Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026

    ಮಂಗಳೂರಿನ ಪುರಭವನದಲ್ಲಿ ‘ಸ್ವರ ಸಂಕ್ರಾಂತಿ’ ಹಿಂದೂಸ್ಥಾನಿ ಸಂಗೀತ ಕಛೇರಿ | ಜನವರಿ 14

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ದೇರೆಬೈಲು ಕೊಂಚಾಡಿಯಲ್ಲಿ ‘ಸೂರ್ಯ ರತ್ನ’ ಯಕ್ಷಗಾನ ಬಯಲಾಟ
    Yakshagana

    ದೇರೆಬೈಲು ಕೊಂಚಾಡಿಯಲ್ಲಿ ‘ಸೂರ್ಯ ರತ್ನ’ ಯಕ್ಷಗಾನ ಬಯಲಾಟ

    February 17, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ದೇರೆಬೈಲು ಕೊಂಚಾಡಿಯ ಶ್ರೀ ರಾಮ ಭಜನಾ ಮಂದಿರ (ರಿ) ಇದರ ವಿಜಯಲಕ್ಮೀ ಎಲ್.ಎನ್. ಮತ್ತು ಬಳಗದವರಿಂದ ‘ಸೂರ್ಯ ರತ್ನ’ ಎಂಬ ಪ್ರಸಂಗದ ಯಕ್ಷಗಾನ ಬಯಲಾಟವು ದಿನಾಂಕ 16 ಫೆಬ್ರವರಿ 2025ರಂದು ದೇರೆಬೈಲು ಕೊಂಚಾಡಿಯಲ್ಲಿ ಜರಗಿತು.

    ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಗಾಯತ್ರಿ ಎ. ರಾವ್ “ಯಕ್ಷಗಾನವು ಇಂದು ಸಂಕ್ರಮಣ ಪಥದಲ್ಲಿದೆ. ಅಬಾಲವೃದ್ಧರಾದಿಯಾಗಿ ಈ ಕಲೆಯ ಬಗ್ಗೆ ಆಸಕ್ತಿ ಹೊಂದಿ ಒಂದೊಂದು ರೀತಿಯಲ್ಲಿ ಕಲಾಮಾತೆಯ ಸೇವೆ ಮಾಡುತ್ತಿದ್ದಾರೆ. ಸಾಧನೆಯಿಂದ ಸ್ತ್ರೀ-ಪುರುಷ ಬೇಧವಿಲ್ಲದೆ ಇಲ್ಲಿ ಎಲ್ಲರೂ ಕಲಾವಿದರಾಗುತ್ತಿದ್ದಾರೆ. ಯಕ್ಷಕಲಾ ಮಾತೆಯ ಮಡಿಲಲ್ಲಿ ಕುಣಿದು ನರ್ತಿಸಿ ಹರ್ಷಿಸುತ್ತಿದ್ದಾರೆ. ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ವತಿಯಿಂದ ವಿಜಯಲಕ್ಮೀ ಮತ್ತು ತಂಡದಿಂದ ಜರಗುವ ಯಕ್ಷಗಾನವೂ ಇದಕ್ಕೆ ಸಾಕ್ಷಿ. ಈ ಪರಂಪರೆ ಬೆಳೆಯಲಿ” ಎ೦ದು ಶುಭ ಹಾರೈಸಿದರು.

    ಶ್ರೀ ರಾಮ ಭಜನಾ ಮಂದಿರದ ಶ್ರೀ ವಿಜಯಕುಮಾರ್ “ಇಂತಹ ಸತ್ಕಾರ್ಯಗಳಿಗೆ ನಮ್ಮ ಮಂದಿರ ಮುಕ್ತವಾಗಿದೆ. ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜನರನ್ನು ಸರಿದಾರಿಗೆ ಒಯ್ದು, ಸಮಾಜದ ಅಂಕು-ಡೊಂಕುಗಳನ್ನು ಸರಿಪಡಿಸುತ್ತದೆ. ಒಟ್ಟಾಗಿ ಸಾಗುವ ಕಲೆಯನ್ನು ಕಲಿಸುತ್ತದೆ. ಕಾರ್ಯಕ್ರಮ ಯಶಸ್ಸಾಗಲಿ” ಎಂದು ಶುಭ ಹಾರೈಸಿದರು.

    ಎಂ.ಸಿ.ಎಫ್.ನ ನಿವೃತ್ತ ಉದ್ಯೋಗಿ ವಿಜಯಕುಮಾರ್ ಎನ್., ಇಂಜಿನಿಯರ್ ಗಿರೀಶ್, ವರ್ಕಾಡಿ ಮಧುಸೂದನ ಅಲೆವೂರಾಯ, ಉದ್ಯಮಿ ಶ್ರೀ ಶಿವಪ್ರಸಾದ ಪ್ರಭು ಉಪಸ್ಥಿತರಿದ್ದರು. ಶ್ರೀ ಅಶೋಕ್ ಬಿ. ಯಕ್ಷಗಾನ ಶೈಲಿಯಲ್ಲಿ ಪ್ರಾರ್ಥನೆಗೈದರು. ಶ್ರೀಮತಿ ರಮ್ಯಾ ರಾಜ್ ಸ್ವಾಗತಿಸಿ, ಯಕ್ಷಗುರು ವರ್ಕಾಡಿ ರವಿ ಅಲೆವೂರಾಯ ನಿರ್ವಹಿಸಿ, ಶ್ರೀಮತಿ ಕೃಪಾ ಖಾರ್ವಿ ಧನ್ಯವಾದವಿತ್ತರು. ಬಳಿಕ ವಿಜಯಲಕ್ಮೀ ಎಲ್.ಎನ್. ತಂಡದಿಂದ ‘ಸೂರ್ಯ ರತ್ನ’ ಎಂಬ ಆಖ್ಯಾನದ ಪ್ರದರ್ಶನ ನಡೆಯಿತು.

    yakshagana
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ‘ಯುವ ಯುಗಳ ನೃತ್ಯ’ ಕಾರ್ಯಕ್ರಮ | ಫೆಬ್ರವರಿ 21
    Next Article ಉಡುಪಿ ಎಂ.ಜಿ.ಎಂ. ಕಾಲೇಜಿನಲ್ಲಿ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ’ | ಫೆಬ್ರವರಿ 22
    roovari

    Add Comment Cancel Reply


    Related Posts

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ಉಳಿಯ ಮನೆಯ ಸುಧಾ ಮಂದಿರದಲ್ಲಿ ವಾರದ ಕೂಟ ತಾಳಮದ್ದಳೆ

    January 12, 2026

    ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಘಾಟನೆಗೊಂಡ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26’

    January 12, 2026

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಂಘದ ಪಾಕ್ಷಿಕ ತಾಳಮದ್ದಳೆ

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.