Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಡಾ. ನಾ. ಮೊಗಸಾಲೆಯವರಿಗೆ ಸುನಂದಾ ಬೆಳಗಾಂವಕರ್ ಕಾದಂಬರಿ ಪ್ರಶಸ್ತಿ ಪ್ರದಾನ
    Awards

    ಡಾ. ನಾ. ಮೊಗಸಾಲೆಯವರಿಗೆ ಸುನಂದಾ ಬೆಳಗಾಂವಕರ್ ಕಾದಂಬರಿ ಪ್ರಶಸ್ತಿ ಪ್ರದಾನ

    June 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕನ್ನಡದ ಮಹತ್ವದ ಲೇಖಕಿಯರಲ್ಲೊಬ್ಬರಾದ ದಿ. ಸುನಂದಾ ಬೆಳಗಾಂವಕರ್ ಅವರ ಹೆಸರಿನಲ್ಲಿ ಧಾರವಾಡದ ‘ಸಾಹಿತ್ಯ ಗಂಗಾ’ ಸಂಸ್ಥೆಯು ಈ ವರ್ಷದಿಂದ ನೀಡುತ್ತಿರುವ ಸುನಂದಾ ಬೆಳಗಾಂವಕರ್ ಕಾದಂಬರಿ ಪ್ರಶಸ್ತಿಗೆ ಡಾ.ನಾ.ಮೊಗಸಾಲೆಯವರ ‘ಭಾರತ ಕಥಾ’ ಕಾದಂಬರಿಯು ಆಯ್ಕೆಯಾಗಿದ್ದು, ಈ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 08-06-2024 ರಂದು ಕಾರ್ಕಳದ ಪ್ರಕಾಶ್ ಹೋಟೇಲಿನ ‘ಸಂಭ್ರಮ’ ಸಭಾಂಗಣದಲ್ಲಿ ನಡೆಯಿತು.

    ಸಮಾರಂಭದಲ್ಲಿ ಮೊಗಸಾಲೆಯವರಿಗೆ ಪ್ರಶಸ್ತಿಯನ್ನು ಪ್ರದಾನಿಸಿ ಮಾತನಾಡಿದ ಖ್ಯಾತ ಇತಿಹಾಸ ತಜ್ಞ ಹಾಗೂ ವಾಗ್ಮಿಗಳಾದ ಡಾ. ಪುಂಡಿಕಾಯಿ ಗಣಪಯ್ಯ ಭಟ್ “ತನ್ನ 18ನೇ ವಯಸ್ಸಿನಲ್ಲಿಯೇ ‘ನನ್ನದಲ್ಲದ್ದು’ ಎಂಬ ಕಾದಂಬರಿ ರಚನೆಯೊಂದಿಗೆ ಕಾದಂಬರಿಲೋಕಕ್ಕೆ ಪಾದಾರ್ಪಣೆಗೈದ ಡಾ. ನಾ. ಮೊಗಸಾಲೆಯವರು ಈಗಾಗಲೇ ತಮ್ಮ 22 ಕಾದಂಬರಿಗಳೊಂದಿಗೆ ಸಾಹಿತ್ಯದ ಇತರ ಪ್ರಕಾರಗಳಲ್ಲಿಯೂ ಸಾಕಷ್ಟು ಕೃಷಿ ಮಾಡಿ ನಾಡಿನ ಪ್ರಮುಖ ಸೃಜನಶೀಲ ಸಾಹಿತಿಗಳಲ್ಲಿ ಒಬ್ಬರೆನಿಸಿದ್ದಾರೆ.” ಎಂದರು .

    ಅಭಿನಂದನಾ ಭಾಷಣಗೈದ ‘ಸಾಹಿತ್ಯ ಗಂಗಾ’ ಸಂಸ್ಥೆಯ ಮುಖ್ಯಸ್ಥರಾದ ವಿಕಾಸ ಹೊಸಮನಿ ಮಾತನಾಡಿ “ಮೊಗಸಾಲೆಯವರ ಪ್ರತಿಯೊಂದು ಕಾದಂಬರಿಯೂ ವಿಭಿನ್ನ ಪ್ರಯೋಗಶೀಲತೆಯಿಂದ ಕೂಡಿದ್ದು ಕಾದಂಬರಿ ಪ್ರಕಾರಕ್ಕೆ ಮಾದರಿಗಳಾಗಿವೆ. ವಿಶೇಷವಾಗಿ ಕರಾವಳಿಯ ಎಲ್ಲ ಪ್ರಸಿದ್ಧ ಸಾಹಿತಿಗಳನ್ನೂ ನಾವಿಂದು ಮೊಗಸಾಲೆಯವರಲ್ಲಿ ಕಾಣಬಹುದಾಗಿದ್ದು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಅವರಿಂದ ಇನ್ನಷ್ಟು ಕಾದಂಬರಿಗಳು ಬೆಳಕು ಕಾಣುವಂತಾಗಲಿ.” ಎಂದು ಶುಭ ಹಾರೈಸಿದರು.

    ಡಾ. ನಾ. ಮೊಗಸಾಲೆಯವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಅ. ಭಾ. ಸಾ. ಪ. ಇದರ ಕಾರ್ಕಳ ತಾಲೂಕು ಘಟಕದ ಗೌರವಾಧ್ಯಕ್ಷರಾದ ನಿತ್ಯಾನಂದ ಪೈ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅ. ಭಾ. ಸಾ. ಪ. ಇದರ ಅಧ್ಯಕ್ಷರಾದ ಶ್ರೀಮತಿ ಮಿತ್ರಪ್ರಭಾ ಹೆಗ್ಡೆ, ಸಾಹಿತ್ಯ ಸಂಘ ಕಾರ್ಕಳದ ಅಧ್ಯಕ್ಷರಾದ ಶ್ರೀ ಕೆ. ಪಿ. ಶೆಣೈ, ಕ. ಸಾ. ಪ. ಕಾರ್ಕಳ ತಾಲೂಕು ಘಟಕದ ಅಧ್ಯಕ್ಷರಾದ ಪ್ರಭಾಕರ ಕೊಂಡಳ್ಳಿ, ದಿ. ಸುನಂದಾ ಬೆಳಗಾಂವಕರ ಅವರ ಸುಪುತ್ರಿ ಶ್ರೀಮತಿ ವೈಜಯಂತಿಯವರು ಉಪಸ್ಥಿತರಿದ್ದರು.

    ಶ್ರೀ ಸುಭಾಷ್ ಪಟ್ಟಾಜೆಯವರು ಪ್ರಾಸ್ತಾವಿಕ ಮಾತುಗಳೊಂದಿಗೆ ತೀರ್ಪುಗಾರರ ಟಿಪ್ಪಣಿಯನ್ನು ಮಂಡಿಸಿದರು. ಕಾರ್ಯಕ್ರಮದಲ್ಲಿ ಬಾಲಕೃಷ್ಣರಾವ್ ಸ್ವಾಗತಿಸಿ, ಸದಾನಂದ ನಾರಾವಿ ನಿರೂಪಿಸಿ, ರೇವಣಸಿದ್ದಪ್ಪ ಜಿ. ಆರ್. ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ‘ಕನ್ನಡ ಕಾವ್ಯ ಸಂಸ್ಕೃತಿ’ ಕಮ್ಮಟ | ಜೂನ್ 29 ಹಾಗೂ 30
    Next Article ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಅವರ ಜನ್ಮ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ |ಜೂನ್ 11
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.