ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಇದರ ವತಿಯಿಂದ ‘ನಾಡೋಜ ಡಾ. ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ಕಥಾ ಸ್ಪರ್ಧೆ-2025’ಯನ್ನು ಕನ್ನಡದ ಯುವ ಲೇಖಕರಿಗಾಗಿ ಏರ್ಪಡಿಸಲಾಗಿದೆ.
ಸೂಚನೆಗಳು :
* ಸ್ಪರ್ಧೆಯಲ್ಲಿ ಭಾಗವಹಿಸುವವರ ವಯೋಮಿತಿ: 18ರಿಂದ 35 ವರ್ಷ ಬರಹಗಳನ್ನು ಕಳಿಸಲು ಕೊನೆಯ ದಿನಾಂಕ 20 ಜೂನ್ 2025.
* ಕಥೆ ಮತ್ತು ಕವನಗಳು ಸ್ವತಂತ್ರವಾಗಿರಬೇಕು.
* ವಿಷಯದ ಆಯ್ಕೆಯ ಸ್ವಾತಂತ್ರ್ಯವಿರುತ್ತದೆ. ಈವರೆಗೂ ಎಲ್ಲಿಯೂ ಪ್ರಕಟವಾಗಿರಬಾರದು.
* ಕೈಬರಹದ ಕವನ ಮತ್ತು ಕಥೆಗಳನ್ನು ಮಾತ್ರ ಕಳಿಸಬೇಕು. (ಕವನ ಮತ್ತು ಕಥೆ ಕೈ ಬರಹದ್ದಾಗಿರಬೇಕು)
* ನಿರ್ಣಾಯಕರ ನಿರ್ಣಯವೇ ಅಂತಿಮ.
* ಎರಡೂ ವಿಭಾಗಗಳಲ್ಲಿ ಆಯ್ಕೆಯಾದ ಮೊದಲ ಮೂರು ಕವನಗಳಿಗೆ/ಬರಹಗಳಿಗೆ ಜೂನ್ 28ರಂದು ಏರ್ಪಡಿಸುವ ಡಾ. ಚನ್ನವೀರ ಕಣವಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ನೀಡಲಾಗುವುದು.
* ಕವನ ಮತ್ತು ಕಥೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು :
ಪ್ರಧಾನ ಕಾರ್ಯದರ್ಶಿ, ಕರ್ನಾಟಕ ವಿದ್ಯಾವರ್ಧಕ ಸಂಘ, ಧಾರವಾಡ 580001. ಹೆಚ್ಚಿನ ವಿವರಗಳಿಗಾಗಿ 0836 – 2440283 ಸಂಖ್ಯೆಯನ್ನು ಸಂಪರ್ಕಿಸಿರಿ.