Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಹಿಳಾ ಕಥಾ ಸ್ಪರ್ಧೆಗೆ ಕತೆಗಳ ಆಹ್ವಾನ | ಕೊನೆಯ ದಿನ ಏಪ್ರಿಲ್ 30
    Competition

    ಮಹಿಳಾ ಕಥಾ ಸ್ಪರ್ಧೆಗೆ ಕತೆಗಳ ಆಹ್ವಾನ | ಕೊನೆಯ ದಿನ ಏಪ್ರಿಲ್ 30

    April 3, 2024Updated:April 4, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕನ್ನಡ ಸಂಘರ್ಷ ಸಮಿತಿಯು ಖ್ಯಾತ ವೈದ್ಯೆ, ಹೆಸರಾಂತ ಕಥೆಗಾರ್ತಿಯಾಗಿದ್ದ ಡಾ. ಅನುಪಮಾ ನಿರಂಜನ ಅವರ ಹುಟ್ಟುಹಬ್ಬದ ಅಂಗವಾಗಿ ಉದಯೋನ್ಮಖ ಕಥೆಗಾರ್ತಿಯರಿಗೆ ಮಹಿಳಾ ಕಥಾ ಸ್ಪರ್ಧೆ ಆಯೋಜಿಸಿದೆ. ಇದುವರೆಗೂ ಒಂದೂ ಕಥಾ ಸಂಕಲನ ಪ್ರಕಟಿಸದೆ ಇರುವವರು ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಕಥೆಯು ಸ್ವಂತ ರಚನೆಯಾಗಿದ್ದು, ಮಹಿಳಾ ಕೇಂದ್ರಿತ ಕಥಾವಸ್ತು ಆಗಿರಬೇಕು. ಸ್ಪರ್ಧೆಗೆ ಕಳುಹಿಸುವ ಕಥೆಯು ಈ ಮೊದಲು ಎಲ್ಲೂ ಪ್ರಕಟವಾಗಿರಬಾರದು. 1200 ಪದಗಳನ್ನು ಮೀರದ, ಅಥವಾ ಎ4 ಅಳತೆಯ ಕಾಗದದಲ್ಲಿ 5 ಪುಟಗಳು ಮೀರದಂತೆ  ಹಾಳೆಯ ಒಂದೇ ಮಗ್ಗುಲಲ್ಲಿ ಕನ್ನಡದಲ್ಲಿ ಕೈಯಲ್ಲಿ ಬರೆದಿರಬಹುದು ಅಥವಾ ಡಿಟಿಪಿ ಮಾಡಿಸಿರಬಹುದು. ರೂ.200/-ಗಳ ಪ್ರವೇಶ ಶುಲ್ಕದೊಡನೆ (ಪ್ರವೇಶ ಶುಲ್ಕ ರೂ.200/-ಗಳನ್ನು ‘ಕನ್ನಡ ಸಂಘರ್ಷ ಸಮಿತಿ, ಉಳಿತಾಯ ಖಾತೆ ಸಂಖ್ಯೆ: 200300011051, IFSC CODE: HDFC0CSRCBL, ಬ್ಯಾಂಕ್: ಶ್ರೀರಾಮ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಮಲ್ಲೇಶ್ವರಂ’ ಖಾತೆಗೆ ಜಮಾ ಮಾಡಬಹುದಾಗಿದೆ) ದಿನಾಂಕ 30-04-2024ರೊಳಗೆ ತಲುವಂತೆ ಕಳುಹಿಕೊಡಬೇಕು. ತಡವಾಗಿ ಬಂದ ಕಥೆಯನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ. ಕಥೆಯನ್ನು ‘ಎ.ಎಸ್.‌ ನಾಗರಾಜಸ್ವಾಮಿ, ಅಧ್ಯಕ್ಷ, ಕನ್ನಡ ಸಂಘರ್ಷ ಸಮಿತ, ನಂ.3, 1ನೇ ತಿರುವು, 1ನೇ ಮುಖ್ಯ ರಸ್ತೆ, ಅನ್ನಪೂರ್ಣೇಶ್ವರಿ ಬಡಾವಣೆ, ಬೆಂಗಳೂರು-560 056’ ಈ ವಿಳಾಸಕ್ಕೆ  ಕಳುಹಿಸಿಕೊಡಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ  ಮೊಬೈಲ್ ಸಂಖ್ಯೆ 9739001410ಕ್ಕೆ ಸಂಪರ್ಕಿಸಬಹುದು.

    ಸ್ಪರ್ಧಿಯು ಪ್ರತ್ಯೇಕ ಹಾಳೆಯಲ್ಲಿ ಒಂದು ಇತ್ತೀಚಿನ ಭಾವಚಿತ್ರವನ್ನು ಲಗತ್ತಿಸಿ, ಹೆಸರು, ವಿಳಾಸ, ಮೊಬೈಲ್‌ ಸಂಖ್ಯೆಯೊಡನೆ “ಇದುವರೆಗೆ ನನ್ನ ಒಂದೂ ಕಥಾಸಂಕಲನ ಪ್ರಕಟವಾಗಿರುವುದಿಲ್ಲ, ಕಥೆಯು ನನ್ನ ಸ್ವಂತ ರಚನೆಯಾಗಿದ್ದು, ಅನುವಾದವಾಗಲಿ ಅಥವಾ ಬೇರೆ ಕಥೆಯ ನಕಲಾಗಲಿ ಅಲ್ಲ” ಎಂಬ ಸ್ವಯಂ ಘೋಷಣೆಗೆ ಸಹಿ ಮಾಡಿ, ಕಥೆಯ ಜೊತೆ ಕಳುಹಿಸಬೇಕು.

    ಪ್ರಥಮ ರೂ.2,500/, ದ್ವಿತೀಯ ರೂ.2,000/- ಹಾಗೂ ತೃತೀಯ ರೂ.1,500/- ಬಹುಮಾನ ನೀಡಲಾಗುವುದು. ಸಮಿತಿಯು ನೇಮಿಸುವ ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ತಾವು ಕಳುಹಿಸುವ ಕಥೆಗಳನ್ನು ವಾಪಸ್‌ ಕಳುಹಿಸಲಾಗುವುದಿಲ್ಲ. ಸಮಿತಿ ಈ ವಿಚಾರದಲ್ಲಿ ಯಾವುದೇ ಪತ್ರ ವ್ಯವಹಾರ ಮಾಡುವುದಿಲ್ಲ.

    Share. Facebook Twitter Pinterest LinkedIn Tumblr WhatsApp Email
    Previous Articleಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗ ಹಾಗೂ ಮೈಸೂರು ಅಸೋಸಿಯೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಬಂಗಾರ ಹಬ್ಬದ ದತ್ತಿ ಉಪನ್ಯಾಸ ಕಾರ್ಯಕ್ರಮ
    Next Article ಕಾಸರಗೋಡಿನಲ್ಲಿ ‘ಕೇರಳ -ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವ 2024’ ಏಪ್ರಿಲ್ 11
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ತುಳು ಸಾಂಸ್ಕೃತಿಕ ಉತ್ಸವ

    May 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.