Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನಲ್ಲಿ ‘ಕಥಾ ಸ್ಪರ್ಧೆ ಮತ್ತು ಕವನ ಸ್ಪರ್ಧೆ’ | ಕೊನೆಯ ದಿನಾಂಕ ಆಗಸ್ಟ್ 31
    Competition

    ಪುತ್ತೂರಿನಲ್ಲಿ ‘ಕಥಾ ಸ್ಪರ್ಧೆ ಮತ್ತು ಕವನ ಸ್ಪರ್ಧೆ’ | ಕೊನೆಯ ದಿನಾಂಕ ಆಗಸ್ಟ್ 31

    July 10, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ವಾಹಿನಿ ಕಲಾ ಸಂಘ, ದರ್ಬೆ, ಪುತ್ತೂರು ಇದರ ವತಿಯಿಂದ ಕಥಾಸ್ಪರ್ಧೆ-2024 ಮತ್ತು ಕವನ ಸ್ಪರ್ಧೆ-2024ನ್ನು ಆಯೋಜಿಸಲಾಗಿದೆ.

    ನಿಯಮಗಳು :
    1. ಬರಹಗಾರರು ತಮ್ಮ ಇಷ್ಟದ ವಿಷಯದಲ್ಲಿ ಕತೆ, ಕವನಗಳನ್ನು ಕಳುಹಿಸಬಹುದು.
    2. ಕತೆ, ಕವನಗಳು ಸ್ವತಂತ್ರವಾಗಿರಬೇಕು. ಅನುವಾದ, ಅನುಕರಣೆಗಳಿಗೆ ಅವಕಾಶವಿಲ್ಲ.
    3. ಕತೆ, ಕವನಗಳು ಈ ಹಿಂದೆ ಎಲ್ಲಿಯೂ ಪ್ರಕಟಗೊಂಡಿರಬಾರದು. ವಿದ್ಯುನ್ಮಾನ ಮಾಧ್ಯಮಗಳಲ್ಲೂ ಪ್ರಕಟಿಸಿರಬಾರದು.
    4. ಯುವ ಮತ್ತು ಸಾರ್ವಜನಿಕ ಎಂಬ ಎರಡು ವಿಭಾಗಗಳಲ್ಲಿ ಸ್ಪರ್ಧೆ ಏರ್ಪಡಿಸಲಾಗುವುದು. ಸ್ಪರ್ಧೆಗಳಲ್ಲಿ ದೇಶವಿದೇಶಗಳಲ್ಲಿ ವಾಸಿಸುವ ಕನ್ನಡಿಗರೆಲ್ಲರೂ ಭಾಗವಹಿಸಬಹುದು. 16ರಿಂದ 25 ವರ್ಷ ವಯೋಮಿತಿಯೊಳಗಿನ ವ್ಯಕ್ತಿಗಳು ಯುವ ವಿಭಾಗಕ್ಕೆ ಸ್ಪರ್ಧಿಸಬಹುದು. ಅವರು ವಿದ್ಯಾರ್ಥಿಗಳೇ ಆಗಿರಬೇಕು ಎಂದಿಲ್ಲ. ವಯಸ್ಸಿನ ಸ್ಪಷ್ಟೀಕರಣಕ್ಕಾಗಿ, ಶಾಲಾ ಪ್ರಮಾಣಪತ್ರ/ ಆಧಾರ್/ ಆದಾಯ ತೆರಿಗೆ ಪಾನ್ ಕಾರ್ಡ್ ಇವುಗಳಲ್ಲಿ ಒಂದರ ಪ್ರತಿಯನ್ನು ಲಗತ್ತಿಸಬೇಕು.
    5. ಕತೆಗಳು ಆರುನೂರು ಪದಗಳನ್ನು ಮೀರಬಾರದು. ಕವನಗಳು ಮೂವತ್ತು ಸಾಲುಗಳ ಒಳಗಿರಬೇಕು. ಕವನಗಳು ಛಂದೋಬದ್ಧವಾಗಿರಬೇಕು. ಷಟ್ಪದಿ, ಚೌಪದಿ, ಗಜಲ್, ಸಾನೆಟ್ ಇತ್ಯಾದಿಗಳಿಗೆ ಅವಕಾಶ ಇದೆ. ಚುಟುಕು, ಮುಕ್ತಕ, ಹನಿಗವನ, ಛಂದೋರಹಿತ ಕವಿತೆಗಳಿಗೆ ಅವಕಾಶವಿಲ್ಲ.
    6. ಕತೆ, ಕವನಗಳನ್ನು ಬರೆಯುವಾಗ ತಮ್ಮ ಹೆಸರು ವಿಳಾಸಗಳನ್ನು ಪ್ರತ್ಯೇಕವಾಗಿ ಬರೆದು ಲಗತ್ತಿಸಬೇಕು. ಇ ಮೇಲ್ ನಲ್ಲಿ ಕಳಿಸುವಾಗ ಕತೆ/ಕವನ ಮತ್ತು ಹೆಸರು ವಿಳಾಸಗಳನ್ನು ಬೇರೆ ಬೇರೆಯೇ “ಪಿಡಿಎಫ್/ವರ್ಡ್” ಫೈಲುಗಳಲ್ಲಿ ಬರೆಯಬೇಕು ಹಾಗೂ ಆ ಫೈಲುಗಳನ್ನು ಲಗತ್ತಿಸಬೇಕು.
    7. ಒಬ್ಬರು ಎರಡು ಸ್ಪರ್ಧೆಗಳಲ್ಲೂ ಭಾಗವಹಿಸಬಹುದು. ಆದರೆ, ಒಂದೊಂದು ಪ್ರವೇಶಕ್ಕೆ ಮಾತ್ರ ಅವಕಾಶವಿರುತ್ತದೆ.
    8. ಕತೆ, ಕವನಗಳನ್ನು ವಾಟ್ಸಪ್ ಮೂಲಕ ಕಳುಹಿಸಬಾರದು.
    9. ಎರಡು ವಿಭಾಗಗಳಲ್ಲಿಯೂ ಅತ್ಯುತ್ತಮವಾದ ಒಂದು ಕತೆ ಮತ್ತು ಒಂದು ಕವನಕ್ಕೆ ನಗದು ಬಹುಮಾನವಿದೆ. ಕತೆಗೆ ನಗದು ಬಹುಮಾನ ರೂ.750/ ಮತ್ತು ಕವನಕ್ಕೆ ರೂ.500/ ಎಂದು ನಿಗದಿಪಡಿಸಲಾಗಿದೆ. ಅಲ್ಲದೆ, ದ್ವಿತೀಯ, ತೃತೀಯ ಸ್ಥಾನ ಪಡೆದ ಉತ್ತಮವಾದ ಕತೆ/ ಕವನಗಳಿಗೆ ಪುಸ್ತಕ ಬಹುಮಾನ ನೀಡಲಾಗುತ್ತದೆ.

