Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ಸಾಲಿಗ್ರಾಮ ಮಕ್ಕಳ ಮೇಳದಿಂದ ‘ಸುವರ್ಣ ಪರ್ವ -2’
    Felicitation

    ಮಂಗಳೂರಿನಲ್ಲಿ ಸಾಲಿಗ್ರಾಮ ಮಕ್ಕಳ ಮೇಳದಿಂದ ‘ಸುವರ್ಣ ಪರ್ವ -2’

    October 22, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಐವತ್ತರ ವಸಂತದಲ್ಲಿರುವ ಕೋಟದ ಸಾಲಿಗ್ರಾಮ ಮಕ್ಕಳ ಮೇಳವು ಮಂಗಳೂರಿನ ಕಲ್ಕೂರ ಪ್ರತಿಷ್ಠಾನ ಮತ್ತು ಕರ್ಣಾಟಕ ಯಕ್ಷಧಾಮದ ಆಶ್ರಯದಲ್ಲಿ ದಿನಾಂಕ 20 ಅಕ್ಟೋಬರ್ 2024ರ ರವಿವಾರದಂದು ಮಂಗಳೂರಿನ ಡಾನ್ ಬಾಸ್ಕೋ ಸಭಾಂಗಣದಲ್ಲಿ ಆಯೋಜಿಸಿದ ಸುವರ್ಣ ಪರ್ವ -2 ಕಾರ್ಯಕ್ರಮ ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಇವರು ಮಾತನಾಡಿ “ಯಕ್ಷಗಾನದ ಮೂಲಕ ಮಕ್ಕಳಿಗೆ ಕರಾವಳಿಯ ಸಾಂಸ್ಕೃತಿಕ ಲೋಕದ ಪರಿಚಯದ ಜತೆಗೆ ಪೌರಾಣಿಕ ಸಂಗತಿಗಳನ್ನು ಮನಮುಟ್ಟುವ ಹಾಗೆ ತಲುಪಿಸುವ ಪ್ರಯತ್ನ ಸಾಲಿಗ್ರಾಮ ಮಕ್ಕಳ ಮೇಳದಿಂದ ಅವಿರತವಾಗಿ ನಡೆದುಕೊಂಡು ಬಂದಿದೆ. ಯಕ್ಷಲೋಕಕ್ಕೆ ಸಾಲಿಗ್ರಾಮ ಮಕ್ಕಳ ಮೇಳದ ಕೊಡುಗೆ ಅವಿಸ್ಮರಣೀಯವಾದುದು. ಸನಾತನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಸುಮಾರು ಐವತ್ತು ವರ್ಷಗಳ ಕಾಲ ಉಡುಪ ಮತ್ತು ಹಂದೆಯವರದು ಸಾರ್ಥಕ ಪ್ರಯತ್ನ” ಎಂದರು.

    ಮುಖ್ಯ ಅಭ್ಯಾಗತರಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಮಾತನಾಡಿ “ಸಾಲಿಗ್ರಾಮ ಮಕ್ಕಳ ಮೇಳವು ಕರಾವಳಿಯ ಹೆಮ್ಮೆಯ ಅಭಿಮಾನದ ಸಂಸ್ಥೆ. ನೂರಾರು ವರ್ಷಗಳ ಕಾಲ ಬಾಳಿ ಬದುಕಿ ಬೆಳಗಲಿ” ಎಂದು ಹಾರೈಸಿದರು. ಯಕ್ಷಾರಾಧನ ಕಲಾ ಕೇಂದ್ರದ ಗುರು ವಿದುಷಿ ಸುಮಂಗಲಾ ರತ್ನಾಕರ್ ಇವರು “ಸಾಲಿಗ್ರಾಮ ಮಕ್ಕಳ ಮೇಳವು ದೂರದೃಷ್ಟಿತ್ವ, ಶಿಸ್ತು, ಚೌಕಟ್ಟು, ಪ್ರಸ್ತುತಿ, ಗುಣಮಟ್ಟದಿಂದ ಅನನ್ಯವಾಗಿ ಗುರುತಿಸಿಕೊಂಡಿದೆ” ಎಂದು ಆಶಯ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಮಕ್ಕಳ ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಕೃಷಿ ಮಾಡಿದ ಮಂಗಳೂರಿನ ಕೋಡಿಕಲ್ ಸರಯೂ ಬಾಲ ಯಕ್ಷ ವೃಂದ ಮಕ್ಕಳ ಮೇಳದ ನಿರ್ದೇಶಕ ರವಿ ಅಲೆವೂರಾಯ ವರ್ಕಾಡಿ ಇವರಿಗೆ ‘ಸುವರ್ಣ ಯಕ್ಷ ಕಲಾ ಗೌರವ’ ಪುರಸ್ಕಾರ ನೀಡಿ ಗೌರವಿಸಲಾಯಿತು.

