Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ದಿವಂಗತ ಮೇಟಿ ಮುದಿಯಪ್ಪ ನೆನಪಿನ ‘ಯುವ ಕಥಾ ಸ್ಪರ್ಧೆ – 2024’
    Kannada

    ದಿವಂಗತ ಮೇಟಿ ಮುದಿಯಪ್ಪ ನೆನಪಿನ ‘ಯುವ ಕಥಾ ಸ್ಪರ್ಧೆ – 2024’

    February 17, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಯುವ ಸಾಹಿತಿಗಳಿಗಾಗಿ ಸಾಹಿತಿ, ಕವಿ ದಿವಂಗತ ಮೇಟಿ ಮುದಿಯಪ್ಪ ನೆನಪಿನ ಜಿಲ್ಲಾಮಟ್ಟದ ‘ಯುವ ಕಥಾ ಸ್ಪರ್ಧೆ-2024’ಯನ್ನು ಆಯೋಜಿಸಲಾಗಿದೆ.

    ಸ್ಪರ್ಧಾಳು ಕೇವಲ ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು. ಕಥೆಯು ಕನಿಷ್ಟ ಒಂದು ಸಾವಿರದಿಂದ ಗರಿಷ್ಟ ಒಂದು ಸಾವಿರದ ಐನೂರು ಪದಗಳಿಗೆ ಮೀರಿರಬಾರದು. 18 ರಿಂದ 35 ವಯೋಮಿತಿಯ ಉಡುಪಿ ಜಿಲ್ಲೆಯ ಯುವಕ ಯುವತಿಯರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಯಾವುದೇ ಪ್ರಕಾರದ ಕಥೆಗಳಿಗೆ ಅವಕಾಶವಿದೆ. ಸ್ಪರ್ಧಿಯು ಕಳುಹಿಸುವ ಕಥೆಯು ಯಾವುದೇ ಸ್ಪರ್ಧೆಯಲ್ಲಿ ಸ್ಪರ್ಧಿಸಿರಬಾರದು ಹಾಗೂ ಪ್ರಕಟಣೆಗೊಂಡಿರಬಾರದು. ಕಥೆ ಕಳುಹಿಸಲು ಕೊನೆಯ ದಿನಾಂಕ 30-03-2024. ಸ್ಪರ್ಧೆಯ ಪ್ರಥಮ ಮತ್ತು ದ್ವಿತೀಯ ಸ್ಥಾನಿಗಳಿಗೆ ನಗದು ಬಹುಮಾನ ತಲಾ ರೂ.5000/- ಹಾಗೂ 3000/- ದ ಜೊತೆಗೆ ಪ್ರಶಸ್ತಿ ಪತ್ರ ಹಾಗೂ ಪುಸ್ತಕ ಬಹುಮಾನ ನೀಡಲಾಗುವುದು. ಮೂರು ಮೆಚ್ಚುಗೆ ಪಡೆದ ಕಥೆಗಳಿಗೆ ಪ್ರಶಸ್ತಿ ಪತ್ರದ ಜೊತೆ ಮೇಟಿ ಮುದಿಯಪ್ಪರ ಕೃತಿ ಸೇರಿ ಮೂರು ಪುಸ್ತಕಗಳ ಬಹುಮಾನ ನೀಡಲಾಗುವುದು.

    ಕಥೆಯು ಸ್ವರಚಿತವಾಗಿದ್ದು, ಡಿ.ಟಿ.ಪಿ. ಮಾಡಿದ ಎರಡು ಪ್ರತಿಗಳನ್ನು ಜನಾರ್ದನ ಕೊಡವೂರು, ಗೌರವ ಕಾರ್ಯದರ್ಶಿಗಳು, ಭಾಮಾ, ಉಡುಪ ಲೇನ್, ಕೆನರಾ ಬ್ಯಾಂಕ್ ಹತ್ತಿರ, ಕೊಡವೂರು ಅಂಚೆ, ಕ್ರೋಡಾಶ್ರಮ, ಉಡುಪಿ ಜಿಲ್ಲೆ – 576106 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು.
    ಹೆಚ್ಚಿನ ಮಾಹಿತಿಗಾಗಿ ರವಿರಾಜ್ ಎಚ್.ಪಿ. ಅಧ್ಯಕ್ಷರು, ಕ.ಸಾ.ಪ. ಉಡುಪಿ ತಾಲೂಕು ಘಟಕ – 98452 40309 ಇವರನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತಿನ ‘ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್ ಧರ್ಮದರ್ಶಿ ದತ್ತಿ ಪ್ರಶಸ್ತಿ’ ಪ್ರಕಟ
    Next Article ಒಡಿಯೂರು ಕ್ಷೇತ್ರದಲ್ಲಿ 24ನೇ ‘ತುಳು ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 18 ಮತ್ತು 19
    roovari

    Add Comment Cancel Reply


    Related Posts

    ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ

    February 21, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ಮಕ್ಕಳ ಮೂರು ನಾಟಕಗಳು

    February 21, 2026

    ಕೊಡವ ಸಾಹಿತ್ಯ ಅಕಾಡೆಮಿಯಿಂದ 15 ಸಾಧಕರಿಗೆ ಗೌರವ ಪ್ರಶಸ್ತಿ

    February 21, 2026

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.