Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗೋವಿಂದ ದಾಸ ಕಾಲೇಜಿನಲ್ಲಿ ವಿದ್ಯಾರ್ಥಿ ಸೆನೆಟ್ ಮತ್ತು ಲಲಿತಕಲಾ ಸಂಘದ ಉದ್ಘಾಟನೆ
    Cultural

    ಗೋವಿಂದ ದಾಸ ಕಾಲೇಜಿನಲ್ಲಿ ವಿದ್ಯಾರ್ಥಿ ಸೆನೆಟ್ ಮತ್ತು ಲಲಿತಕಲಾ ಸಂಘದ ಉದ್ಘಾಟನೆ

    September 21, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಹಿಂದೂ ವಿದ್ಯಾದಾಯಿನೀ ಸಂಘ (ರಿ) ಸುರತ್ಕಲ್‌ನ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜು ಸುರತ್ಕಲ್‌ನ ವಿದ್ಯಾರ್ಥಿ ಸೆನೆಟ್ ಮತ್ತು ಲಲಿತಕಲಾ ಸಂಘವು ದಿನಾಂಕ 20 ಸೆಪ್ಟೆಂಬರ್ 2024ರಂದು ಉದ್ಘಾಟನೆಗೊಂಡಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ರೋಟರಾಕ್ಟ್ ಸಮಿತಿ ಅಧ್ಯಕ್ಷೆ ರೋ. ಯಶೋಮತಿ ಮಾತನಾಡಿ “ದೇಶದ ಭವಿಷ್ಯದ ನಾಯಕರು ರೂಪುಗೊಳ್ಳುವುದರಲ್ಲಿ ವಿದ್ಯಾ ಸಂಸ್ಥೆಗಳ ಪಾತ್ರ ಮುಖ್ಯವಾಗಿದೆ. ವಿದ್ಯಾರ್ಥಿಗಳು ಕಾಲೇಜಿನ ಚಟುವಟಿಕೆಗಳಲ್ಲಿ ಶ್ರದ್ಧೆ ಉತ್ಸಾಹಗಳಿಂದ ಭಾಗವಹಿಸುವ ಮೂಲಕ ತಮ್ಮೊಳಗಿನ ಸುಪ್ತ ಪ್ರತಿಭೆಗಳನ್ನು ಅನಾವರಣಗಳಿಸಬೇಕು. ಕಲಾ ಲೋಕದಲ್ಲಿ ಮಿನುಗುತ್ತಿರುವ ಅನೇಕ ಪ್ರತಿಭೆಗಳಿಗೆ ಕಾಲೇಜಿನ ವೇದಿಕೆ ಅವರ ಕಲಾ ಪ್ರಯಾಣಕ್ಕೆ ಮೊದಲ ವೇದಿಕೆಯಾಗಿದ್ದು ಗೋವಿಂದ ದಾಸ ಕಾಲೇಜಿನ ಲಲಿತಕಲಾ ಸಂಘವು ಅನೇಕ ಪ್ರತಿಭಾವಂತ ಕಲಾವಿದರನ್ನು ಕಲಾರಂಗಕ್ಕೆ ನೀಡುತ್ತಿರುವುದು ಶ್ಲಾಘನೀಯ” ಎಂದು ನುಡಿದರು.

    “ಯುವ ಜೀವನದ ಪ್ರತಿಯೊಂದು ಹೆಜ್ಚೆಯು ಮುಂದಿನ ಬದುಕಿಗೆ ಮಹತ್ವದ್ದಾಗಿದೆ. ವಿದ್ಯಾರ್ಥಿ ದೆಸೆಯಿಂದಲೇ ಎಲ್ಲಾ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡರೆ ಉತ್ತಮ ಅವಕಾಶಗಳು ಲಭ್ಯವಾಗುತ್ತದೆ” ಎಂದು ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ಗೋಪಾಲ ಎಂ. ಗೋಖಲೆ ನುಡಿದರು.

    ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ “ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಅರಿವನ್ನು ಮೂಡಿಸಿ ನಾಯಕತ್ವದ ಗುಣಗಳನ್ನು ಬೆಳೆಸಲು ವಿದ್ಯಾರ್ಥಿ ಸೆನೆಟ್‌ ರೂಪಿತಗೊಂಡಿದೆ. ವಿದ್ಯಾರ್ಥಿ ಸೆನೆಟ್‌ನ ಪ್ರತಿನಿಧಿಗಳು ಶಿಸ್ತು, ವಿನಯ, ಆದರ್ಶ ಹಾಗೂ ಆತ್ಮವಿಶ್ವಾಸದೊಂದಿಗೆ ಕಾರ್ಯನಿರ್ವಹಿಸುವುದರ ಮೂಲಕ ಮಾದರಿ ನಾಯಕರಾಗಿ ಬೆಳೆಯಬೇಕು. ವಿದ್ಯಾರ್ಥಿಗಳ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಕಾಲೇಜು ಸಮಾನ ಅವಕಾಶಗಳನ್ನು ಮತ್ತು ವೇದಿಕೆಗಳನ್ನು ನೀಡಿ ಪ್ರೋತ್ಸಾಹಿಸುತ್ತಿದೆ” ಎಂದರು.

    ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯ ಪ್ರವೀಣ್ ಕೆ. ವಿದ್ಯಾರ್ಥಿ ಸೆನೆಟ್‌ನ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿ ಸೆನೆಟ್‌ನ ಕಾರ್ಯದರ್ಶಿಗಳಾದ ತುಷಾರ್ ಸ್ವಾಗತಿಸಿ, ಯಶಸ್ ಕೆ. ಬಂಗೇರ ವಂದಿಸಿ, ಪೂರ್ವಿಕಾ ಕಾರ್ಯಕ್ರಮ ನಿರೂಪಿಸಿದರು. ಉಪಪ್ರಾಚಾರ್ಯ ಪ್ರೊ. ನೀಲಪ್ಪ ವಿ., ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಪ್ರೊ. ಹರೀಶ ಆಚಾರ್ಯ ಪಿ., ಲಲಿತಕಲಾ ಸಂಘದ ಸಂಯೋಜಕರಾದ ಡಾ. ವಿಜಯಲಕ್ಷ್ಮೀ, ಡಾ. ಸಂತೋಷ್ ಆಳ್ವ, ಸಜಿತಾ ಕೆ. ನಾಯರ್, ತರಬೇತುದಾರ ವಿನೋದ್ ಶೆಟ್ಟ್ಟಿ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಧನ್ವಿನ್, ಜಿತಿನ್‌ ಎನ್. ಶೆಟ್ಟಿ, ಗಗನ್‌ ಎನ್. ಶೆಟ್ಟಿ, ಜೊತೆ ಕಾರ್ಯದರ್ಶಿಗಳಾದ ವೇದಿಕಾ, ಸ್ವಾತಿ, ಪ್ರತೀಕ್ಷಾ ಎ. ಭಟ್, ಶಿವಾನಿ ಮತ್ತು ಲಲಿತಕಲಾ ಸಂಘದ ಕಾರ್ಯದರ್ಶಿಗಳಾದ ಹಿತ ಉಮೇಶ್, ವೈಶಾಖ್, ನಿರ್ಮಿಕಾ, ಮನೀಶ್ ಡಿ. ಶೆಟ್ಟಿ, ಭರತ್ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಎಂ.ಜಿ. ಹೆಗಡೆಯವರ ಆತ್ಮಕಥೆ ‘ಚಿಮಣಿ ಬೆಳಕಿನಿಂದ’ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಸೆಪ್ಟೆಂಬರ್ 22
    Next Article ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ವತಿಯಿಂದ ‘ಸ್ವರ ಕುಡ್ಲ ಸೀಸನ್- 6’ ಸಂಗೀತ ಸ್ಪರ್ಧೆ
    roovari

    Comments are closed.

    Related Posts

    ಮಣಿಪಾಲದಲ್ಲಿ ‘ಕಲಾಮಯಂ’ ಸಾಂಸ್ಕೃತಿಕ ಸಂಘಟನೆ ಉದ್ಘಾಟನೆ

    May 6, 2025

    ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಳದಲ್ಲಿ ಉದ್ಘಾಟನೆಗೊಂಡ ಸಾಂಸ್ಕೃತಿಕ ಕಾರ್ಯಕ್ರಮ

    May 2, 2025

    ಉದ್ಘಾಟನೆಗೊಂಡ ‘ಸುಕೃತಿ’ 17ನೇ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

    May 1, 2025

    ಸಿವಗಂಗ ರಂಗಮಂದಿರದಲ್ಲಿ ‘ಬಣ್ಣದ ಬೇಸಿಗೆ’ ಮಕ್ಕಳ ರಂಗ ಶಿಬಿರದ ಸಮಾರೋಪ ಸಮಾರಂಭ | ಮೇ 04

    May 1, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.