    ಪತ್ತುಮುಡಿಯ ಜನತಾ ಡಿಲಕ್ಸ್ ಮಾಲಕರಾದ ಸೂರ್ಯನಾರಾಯಣ ರಾವ್, ಭಾರತೀಯ ಜೀವ ವಿಮಾ ನಿಗಮದ ನಿವೃತ್ತ ಅಧಿಕಾರಿ ಪಿ.ಎಲ್. ಉಪಾಧ್ಯಾಯ, ಲೆಕ್ಕ ಪರಿಶೋಧಕರಾದ ಶಿವಾನಂದ ಪೈ ಮಂಗಳೂರು, ಮನಸ್ವಿನಿ ಆಸ್ಪತ್ರೆಯ ವೈದ್ಯರಾದ ರವೀಶ್ ತುಂಗ, ಡಾ. ದಿನೇಶ್ಚಂದ್ರ ಹಂದೆ, ಮಕ್ಕಳ ಮೇಳದ ಕಾರ್ಯಾಧ್ಯಕ್ಷ ಕೆ. ಮಹೇಶ್ ಉಡುಪ, ಉಪಾಧ್ಯಕ್ಷ ಜನಾರ್ದನ ಹಂದೆ, ಪ್ರಾಕ್ತನ ಕಲಾವಿದ ಪ್ರಸಾದ ಹಂದೆ ಉಪಸ್ಥಿತರಿದ್ದರು. ಮಕ್ಕಳ ಮೇಳದ ನಿರ್ದೇಶಕ ಸುಜಯೀಂದ್ರ ಹಂದೆ ಪ್ರಸ್ತಾವಿಸಿ, ಸ್ವಾಗತಿಸಿದರು. ಅಭಿಲಾಷ ಸೋಮಯಾಜಿ ಅಭಿನಂದಿಸಿ, ಶ್ರೀರಾಮ್ ಮಧ್ಯಸ್ಥ ವಂದಿಸಿ, ಶಿಕ್ಷಕಿ ಮಾಧುರಿ ಶ್ರೀರಾಮ್ ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಕ್ಕಳ ಮೇಳದ ಕಲಾವಿದರಿಂದ ‘ವೀರ ವೃಷಸೇನ’ ಯಕ್ಷಗಾನ ಪ್ರದರ್ಶನ ನಡೆಯಿತು.

    ಚಿತ್ರಕೃಪೆ : ಅರವಿಂದ ಕುಡ್ಲ

    Share. Facebook Twitter Pinterest LinkedIn Tumblr WhatsApp Email
    Previous Articleಕಲಾಕುಂಚದಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಾಜ್ಯ ಮಟ್ಟದ ಉಚಿತ ಪ್ರಬಂಧ ಸ್ಪರ್ಧೆ
    Next Article ‘ಶ್ರೀ ವಿಶ್ವೇಶತೀರ್ಥ ಪ್ರಶಸ್ತಿ’ಗೆ ಯಶಸ್ವೀ ಕಲಾವೃಂದ (ರಿ.) ಕೊಮೆ ತೆಕ್ಕಟ್ಟೆ ಸಂಸ್ಥೆ ಆಯ್ಕೆ
    roovari

    Add Comment Cancel Reply


    Related Posts

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ

    May 7, 2025

    ಡಾ. ಹರಿಕೃಷ್ಣ ಪುನರೂರು ಅಭಿವಂದನ ಮತ್ತು ‘ಕರ್ಮಯೋಗಿ’ ಬಿರುದು ಪ್ರದಾನ ಸಮಾರಂಭ | ಮೇ 10

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.