Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಪುರಭವನದಲ್ಲಿ ‘ರಾಜ್ಯಮಟ್ಟದ ವಚನ ಸಾಹಿತ್ಯ ಸಮ್ಮೇಳನ’ | ಜನವರಿ 04
    Book Release

    ಮಂಗಳೂರಿನ ಪುರಭವನದಲ್ಲಿ ‘ರಾಜ್ಯಮಟ್ಟದ ವಚನ ಸಾಹಿತ್ಯ ಸಮ್ಮೇಳನ’ | ಜನವರಿ 04

    December 31, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅಕ್ಕ ಮಹಾದೇವಿ ವೀರಶೈವ ಮಹಿಳಾ ಸಂಘ (ರಿ.) ಇದರ ವತಿಯಿಂದ ‘ರಾಜ್ಯಮಟ್ಟದ ವಚನ ಸಾಹಿತ್ಯ ಸಮ್ಮೇಳನ’ವನ್ನು ದಿನಾಂಕ 04 ಜನವರಿ 2025ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಡಾ. ಅರವಿಂದ್ ಜತ್ತಿ ಇವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ.

    ‘ವಚನ ಸಾಹಿತ್ಯ ದಿಬ್ಬಣ’ವು ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿದ್ದು, ಆಡಳಿತ ಮೊಕ್ತೇಸರರಾದ ಶ್ರೀ ರಾಘವೇಂದ್ರ ಶಾಸ್ತ್ರಿ ಉದ್ಘಾಟನೆ ಮಾಡಲಿರುವರು. ಅನುಭವ ಸಂಗಮ ವೇದಿಕೆಯಲ್ಲಿ ಬೆಳಿಗ್ಗೆ 9-30 ಗಂಟೆಗೆ ಶ್ರೀ ಸೂರ್ಯ ಬಸಪ್ಪಕಡಿ ಇವರಿಂದ ವಚನ ಗಾಯನ ಪ್ರಸ್ತುತಗೊಳ್ಳಲಿದೆ. ಅಲ್ಲಮಪ್ರಭು ವೇದಿಕೆಯಲ್ಲಿ ಸಮೂಹ ವಚನ ಗಾಯನ ಸ್ಪರ್ಧೆ ಮತ್ತು ಸಮೂಹ ವಚನ ನೃತ್ಯ ಸ್ಪರ್ಧೆ ನಡೆಯಲಿದೆ. ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬೆಳಗ್ಗೆ 10-00 ಗಂಟೆಗೆ ಧ್ವಜಾರೋಹಣ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ, ವಸ್ತು ಪ್ರದರ್ಶನ ಉದ್ಘಾಟನೆ, ವಸ್ತು ಮಾರಾಟ ಮಳಿಗೆ ಉದ್ಘಾಟನೆ, ಸಾಕ್ಷ್ಯ ಚಿತ್ರ ಉದ್ಘಾಟನೆ ನಡೆಯಲಿದೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಹಾಗೂ ಸಂಘಗಳನ್ನು ಸನ್ಮಾನಿಸಲಾಗುವುದು.

    ಅಪರಾಹ್ನ 1-30 ಗಂಟೆಗೆ ಗೋಷ್ಠಿ -1ರಲ್ಲಿ ‘ಆಧುನಿಕ ವಚನಗೋಷ್ಠಿ’ಯಲ್ಲಿ ಎಮಿರೇಟ್ಸ್ ಪ್ರಾಧ್ಯಾಪಕರಾದ ಪ್ರೊ. ವಿಜಯಾದೇವಿ, ಹಿರಿಯ ಲೇಖಕಿ ಡಾ. ಮೀನಾಕ್ಷಿ ರಾಮಚಂದ್ರ ಮತ್ತು ಹಿರಿಯ ಲೇಖಕಿ ಡಾ. ಅರುಣಾ ನಾಗರಾಜ್ ವಾಚನ ಗೈಯಲಿರುವರು. ಗೋಷ್ಠಿ -2ರಲ್ಲಿ ‘ಚಿಂತನ ಗೋಷ್ಠಿ’ಯಲ್ಲಿ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ ಇವರು ‘ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ಅನುಸಂದಾನ’ ಹಾಗೂ ಹಿರಿಯ ಇತಿಹಾಸ ತಜ್ಞರಾದ ಡಾ. ಪುಂಡಿಕಾಯಿ ಗಣಪತಿ ಭಟ್ ಇವರು ‘ತುಳುನಾಡಿನಲ್ಲಿ ವೀರಶೈವ ಪರಂಪರೆ ಒಂದು ಐತಿಹಾಸಿಕ ನೋಟ’ ಎಂಬ ವಿಷಯದ ಪ್ರಸ್ತುತಿ ಮಾಡಲಿರುವರು. ಗೋಷ್ಠಿ -3ರಲ್ಲಿ ‘ವಚನ ಸಾಹಿತ್ಯ ಅವಲೋಕನ’ದಲ್ಲಿ ಡಾ. ವಚನ ಕುಮಾರ ಸ್ವಾಮಿ ಇವರು ‘ಕಲ್ಯಾಣ ಕ್ರಾಂತಿ ಕಥನ’ ಹಾಗೂ ಡಾ. ಜ್ಯೋತಿ ಚೇಳಾಯ್ರು ಇವರು ‘ಫ.ಗು. ಹಳಕಟ್ಟಿ – ವಚನದ ಬೆಳಕು’ ಎಂಬ ವಿಷಯದ ಪ್ರಸ್ತುತಿ ನೀಡಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಜಾನಪದ ಗಾಯಕ ಮತ್ತು ಸಂಗೀತ ನಿರ್ದೇಶಕ ಕೆ. ಯುವರಾಜ್ ಶಿವಮೊಗ್ಗ ಮತ್ತು ಸಿ.ಎ. ಅಮೂಲ್ಯ ಮಲ್ಲಿಕಾರ್ಜುನ್ ಇವರಿಂದ ‘ವಚನ ಗಾನ ವೈಭವ’, ಬಳಿಕ ಸಮಾರೋಪ ಸಮಾರಂಭ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Article‘ಕನಸು ಕಾರ್ತಿಕ್ ಯುವ ರಂಗ ಪುರಸ್ಕಾರ’ಕ್ಕೆ ರಂಗನಟ ಭುವನ್ ಮಣಿಪಾಲ್ ಆಯ್ಕೆ
    Next Article ನೃತ್ಯ ವಿಮರ್ಶೆ | ನೃತ್ಯ ಕಲಾವಿದರ ಸರ್ವತೋಮುಖ ಬೆಳವಣಿಗೆ ‘ಸಾಧನ ಸಂಗಮ’ದ ಕೈಂಕರ್ಯ
    roovari

    Add Comment Cancel Reply


    Related Posts

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025

    ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ದತ್ತಿನಿಧಿ ಕಾರ್ಯಕ್ರಮ | ಮೇ 31

    May 28, 2025

    ಉತ್ತರ ಕರ್ನಾಟಕ ಲೇಖಕಿಯರ ಸಂಘದ ಪ್ರಶಸ್ತಿ ಪ್ರಕಟ

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.