Subscribe to Updates

    Get the latest creative news from FooBar about art, design and business.

    What's Hot

    ‘ಕೊ. ಅ. ಉಡುಪ ಪ್ರಶಸ್ತಿ’ಗೆ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

    July 11, 2026

    ಕ.ಸಾ.ಪ.ದ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕರ ಆಯ್ಕೆ

    July 11, 2026

    ಮಂಗಳೂರಿನ ಪುರಭವನದಲ್ಲಿ ‘ರಿಮ್ಜಿಮ್’ ಸಂಗೀತ ಕಾರ್ಯಕ್ರಮ | ಜುಲೈ 12

    July 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಖ್ಯಾತ ಸ್ತ್ರೀವೇಷಧಾರಿ ಮೂರೂರು ವಿಷ್ಣುಭಟ್ ನಿಧನ
    Yakshagana

    ಖ್ಯಾತ ಸ್ತ್ರೀವೇಷಧಾರಿ ಮೂರೂರು ವಿಷ್ಣುಭಟ್ ನಿಧನ

    October 10, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸಿದ್ದಾಪುರ : ಬಡಗು ತಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ಮೂರೂರು ವಿಷ್ಣು ಗಜಾನನ ಭಟ್ (65) ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಭಾನ್ಕುಳಿಯ ಶ್ರೀ ರಾಮದೇವ ಮಠದಲ್ಲಿ ದಿನಾಂಕ 09-10-2023ರ ಭಾನುವಾರದಂದು ನಿಧನ ಹೊಂದಿದರು. ಶ್ರೀಯುತರ ಅಂತ್ಯ ಸಂಸ್ಕಾರ ಭಾನ್ಕುಳಿ ಮಠದ ಶಂಕರಗಿರಿಯಲ್ಲಿ ನಡೆಯಿತು.

    ಮೂಲತಃ ಕುಮಟಾ ತಾಲೂಕಿನ ಮೂರೂರಿನವರಾದ ಅವರು ಸದ್ಯ ಸಿದ್ಧಾಪುರದ ಭಾನ್ಕುಳಿಯಲ್ಲಿ ವಾಸವಾಗಿದ್ದರು. ಮೂರೂರು ವಿಷ್ಣುಭಟ್ ಅವರ ಸ್ತ್ರೀ ವೇಶಕ್ಕೆ ಎಲ್ಲಿಲ್ಲದ ಖ್ಯಾತಿ ಇತ್ತು. ಭಾವಪೂರ್ಣ ಅಭಿನಯ ಮತ್ತು ಮಾತುಗಾರಿಕೆಯಿಂದ ಅಸಂಖ್ಯಾತ ಅಭಿಮಾನಿಗಳನ್ನು ತನ್ನೆಡೆಗೆ ಸೆಳೆದು ಕೊಂಡವರು. ಭೀಷ್ಮ ವಿಜಯದ ಅಂಬೆ, ಜಮದಗ್ನಿಯ ರೇಣುಕಾ, ದುಷ್ಟಬುದ್ಧಿ ಆಖ್ಯಾನಾದ ವಿಷಯೆ, ರಾಮಾಂಜನೇಯದ ಸೀತೆ, ದಕ್ಷಯಜ್ಞದ ದಾಕ್ಷಾಯಿಣಿ, ಹರಿಶ್ಚಂದ್ರನ ಚಂದ್ರಮತಿ, ನಳ ಚರಿತ್ರೆಯ ದಮಯಂತಿ, ಸುಭದ್ರೆ, ಪ್ರಭಾವತಿ ಮೊದಲಾದ ಪೌರಾಣಿಕ ಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿದ್ದರು. ಕೇವಲ ಸ್ತ್ರೀ ಪಾತ್ರವಲ್ಲದೆ ಪೋಷಕ ಪಾತ್ರಗಳನ್ನು ತಮ್ಮದೇ ಆದ ಶೈಲಿಯಲ್ಲಿ ಪ್ರಸ್ತುತ ಪಡಿಸುವ ಮೂಲಕ ಹೆಸರುವಾಸಿಯಾಗಿದ್ದರು.

    ಗುಂಡುಬಾಳ, ಅಮೃತೇಶ್ವರೀ, ಹಿರೇಮಹಾಲಿಂಗೆಶ್ವರ, ಶಿರಸಿ, ಪೆರ್ಡೂರು, ಮಂದಾರ್ತಿ, ಸಾಲಿಗ್ರಾಮ, ಪೂರ್ಣಚಂದ್ರ ಮೇಳಗಳಲ್ಲಿ ನಾಲ್ಕು ದಶಕಗಳ ಕಲಾ ಸೇವೆಗೈದಿದ್ದರು. ಯಕ್ಷಗಾನ ಕಲಾರಂಗ ಪ್ರಶಸ್ತಿ, ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದ ಅವರು ಪತ್ನಿ ಶ್ರೀಮತಿ, ಪುತ್ರ ಆದರ್ಶ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕಲಾ ವಿಮರ್ಶೆ | ಗಣಪತಿ ಹಾಗೂ ಕೃಷ್ಣನನ್ನು ದರ್ಶಿಸಿದ “ಮಾರುತ ಪ್ರಿಯ” ಕಲಾ ಪ್ರದರ್ಶನ
    Next Article ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದಿಂದ ಗಡಿನಾಡಿನಲ್ಲಿ ‘ಕನ್ನಡ ಕಲರವ’
    roovari

    Add Comment Cancel Reply


    Related Posts

    ಮಹಮ್ಮಾಯಿ ಯಕ್ಷಗಾನ ಮೇಳದ ಕಲಾವಿದರಿಗೆ ‘ಕೆ.ವಿ. ಪೈ ಪ್ರಶಸ್ತಿ’ ಪ್ರದಾನ

    July 10, 2026

    ಕಿರೀಕ್ಕಾಡು ಸ್ಮಾರಕ ಸಭಾಭವನದಲ್ಲಿ ‘ಶರಸೇತುಬಂಧ’ ಯಕ್ಷಗಾನ ತಾಳಮದ್ದಳೆ

    July 10, 2026

    ಶ್ರೀ ನಂದನೇಶ್ವರ ದೇವಸ್ಥಾನದಲ್ಲಿ ಯಕ್ಷನಂದನ 45ನೇ ವರ್ಷಾಚರಣೆ | ಜುಲೈ 10

    July 9, 2026

    ನಿವೃತ್ತ ಬ್ಯಾಂಕ್ ಅಧಿಕಾರಿ, ಉತ್ಕಟ ಕಲಾ ಪ್ರೇಮಿ ವಕ್ವಾಡಿ ಶೇಖರ ಶೆಟ್ಟಿ ನಿಧನ

    July 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.