Subscribe to Updates

    Get the latest creative news from FooBar about art, design and business.

    What's Hot

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026

    ವಿಶೇಷ ಲೇಖನ | ಮುಂಬೈ ಕನ್ನಡಿಗ, ಪತ್ರಕರ್ತನ ಸಾಧನೆ

    May 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮಂಗಳೂರಿನ ತುಳು ಭವನದಲ್ಲಿ ‘ವಿದ್ಯಾರ್ಥಿ ತುಳು ಸಮ್ಮೇಳನ’ | ಮಾರ್ಚ್ 20
    Dance

    ಮಂಗಳೂರಿನ ತುಳು ಭವನದಲ್ಲಿ ‘ವಿದ್ಯಾರ್ಥಿ ತುಳು ಸಮ್ಮೇಳನ’ | ಮಾರ್ಚ್ 20

    March 19, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ತುಳು ಪರಿಷತ್ ಇವರ ವತಿಯಿಂದ ದಿನಾಂಕ 20 ಮಾರ್ಚ್ 2026ರಂದು ಮಂಗಳೂರಿನ ಉರ್ವಸ್ಟೋರ್ ತುಳು ಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ 3ನೇ ವಿದ್ಯಾರ್ಥಿ ತುಳು ಸಮ್ಮೇಳನ ನಡೆಯಲಿದೆ. ಬೆಳಗ್ಗೆ 10-00 ಗಂಟೆಗೆ ದೇರಳಕಟ್ಟೆ ನಿಟ್ಟೆ ವಿದ್ಯಾ ಸಂಸ್ಥೆಯ ಸ್ನಾತಕೋತ್ತರ ವಿದ್ಯಾರ್ಥಿ ಪ್ರೀತಮ್ ನಾಯಕ್ ಸಮ್ಮೇಳನ ಉದ್ಘಾಟಿಸಲಿದ್ದು, ಬ್ರಹ್ಮಾವರ ಎಸ್.ಎಂ.ಎಸ್. ಕಾಲೇಜು ಪದವಿ ವಿದ್ಯಾರ್ಥಿನಿ ಅಭಿಜ್ಞಾ ಅಧ್ಯಕ್ಷತೆಯನ್ನು ವಹಿಸಲಿರುವರು. ಮಾಜಿ ಮುಖ್ಯಮಂತ್ರಿ, ಸಾಹಿತಿ ಡಾ. ಎಂ. ವೀರಪ್ಪ ಮೊಯ್ಲಿ ಸಮ್ಮೇಳನದ ದಿಕ್ಕೂಚಿ ಭಾಷಣ ಮಾಡುವರು. ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಶುಭಾಶಂಸನೆಗೈಯ್ಯಲಿರುವರು.

    ಬಳಿಕ ನಡೆಯುವ ಪ್ರಥಮ ಗೋಷ್ಠಿಯಲ್ಲಿ ‘ಕಾಲೇಜು ಪರಿಸರ ನೈತಿಕ ಮೌಲ್ಯ’ ಎಂಬ ವಿಷಯದ ಬಗ್ಗೆ ನಿಡಗೋಸಿಯ ಜಗದ್ಗುರು ದುರುದುಂಡೇಶ್ವರ ಸಿದ್ಧಸಂಸ್ಥಾನ ಮಠದ ಮಠಾಧಿಪತಿ, ಪರಿಸರ ತಜ್ಞ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ ಮಾತನಾಡಲಿರುವರು. 12-10 ಗಂಟೆಗೆ ಎರಡನೇ ಗೋಷ್ಠಿಯಲ್ಲಿ ಆರು ಮಂದಿ ವಿದ್ಯಾರ್ಥಿಗಳು ‘ತುಳುನಾಡಿನ ಸೌಹಾರ್ದ ಪರಂಪರೆ ಮತ್ತು ಈ ಪರಂಪರೆಯನ್ನು ಉಳಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ’ ಎಂಬ ವಿಷಯದ ಬಗ್ಗೆ ಸಮ್ಮೇಳನಾಧ್ಯಕ್ಷರು ಹಾಗೂ ಉದ್ಘಾಟಕರ ಜತೆ ಸಂವಾದ ನಡೆಸಲಿದ್ದಾರೆ. ‘ತುಳು ಕಲಾ ಐಸಿರಿ’ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನವರಿಂದ ಜಾನಪದ ನೃತ್ಯ, ಮಂಗಳೂರಿನ ಕೆನರಾ ಕಾಲೇಜು, ಬ್ರಹ್ಮಾವರ ಎಸ್. ಎಂ. ಎಸ್. ಕಾಲೇಜು ಮತ್ತು ಮಂಗಳೂರಿನ ರಾಮಕೃಷ್ಣ ಕಾಲೇಜಿನ ವಿದ್ಯಾರ್ಥಿಗಳಿಂದ ತುಳು ಗಾಯನ ಹಾಗೂ ಜಾನಪದ ನೃತ್ಯ ನಡೆಯಲಿದೆ. ಮಧ್ಯಾಹ್ನ 3-00 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ದಿನಾಂಕ 10 ಮಾರ್ಚ್ 2026ರಂದು ವಿದ್ಯಾರ್ಥಿಗಳಿಗಾಗಿ ನಡೆಸಿದ ಕಲಾ ಸಿರಿ ಸ್ಪರ್ಧೆಯ ಬಹುಮಾನ ವಿತರಣಾ ನಡೆಯಲಿದೆ.

    baikady dance folk Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಸುರತ್ಕಲ್‌ ನಲ್ಲಿ ಅಗರಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ, ‘ಯಕ್ಷಯಾನ’ ಯಕ್ಷಗಾನ ಸ್ಪರ್ಧೆ | ಮಾರ್ಚ್ 21
    Next Article ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ 7ನೇ ಜಾನಪದ ಸಮ್ಮೇಳನ | ಮಾರ್ಚ್ 21
    roovari

    Add Comment Cancel Reply


    Related Posts

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026

    ವಿಶೇಷ ಲೇಖನ | ಮುಂಬೈ ಕನ್ನಡಿಗ, ಪತ್ರಕರ್ತನ ಸಾಧನೆ

    May 15, 2026

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.