ಬೆಂಗಳೂರು : ಸಾಲಿಗ್ರಾಮ ಮಕ್ಕಳ ಮೇಳ (ರಿ.) ಕೋಟ ಇದರ ವತಿಯಿಂದ ನಡೆಯುವ ಸುವರ್ಣ ಪರ್ವ -11ರ ಸರಣಿಯಲ್ಲಿ ಕರ್ನಾಟಕ ಯಕ್ಷಧಾಮ ಮಂಗಳೂರು ಮತ್ತು ಪದ್ಮಕಮಲ ಟ್ರಸ್ಟ್ ಬೆಂಗಳೂರು ಇವರ ಸಹಯೋಗದೊಂದಿಗೆ ಸುವರ್ಣ ಸಮ್ಮಾನ – ಯಕ್ಷಗಾನ ಪ್ರದರ್ಶನವನ್ನು ದಿನಾಂಕ 08 ಜೂನ್ 2025ರಂದು ಮಧ್ಯಾಹ್ನ 2-00 ಗಂಟೆಗೆ ಬೆಂಗಳೂರಿನ ಪರಂಪರಾ ಅಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.
ಮಕ್ಕಳ ಯಕ್ಷಗಾನ ಕ್ಷೇತ್ರದ ಅನನ್ಯ ಸಾಧಕರಾದ ಕೆ. ಮೋಹನ್ ಹೊಳ್ಳ, ಶ್ರೀನಿವಾಸ ಸಾಸ್ತಾನ, ಕೃಷ್ಣಮೂರ್ತಿ ತುಂಗ ಕೆ., ಡಾ. ಶಿವಕುಮಾರ್ ಬೇಗಾರ್, ಡಾ. ರಾಧಾಕೃಷ್ಣ ಉರಾಳ ಮತ್ತು ಶಂಕರ ಬಾಳ್ಕುದ್ರು ಇವರಿಗೆ ಸುವರ್ಣಪರ್ವ ಗೌರವ ಪುರಸ್ಕಾರ ನೀಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಶಶಿಕಾಂತ್ ಶೆಟ್ಟಿ ಕಾರ್ಕಳ ಇವರ ನಿರ್ದೇಶನದಲ್ಲಿ ವೃತ್ತಿ ಕಲಾವಿದರಿಂದ ‘ಶ್ರೀ ದೇವಿ ವಿಜಯ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನ ನಡೆಯಲಿದೆ.