Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ದೇವಳದ ರಾಜಾಂಗಣದಲ್ಲಿ ತುಳು ಬರಹಗಳ ಗುಚ್ಚ ‘ಕಡ್ಲೆ ಬಜಿಲ್’ ಲೋಕಾರ್ಪಣೆ

    January 22, 2026

    ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಚಿತ್ರಕಲಾ ಪ್ರದರ್ಶನ ‘ದ ದಾಪರ್ ಎಕ್ಸ್ಪೋ’

    January 22, 2026

    ‘ಕಥಾಬಿಂದು ಸಾಹಿತ್ಯ ಸಂಭ್ರಮ’ದಲ್ಲಿ ಕವಿಗೋಷ್ಠಿ, ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಲೋಕಾರ್ಪಣೆ

    January 22, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಾಸುದೇವ ನಾಡಿಗ್ ಮತ್ತು ರತ್ನಾಕರ ಕುನಗೋಡು ಇವರಿಗೆ ಸು.ರಂ.ಎಕ್ಕುಂಡಿ ಜನ್ಮ ಶತಮಾನೋತ್ಸವ ಕಾವ್ಯ ಪ್ರಶಸ್ತಿ
    Literature

    ವಾಸುದೇವ ನಾಡಿಗ್ ಮತ್ತು ರತ್ನಾಕರ ಕುನಗೋಡು ಇವರಿಗೆ ಸು.ರಂ.ಎಕ್ಕುಂಡಿ ಜನ್ಮ ಶತಮಾನೋತ್ಸವ ಕಾವ್ಯ ಪ್ರಶಸ್ತಿ

    March 27, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    27 ಏಪ್ರಿಲ್ 2023, ಧಾರವಾಡ: ಕನ್ನಡ ಶ್ರೇಷ್ಠ ಕವಿಗಳಲ್ಲೊಬ್ಬರಾದ ದಿ. ಸುಬ್ಬಣ್ಣ ರಂಗನಾಥ ಎಕ್ಕುಂಡಿ ಅವರ ಜನ್ಮಶತಮಾನೋತ್ಸವ ಪ್ರಯುಕ್ತ ಧಾರವಾಡದ ಸಾಹಿತ್ಯ ಗಂಗಾ ಮತ್ತು ಹಂಸಭಾವಿಯ ವಾರಂಬಳ್ಳಿ ಪ್ರತಿಷ್ಠಾನದ ಸಹಯೋಗದಲ್ಲಿ ನೀಡಲಾಗುತ್ತಿರುವ ‘ಸು.ರಂ.ಎಕ್ಕುಂಡಿ ಜನ್ಮ ಶತಮಾನೋತ್ಸವ ಕಾವ್ಯ ಪ್ರಶಸ್ತಿ – 2023’ಕ್ಕೆ ಶ್ರೀ ವಾಸುದೇವ ನಾಡಿಗರ ‘ಬಂದರಿಗೆ ಬಂದ ಹಡಗು’ ಮತ್ತು ಡಾ. ರತ್ನಾಕರ ಕುನಗೋಡು ಅವರ ‘ಎದೆನೆಲದ ಕಾವು’ ಕವನ ಸಂಕಲನಗಳು ಆಯ್ಕೆಯಾಗಿವೆ. ತೀರ್ಪುಗಾರರಾದ ಡಾ. ಸಂಕೇತ ಪಾಟೀಲ, ಡಾ. ಸುಭಾಷ್ ಪಟ್ಟಾಜೆ ಮತ್ತು ಡಾ. ರವಿಶಂಕರ ಜಿ. ಕೆ. ಈ ಎರಡು ಕೃತಿಗಳನ್ನು ಆಯ್ಕೆ ಮಾಡಿದ್ದಾರೆ.

    ಇದೇ ಏಪ್ರಿಲ್ 16ರಂದು ಧಾರವಾಡದ ರಂಗಾಯಣದಲ್ಲಿ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಕನ್ನಡದ ಪ್ರಸಿದ್ಧ ಸಾಹಿತಿ ಪ್ರೊ. ರಾಘವೇಂದ್ರ ಪಾಟೀಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಪ್ರಶಸ್ತಿ 5000 ರೂಪಾಯಿಗಳ ನಗದು, ಸನ್ಮಾನ ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ ಎಂದು ಸಾಹಿತ್ಯ ಗಂಗಾ ಪ್ರತಿಷ್ಠಾನದ ಮುಖ್ಯಸ್ಥರಾದ ವಿಕಾಸ ಹೊಸಮನಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Article“ಸಾಮರಸ್ಯಕ್ಕೆ ಬೇಕು ತೆರೆದ ಮನಸ್ಸು” – ಪುಸ್ತಕ ಅನಾವರಣ – ಉಪನ್ಯಾಸ
    Next Article ಕಲಾಭಿ ಮಂಗಳೂರು ವತಿಯಿಂದ “ಪುರ್ಸನ ಪುಗ್ಗೆ” ಗೊಂಬೆಯಾಟ ಕಾರ್ಯಾಗಾರದ ಕಲಿಕಾ ಪ್ರಸ್ತುತಿ ಮಾರ್ಚ್ 28ಕ್ಕೆ
    roovari

    Add Comment Cancel Reply


    Related Posts

    ಕದ್ರಿ ದೇವಳದ ರಾಜಾಂಗಣದಲ್ಲಿ ತುಳು ಬರಹಗಳ ಗುಚ್ಚ ‘ಕಡ್ಲೆ ಬಜಿಲ್’ ಲೋಕಾರ್ಪಣೆ

    January 22, 2026

    ‘ಕಥಾಬಿಂದು ಸಾಹಿತ್ಯ ಸಂಭ್ರಮ’ದಲ್ಲಿ ಕವಿಗೋಷ್ಠಿ, ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಲೋಕಾರ್ಪಣೆ

    January 22, 2026

    ಪೂಚಂತೆ ಸಾಹಿತ್ಯ ಪುರಸ್ಕಾರಕ್ಕೆ ಕೃತಿಗಳ ಆಹ್ವಾನ – 2026

    January 22, 2026

    ಹಾಸನದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಡಾ. ಮಾಲತಿ ಶೆಟ್ಟಿಯವರಿಗೆ ಪ್ರಶಸ್ತಿ ಪ್ರದಾನ

    January 22, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.