Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ‘ಜಾನಪದ ಕಲೆಗಳ ಕಲಾ ಪ್ರದರ್ಶನ’ | ಆಗಸ್ಟ್ 22

    August 21, 2025

    ಸೋಮೇಶ್ವರದ ಆನಂದಾಶ್ರಮ ಪ್ರೌಢ ಶಾಲೆಯಲ್ಲಿ ‘ಡೆನ್ನ ಡೆನ್ನಾನ – ಪದ ಪನ್ಕನ’ | ಆಗಸ್ಟ್ 22

    August 21, 2025

    ಮೂಡುಬಿದಿರೆಯಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

    August 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಎಂ. ಎನ್. ಮಧ್ಯಸ್ಥರಿಗೆ ‘ಸುವರ್ಣ ಪರ್ವ ಪುರಸ್ಕಾರ’ | ನವೆಂಬರ್ 23
    Awards

    ಎಂ. ಎನ್. ಮಧ್ಯಸ್ಥರಿಗೆ ‘ಸುವರ್ಣ ಪರ್ವ ಪುರಸ್ಕಾರ’ | ನವೆಂಬರ್ 23

    November 22, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಸಾಲಿಗ್ರಾಮ : ಕೋಟದ ಸಾಲಿಗ್ರಾಮ ಮಕ್ಕಳ ಮೇಳವು ತನ್ನ ಐವತ್ತರ ಸಂಭ್ರಮಾಚರಣೆಯ ಸುವರ್ಣ ಪರ್ವದ ಮೂರನೆಯ ಕಾರ್ಯಕ್ರಮವನ್ನು ಗಿರಿಜಾ ಶಂಕರನಾರಾಯಣ ಮಧ್ಯಸ್ಥ ಚಾರಿಟೇಬಲ್ ಟ್ರಸ್ಟ್ (ರಿ) ಪಾರಂಪಳ್ಳಿ, ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಕಾರ್ಕಡ ಗೆಳೆಯರ ಬಳಗದ ಜಂಟಿ ನೆರವಿನೊಂದಿಗೆ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಪ್ರಾಂಗಣದಲ್ಲಿ 23 ನವಂಬರ್ 2024ರ ಶನಿವಾರದಂದು ಆಯೋಜಿಸಿದೆ.
    ಕಾರ್ಯಕ್ರಮದಲ್ಲಿ ಮಕ್ಕಳ ಕ್ಷೇತ್ರದಲ್ಲಿ ಅನುಪಮವಾದ ಕೃಷಿ ಮಾಡಿದ ನಿವೃತ್ತ ಅಧ್ಯಾಪಕ, ಯಕ್ಷ ಗುರು, ಲೇಖಕ, ಹವ್ಯಾಸಿ ಯಕ್ಷಗಾನ ಮತ್ತು  ನಾಟಕ ಕಲಾವಿದರಾದ ಮಣೂರಿನ ಎಂ. ಎನ್. ಮಧ್ಯಸ್ಥರಿಗೆ ಮಕ್ಕಳ ಮೇಳದ ಸುವರ್ಣ ಪರ್ವ ಪುರಸ್ಕಾರವನ್ನು ನೀಡಿ ಗೌರವಿಸಲಾಗುವುದು.
    ಗುರುನರಸಿಂಹ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಕೆ. ಎಸ್. ಕಾರಂತರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಕನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಉದ್ಘಾಟಿಸಲಿದ್ದಾರೆ. ನಿವೃತ್ತ ಅಂಚೆ ಪಾಲಕ ಹಾಗೂ  ಪ್ರಗತಿಪರ ಕೃಷಿಕರಾದ ಪಾರಂಪಳ್ಳಿ ಪಿ. ಸದಾಶಿವ ಮಧ್ಯಸ್ಥ ಹಾಗೂ ಕೆನರಾಬ್ಯಾಂಕ್ ಇದರ ನಿವೃತ್ತ ಅಧಿಕಾರಿ ಲಕ್ಷ್ಮೀ ನಾರಾಯಣ ಮಧ್ಯಸ್ಥ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.  ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಂಘದ ಮಾಜಿ ಅಧ್ಯಕ್ಷರಾದ ಐರೋಡಿ ಜಗದೀಶ ಕಾರಂತ, ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕ ಎಚ್. ಶ್ರೀದರ ಹಂದೆ, ಕೋಟ ಸಿ.ಏ. ಬ್ಯಾಂಕ್‌ ಇದರ ಅಧ್ಯಕ್ಷರಾದ ಡಾ. ಕೃಷ್ಣ ಕಾಂಚನ್,  ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷರಾದ ತಾರಾನಾಥ ಹೊಳ್ಳ , ಸಾಲಿಗ್ರಾಮ ಮಕ್ಕಳ ಮೇಳದ ಕಾರ್ಯಾಧ್ಯಕ್ಷ ಕೆ. ಮಹೆಶ್ ಉಡುಪ, ಅಧ್ಯಕ್ಷ ಬಲರಾಮ ಕಲ್ಕೂರ, ಉಪಾಧ್ಯಕ್ಷ ಜನಾರ್ದನ ಹಂದೆ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.
    ಸಭಾ ಕಾರ್ಯಕ್ರಮದ ಬಳಿಕ ಮಕ್ಕಳ ಮೇಳದ ಕಲಾವಿದರಿಂದ ಕಾರ್ಕಡ ಶ್ರೀನಿವಾಸ ಉಡುಪ ವಿರಚಿತ ‘ವೀರವೃಷಸೇನ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಮಕ್ಕಳ ಮೇಳದ ನಿರ್ದೇಶಕ ಸುಜಯೀಂದ್ರ ಹಂದೆ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ
    Next Article ಪ್ರಾಧ್ಯಾಪಕ, ಲೇಖಕ ಹಾಗೂ ಹಿರಿಯ ಪತ್ರಕರ್ತ ಪ್ರೊ. ಪಿ. ಕೆ. ಮೊಯ್ಲಿ ನಿಧನ
    roovari

    Add Comment Cancel Reply


    Related Posts

    ಉಡುಪಿಯಲ್ಲಿ ‘ಸೇಡಿಯಾಪು ಪ್ರಶಸ್ತಿ’ ಹಾಗೂ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    August 21, 2025

    ಎಡನೀರಿನಲ್ಲಿ ಗಿರಿಜಾಕಲ್ಯಾಣ ಯಕ್ಷಗಾನ ಪ್ರದರ್ಶನ

    August 20, 2025

    ‘ಟೊಟೊ ಪುರಸ್ಕಾರ’ಕ್ಕೆ ಕೃತಿಗಳ ಆಹ್ವಾನ

    August 20, 2025

    ಎಡನೀರು ಶ್ರೀಮಠದಲ್ಲಿ ಯಕ್ಷಗಾನ ತಾಳಮದ್ದಲೆ

    August 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.