Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಲಾ ಸಾಧಕರಿಗೆ ಸುವರ್ಣ ರಂಗ ಸನ್ಮಾನ – 2023
    News

    ಕಲಾ ಸಾಧಕರಿಗೆ ಸುವರ್ಣ ರಂಗ ಸನ್ಮಾನ – 2023

    February 16, 2023Updated:August 19, 20231 Comment1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    16 ಫೆಬ್ರವರಿ 2023, ಮಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಕುತ್ತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಹಾ ರಥೋತ್ಸವ ಶುಭ ಸಂದರ್ಭದಲ್ಲಿ ಸುವರ್ಣ ಸಾಂಸ್ಕೃತಿಕ ವೈಭವದ ಸಂಭ್ರಮವು ಫೆಬ್ರವರಿ 20ರಂದು ರಾತ್ರಿ ಏಳು ಗಂಟೆಗೆ ಬೆಳ್ತಂಗಡಿ ಸುವರ್ಣ ಆರ್ಕೇಡ್ ನಲ್ಲಿ ನಡೆಯಲಿದೆ.
    13ನೇ ವರ್ಷದ ಈ ಸುವರ್ಣ ಸಾಂಸ್ಕೃತಿಕ ವೈಭವದ ಸಂಭ್ರಮದಲ್ಲಿ ನಾಡಿನ ಪ್ರತಿಷ್ಠಿತ ಮೂವರು ಕಲಾ ಸಾಧಕರನ್ನು ಗುರುತಿಸಿ ಗೌರವಿಸಲಾಗುವುದು. ಭರತನಾಟ್ಯ ಕ್ಷೇತ್ರದಲ್ಲಿ ಅಮೋಘ ಸೇವೆ ಸಲ್ಲಿಸಿದ ನಾಟ್ಯಾಚಾರ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಕಮಲಾಕ್ಷ ಆಚಾರ್, ಯಕ್ಷಗಾನದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದ ಅರುವ ಕೊರಗಪ್ಪ ಶೆಟ್ಟಿ, ಸ್ಯಾಕ್ಸೋಫೋನ್ ಮಾಂತ್ರಿಕ ರಾಜ್ಯದ ಸ್ಯಾಕ್ಸೋಫೋನ್ ವಾದನದಲ್ಲಿ ಏಕೈಕ ಆಕಾಶವಾಣಿ ‘ಎ’ ಗ್ರೇಡ್ ಕಲಾವಿದರಾದ ಶ್ರೀ ಪ್ರಕಾಶ್ ದೇವಾಡಿಗ ಈ ಮೂರು ಮಂದಿಗೆ ಸುವರ್ಣ ರಂಗ ಸನ್ಮಾನ್ – 2023 ನೀಡಿ ಗೌರವಿಸಲಾಗುವುದೆಂದು ಪ್ರತಿಷ್ಠಾನದ ಅಧ್ಯಕ್ಷ ಶ್ರೀ ಸಂಪತ್ ಸುವರ್ಣ ತಿಳಿಸಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ “ತುಳುನಾಡ ತುಡರ್” ಎಂಬ ಸತ್ಯಕತೆಯನ್ನು ಮುಲ್ಕಿಯ ನವವೈಭವ ಕಲಾವಿದರು ಆಡಿ ತೋರಿಸಲಿರುವರು.

     

    Share. Facebook Twitter Pinterest LinkedIn Tumblr WhatsApp Email
    Previous Articleಪ್ರವರ ಥಿಯೇಟರ್ ತಂಡದಿಂದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ “ಅಣ್ಣನ ನೆನಪು” ಸಾಕ್ಷ್ಯ ನಾಟಕ
    Next Article ‘ಬಲಿಪ ಹಾಡುಗಾರಿಕೆ’ಯ ಕಂಚಿನ ಕಂಠ ಮೌನವಾಗಿದೆ
    roovari

    1 Comment

    1. Pingback: ಬೆಳ್ತಂಗಡಿ: ಮೂವರು ಕಲಾ ಸಾಧಕರಿಗೆ ಪ್ರತಿಷ್ಠಿತ ಸುವರ್ಣ ರಂಗ ಸಮ್ಮಾನ್ - Roovari

    Add Comment Cancel Reply


    Related Posts

    “Sri Krishna Leela Amrutham” Transcends audiences at Bharat Nritya Utsav 2025, Chennai

    February 5, 2025

    ಮಂಗಳೂರಿನಲ್ಲಿ ಗಾಯಕಿ ಸೂರ್ಯಗಾಯತ್ರಿ ‘ರಾಮಂ ಭಜೇ’ | ಜ. 12ರಂದು

    January 11, 2025

    ಮಂಗಳೂರಿನ ಪುರಭವನದಲ್ಲಿ ‘ರಾಜ್ಯಮಟ್ಟದ ವಚನ ಸಾಹಿತ್ಯ ಸಮ್ಮೇಳನ’ | ಜನವರಿ 04

    December 31, 2024

    ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ  

    October 21, 2024

    1 Comment

    1. Pingback: ಬೆಳ್ತಂಗಡಿ: ಮೂವರು ಕಲಾ ಸಾಧಕರಿಗೆ ಪ್ರತಿಷ್ಠಿತ ಸುವರ್ಣ ರಂಗ ಸಮ್ಮಾನ್ - Roovari

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.