Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗಭೂಮಿ (ರಿ.) ಉಡುಪಿ ಆಯೋಜಿಸುವ 44ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ 2023 | ಕೊನೆಯ ದಿನಾಂಕ ಅಕ್ಟೋಬರ್ 21
    Competition

    ರಂಗಭೂಮಿ (ರಿ.) ಉಡುಪಿ ಆಯೋಜಿಸುವ 44ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ 2023 | ಕೊನೆಯ ದಿನಾಂಕ ಅಕ್ಟೋಬರ್ 21

    September 27, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ರಾಜ್ಯದ ಹೆಸರಾಂತ ಹವ್ಯಾಸಿ ನಾಟಕ ಸಂಸ್ಥೆಯಾದ ‘ರಂಗಭೂಮಿ (ರಿ.) ಉಡುಪಿ’ ತನ್ನ 59ನೇ ವರ್ಷದಲ್ಲಿ, 44ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯನ್ನು ಆಯೋಜಿಸುತ್ತಿದೆ. ದಿ. ಡಾ. ಟಿ.ಎಂ.ಎ. ಪೈ, ದಿ. ಎಸ್.ಎಲ್. ನಾರಾಯಣ ಭಟ್ ಮತ್ತು ದಿ.ಮಲ್ಪೆ ಮಧ್ವರಾಜ್ ಸ್ಮಾರಕ ನಡೆಯಲಿರುವ ಈ ಸ್ಪರ್ಧೆಯು 2023ರ ನವಂಬರ್ ತಿಂಗಳ 4ನೇ ವಾರದಲ್ಲಿ ನಡೆಯಲಿದೆ.
    ಕರ್ನಾಟಕ ರಾಜ್ಯದ (ಕಾಸರಗೋಡು ಸಹಿತ) ಯಾವುದೇ ಪ್ರದೇಶದ ಹವ್ಯಾಸಿ ನಾಟಕ ತಂಡಕ್ಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಕನಿಷ್ಟ 1 ಘಂಟೆ 30 ನಿಮಿಷ ಹಾಗೂ ಗರಿಷ್ಠ 2 ಘಂಟೆ 15 ನಿಮಿಷ ಅವಧಿಯ ಸಾಮಾಜಿಕ, ಐತಿಹಾಸಿಕ, ಪೌರಾಣಿಕ, ಜಾನಪದ ಅಥವಾ ಯಾವುದೇ ಪ್ರಕಾರದ ನಾಟಕ ಪ್ರದರ್ಶನ ಮಾಡಬಹುದು. ಈ ಬಾರಿ ಸ್ಪರ್ಧೆಗೆ ಗರಿಷ್ಠ 12 ತಂಡಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು.
    ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳೊಂದಿಗೆ ಅನುಕ್ರಮವಾಗಿ ರೂ. 35,000/-, ರೂ.25,000/- ರೂ.15,000/- ನಗದು ಬಹುಮಾನಗಳನ್ನು ಹಾಗೂ ಪರ್ಯಾಯ ಫಲಕಗಳನ್ನು ನೀಡಲಾಗುವುದು. ಶ್ರೇಷ್ಠ ನಿರ್ದೇಶನ, ನಟ, ನಟಿ, ಸಂಗೀತ, ಬೆಳಕು, ರಂಗಪರಿಕರ, ಪ್ರಸಾಧನ, ಬಾಲನಟನೆ, ಹಾಸ್ಯ ಪಾತ್ರಗಳಿಗೂ ನಗದು ಬಹುಮಾನ ಹಾಗೂ ಶಾಶ್ವತ ಫಲಕಗಳನ್ನು ನೀಡಲಾಗುವುದು, ಸ್ಪರ್ಧೆಯಲ್ಲಿ ಅತ್ಯಂತ ಶಿಸ್ತುಬದ್ಧವಾಗಿದ್ದ ತಂಡಕ್ಕೆ ವಿಶೇಷ ಪುರಸ್ಕಾರವಿರುವುದು.
    ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳಿಗೆ ಉಚಿತ ಊಟ, ವಸತಿ ಜೊತೆಗೆ ಉಡುಪಿಗೆ ಹೋಗಿ ಬರುವ ಒಟ್ಟು ದೂರಕ್ಕೆ ಕಿಲೋ ಮೀಟರಿಗೆ ರೂ. 15/ ರಂತೆ ಕನಿಷ್ಠ ರೂ. 1500/- ಹಾಗೂ ಗರಿಷ್ಠ ರೂ. 17000/- ಪ್ರಯಾಣ ವೆಚ್ಚ ನೀಡಲಾಗುವುದು. ಇದರೊಂದಿಗೆ ಪ್ರತೀ ತಂಡಕ್ಕೆ ಗೌರವಧನವಾಗಿ ರೂ. 5000/-ವನ್ನು ನೀಡಲಾಗುವುದು.
    ಭರ್ತಿ ಮಾಡಿದ ಪ್ರವೇಶ ಪತ್ರ ಸ್ವೀಕರಿಸಲು 2023ರ ಅಕ್ಟೋಬರ್ 21 ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ತಂಡಗಳು ಪ್ರವೇಶ ಪತ್ರಕ್ಕಾಗಿ ಪ್ರದೀಪ್‌ ಚಂದ್ರ ಕುತ್ಪಾಡಿ, ಪ್ರಧಾನ ಕಾರ್ಯದರ್ಶಿ, ‘ರಂಗಭೂಮಿ’, ಕುತ್ಪಾಡಿ, ಉಡುಪಿ-574118 ಮೊಬೈಲ್ ಸಂಖ್ಯೆ : 9448952847(ಪ್ರದೀಪ್‌ಚಂದ್ರ ಕುತ್ಪಾಡಿ) ಇವರನ್ನು ಸಂಪರ್ಕಿಸಬೇಕು ಅಥವಾ ಉಪಾಧ್ಯಕ್ಷರಾದ ಭಾಸ್ಕರ ರಾವ್ ಕಿದಿಯೂರು (9844742166) ಅಥವಾ ಜತೆ ಕಾರ್ಯದರ್ಶಿಗಳಾದ ಶ್ರೀಪಾದ ಹೆಗಡೆ (9845111449) ಹಾಗೂ ವಿವೇಕಾನಂದ ಎನ್. (9449367595) ಇವರನ್ನು ಸಂಪರ್ಕಿಸಬಹುದು.

