Subscribe to Updates

    Get the latest creative news from FooBar about art, design and business.

    What's Hot

    ಕತೆ | ‘ದಶರಥ’

    June 26, 2025

    ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ

    June 26, 2025

    ಯಕ್ಷಶಿಕ್ಷಣ ಟ್ರಸ್ಟ್ ಇದರ ವಾರ್ಷಿಕ ಮಹಾಸಭೆ

    June 26, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಶಾಲನಗರದ ಪಾತಿಮಾ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ಸೂದನ ರಾಘವಯ್ಯ ದತ್ತಿನಿಧಿ ಉಪನ್ಯಾಸ
    Kannada

    ಕುಶಾಲನಗರದ ಪಾತಿಮಾ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ಸೂದನ ರಾಘವಯ್ಯ ದತ್ತಿನಿಧಿ ಉಪನ್ಯಾಸ

    June 26, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಶಾಲನಗರ : ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕುಶಾಲನಗರದ ಪಾತಿಮಾ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ಸೂದನ ರಾಘವಯ್ಯ ದತ್ತಿ ನಿಧಿ ಕಾರ್ಯಕ್ರಮ ದಿನಾಂಕ 25 ಜೂನ್ 2025ರಂದು ನಡೆಯಿತು.
    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಉಪನ್ಯಾಸಕಿ ಲೀಲಾಕುಮಾರಿ ತೊಡಿಕಾನ ಮಾತನಾಡಿ “ವಿದ್ಯಾರ್ಥಿಗಳು ತಮ್ಮ 10ನೇ ತರಗತಿಯ ಒಳಗೆ ಕನ್ನಡದ ಬಗ್ಗೆ ಚೆನ್ನಾಗಿ ಅರಿಯಬೇಕು. ಕನ್ನಡದಲ್ಲಿ ಮಾತನಾಡುವುದು, ಓದುವುದು ಮತ್ತು ಬರೆಯುವುದು ಅಭ್ಯಾಸ ಮಾಡಿದಾಗ ಮಾತ್ರ ಕನ್ನಡ ಭಾಷೆಯನ್ನು ಉಳಿಸಿ, ಬೆಳಸಲು ಸಾಧ್ಯ. ಶಾಲೆಗಳಲ್ಲಿ ಮತ್ತು ಮನೆಗಳಲ್ಲಿ ಕನ್ನಡಕ್ಕೆ ಆದ್ಯತೆ ಸಿಗಬೇಕು. ಮಕ್ಕಳಲ್ಲಿ ಕನ್ನಡದ ಬಗ್ಗೆ ಯಾವುದೇ ತಾತ್ಸಾರ ಭಾವನೆ ಮೂಡದ ಹಾಗೆ ವಾತಾವರಣ ನಿರ್ಮಾಣವಾಗಬೇಕು. ಕನ್ನಡದ ಬದಲಾಗಿ ಬೇರೆ ಯಾವುದೇ ಭಾಷೆಯಿಲ್ಲ. ಕನ್ನಡಕ್ಕೆ ತನ್ನದೇ ಆದ ಸ್ಥಾನಮಾನವಿದೆ. ಅದನ್ನು ಬೆಳೆಸುವ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ತುಂಬಾ ಮಕ್ಕಳಿಗೆ ಕಾಲೇಜಿಗೆ ಬಂದರು ಕಾಗುಣಿತ ಗೊತ್ತಿರುವುದಿಲ್ಲ. 10ನೇ ತರಗತಿ ಒಳಗೆ ಕನ್ನಡವನ್ನು ಚೆನ್ನಾಗಿ ಅಭ್ಯಾಸ ಮಾಡಿಸಿದಾಗ ಮಾತ್ರ ಉತ್ತಮ ಗುಣಮಟ್ಟದ ಕನ್ನಡ ನಿರೀಕ್ಷೆ ಮಾಡಬಹುದು. ಕನ್ನಡ ಕಲಿತ ಮೇಲೆ ಬೇರೆ ಯಾವುದೇ ಭಾಷೆಯನ್ನು ಕಲಿಯಿರಿ” ಎಂದು ಕರೆ ನೀಡಿದರು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಶಾಲನಗರ ತಾಲೂಕು ಕ. ಸಾ. ಪ. ಅಧ್ಯಕ್ಷರಾದ ಕೆ. ಎಸ್. ನಾಗೇಶ್ ಮಾತನಾಡಿ “ಕೊಡಗು ಜಿಲ್ಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿನಿ ಅಧಿಯಾ ಅವರನ್ನು ಕಾನ್ವೆಂಟ್ ಒಂದರಲ್ಲಿ ಸನ್ಮಾನಿಸಿ ಗೌರವಿಸಲು ಕಾರಣ ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಯುವ ಮಕ್ಕಳಲ್ಲಿ ಕನ್ನಡ ಪ್ರೇಮ ಉತ್ತೇಜಿಸುವ ಉದ್ದೇಶ. ಈಗ ಇಲ್ಲಿರುವ ವಿದ್ಯಾರ್ಥಿಗಳು ಮುಂದಿನ ವರ್ಷದಲ್ಲಿ ಈ ರೀತಿಯ ಗೌರವ ಪಡೆಯಲು ಪೈಪೋಟಿಗೆ ಬರಬೇಕು” ಎಂದು ಹೇಳಿದರು.
    ಫಾತಿಮಾ ಕಾನ್ವೆಂಟ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಚೇತನಾ, ಕ. ಸಾ. ಪ. ಕಾರ್ಯದರ್ಶಿ ಎಸ್. ನಾಗರಾಜ್, ಖಜಾಂಚಿ ಕೆ. ವಿ. ಉಮೇಶ್, ನಿರ್ದೇಶಕರಾದ ಬಿ. ಸಿ. ದಿನೇಶ್, ಎಂ. ಎನ್. ಕಾಳಪ್ಪ, ಸೂದನ ರತ್ನಾವತಿ, ಹೆಬ್ಬಾಲೆ ಹೋಬಳಿ ಕ. ಸಾ. ಪ. ಅಧ್ಯಕ್ಷರಾದ ಎಂ. ಎನ್. ಮೂರ್ತಿ, ಕಾರ್ಯದರ್ಶಿ ಸುಬ್ರಹ್ಮಣ್ಯ, ಪಾತಿಮಾ ಶಾಲೆಯ ಶಿಕ್ಷಕರಾದ ಸಂತೋಷ್, ಮಂಜುಳಾ ಇತರರು ಉಪಸ್ಥಿತರಿದ್ದರು.

     

    baikady kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕಾರ್ಕಳ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಉದ್ಘಾಟನೆಗೊಂಡ ಯಕ್ಷಶಿಕ್ಷಣ
    Next Article ಕಣವಿ ಕಾವ್ಯ – ಕಥಾ ಸ್ಪರ್ಧೆಯಲ್ಲಿ ಮಧು ಕಾರಗಿ – ದಿವ್ಯಶ್ರೀಗೆ ಬಹುಮಾನ
    roovari

    Add Comment Cancel Reply


    Related Posts

    ಕತೆ | ‘ದಶರಥ’

    June 26, 2025

    ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ

    June 26, 2025

    ಕಣವಿ ಕಾವ್ಯ – ಕಥಾ ಸ್ಪರ್ಧೆಯಲ್ಲಿ ಮಧು ಕಾರಗಿ – ದಿವ್ಯಶ್ರೀಗೆ ಬಹುಮಾನ

    June 26, 2025

    ಕಾರ್ಕಳ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಉದ್ಘಾಟನೆಗೊಂಡ ಯಕ್ಷಶಿಕ್ಷಣ

    June 26, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.