕಿತ್ಸಕ ದೃಷ್ಟಿಕೋನದ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಭಾರತೀಯ ದರ್ಶನಗಳ ಇತಿಹಾಸದ ಕುರಿತ ಅವರ ಸಂಶೋಧನೆಯು ಮಂಗಳೂರು ವಿವಿಯ ಡಿಲಿಟ್ ಪದವಿ ಗೌರವಕ್ಕೆ ಪಾತ್ರವಾಗಿದ್ದು ಅದೀಗ ಪುಸ್ತಕ ರೂಪದಲ್ಲಿ ಪ್ರಸಾರಾಂಗದಿಂದ ಪ್ರಕಟಗೊಳ್ಳುತ್ತಿರುವುದು ಅಭಿನಂದನಾರ್ಹ ಎಂದರು.

    ಮಂಗಳೂರು ವಿವಿ ಕುಲಸಚಿವ ಪ್ರೊ.ಕಿಶೋರ್ ಕುಮಾರ್ ಸಿ.ಕೆ ಮಾತನಾಡಿ ಮನುಷ್ಯನ ಬದುಕಿಗೆ ನಂಬಿಕೆಗಳೇ ಮುಖ್ಯ. ನಂಬಿಕೆಗಳಿಂದಲೇ ಜಗತ್ತು ನಡೆಯುತ್ತದೆ. ಆ ನಂಬಿಕೆಗಳ ವೈಜ್ಞಾನಿಕ ಅರಿವು ಹೊಸ ದರ್ಶನಗಳನ್ನು ನಮ್ಮ ಮುಂದಿಡುತ್ತದೆ. ಶ್ರೀಪತಿ ತಂತ್ರಿಗಳು ಭಾರತೀಯ ಪರಂಪರೆಯ ಇಂತಹ ದರ್ಶನಗಳ ಕುರಿತು ಈ ಕೃತಿಯಲ್ಲಿ ಸೂಕ್ಷ್ಮ ಅವಲೋಕನ ಮಾಡಿದ್ದಾರೆ ಎಂದು ಹೇಳಿದರು.

    ಮಂಗಳೂರು ವಿವಿಯ ಹಣಕಾಸು ಅಧಿಕಾರಿ ಪ್ರೊ. ಸಂಗಪ್ಪ, ಯೋಗ ವಿಜ್ಞಾನ ವಿಭಾಗದ ಅಧ್ಯಕ್ಷರಾದ ಪ್ರೊ. ಕೆ. ಕೃಷ್ಣಶರ್ಮ, ಪ್ರಸಾರಾಂಗದ ನಿರ್ದೇಶಕ ಪ್ರೊ.ಸೋಮಣ್ಣ, ಸಹಾಯಕ ನಿರ್ದೇಶಕ ಡಾ. ಧನಂಜಯ ಕುಂಬ್ಳೆ ಮತ್ತು ಪ್ರಸಾರಾಂಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleರಂಗ ಹಬ್ಬದ ರಂಗಸ್ಥಳ ರಂಗೇರಿಸಿದ ಏಕಲವ್ಯ ಯಕ್ಷಗಾನ – ಪೂರ್ಣಿಮಾ ಜನಾರ್ದನ ಕೊಡವೂರು (ವಿಮರ್ಶೆ)
    Next Article 6ನೇ ದಿನದ ಸುಮನಸ ರಂಗ ಹಬ್ಬ – ಕಾಪ – ತುಳು ನಾಟಕ
    roovari

    Add Comment Cancel Reply


    Related Posts

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಶಿವಮೊಗ್ಗದಲ್ಲಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಯುವ ಸಾಹಿತಿ’ | ಮೇ 10  

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.