    ಪ್ರವೇಶ ಪತ್ರಕ್ಕಾಗಿ ಕೆಳಗಿನ ಲಿಂಕ್ ಬಳಸಿ
    Nataka Sparde Application Form 2023 final

    Share. Facebook Twitter Pinterest LinkedIn Tumblr WhatsApp Email
    Previous Articleಜನ ಮನ ಮೆಚ್ಚಿದ ಬೆಂಗಳೂರು ಯಕ್ಷದೇಗುಲದ ‘ಕಂಸವಧೆ’
    Next Article ಸುರತ್ಕಲ್ ನಲ್ಲಿ ಮಣಿ ಕೃಷ್ಣಸ್ವಾಮಿ ಅಕಾಡಮಿಯ ‘ಉದಯರಾಗ – 45’  | ಅಕ್ಟೋಬರ್ 01ರಂದು
    roovari

    Add Comment Cancel Reply


    Related Posts

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ವಿಶ್ವ ಕನ್ನಡ ಜಾನಪದ ಪರಿಷತ್ ವತಿಯಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10 

    May 29, 2025

    ‘ಕವನ ವಾಚನ ವಿಡಿಯೋ ಸ್ಪರ್ಧೆ 2025’ | ಕೊನೆಯ ದಿನಾಂಕ ಜೂನ್ 15

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.