    ಕತೆ, ಕವನಗಳನ್ನು ಕಳುಹಿಸಲು ವಿಳಾಸ – ಎಸ್.ಕೆ. ಗೋಪಾಲಕೃಷ್ಣ ಭಟ್, ಆಯೋಜಕರು, ವಾಹಿನಿ ಕತೆ/ಕವನ ಸ್ಪರ್ಧೆ 2024, ನಂ.105, ಅಕ್ಷರ, ಬ್ರಾಡ್ವೇ ಇಲೈಟ್ ಅಪಾರ್ಟ್ಮೆಂಟ್, ಕುಳಾಯಿ ಹೊಸಬೆಟ್ಟು, ಮಂಗಳೂರು -575019
    ಇ-ಮೇಲ್ [email protected]
    ಮೊಬೈಲ್ 9481023671
    ಕತೆ, ಕವನಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ 31-08-2024.
    ಎಲ್ಲರೂ ಭಾಗವಹಿಸಿ ಸ್ಪರ್ಧೆಗಳನ್ನು ಯಶಸ್ವಿಗೊಳಿಸಲು ಕೋರುವ ಶ್ರೀ ಮಧುರಕಾನನ ಗಣಪತಿ ಭಟ್, ರಾಜ್ಯಾಧ್ಯಕ್ಷರು, ವಾಹಿನಿ ಕಲಾಸಂಘ, ದರ್ಬೆ, ಪುತ್ತೂರು-574202.

    Share. Facebook Twitter Pinterest LinkedIn Tumblr WhatsApp Email
    Previous Articleಡಾ. ವಾಮನ ನಂದಾವರರಿಗೆ 80 ತುಂಬಿದ ಸಂದರ್ಭದಲ್ಲಿ ‘ಭೀಷ್ಮಪರ್ವ’ ತಾಳಮದ್ದಳೆ
    Next Article ಮತ್ತೆ ಮಂಗಳೂರಿನ ಜನಮನ ಗೆದ್ದ ‘ಮೊಗ್ಲಿ’ ಮಕ್ಕಳ ನಾಟಕ
    roovari

    Add Comment Cancel Reply


    Related Posts

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.