Subscribe to Updates

    Get the latest creative news from FooBar about art, design and business.

    What's Hot

    ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದ ‘ಕಥಾಬಿಂದು ಪ್ರಕಾಶನ’

    January 15, 2026

    ಬೆಂಗಳೂರಿನಲ್ಲಿ ಕರ್ನಾಟಕ ಗಜಲ್ ಅಕಾಡೆಮಿಯಿಂದ ‘ಕನ್ನಡ ಗಜಲ್ ಕಮ್ಮಟ’ | ಜನವರಿ 18  

    January 15, 2026

    ಕೋಟ ಪಟೇಲರ ಮನೆ ಅಂಗಣದಲ್ಲಿ ಉಡುಪ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ | ಜನವರಿ 18

    January 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ‘ಸ್ವರ ಕುಡ್ಲ’ ಸೀಸನ್-5 ಸಂಗೀತ ಸ್ಪರ್ಧೆ ಉದ್ಘಾಟನೆ
    Competition

    ಮಂಗಳೂರಿನಲ್ಲಿ ‘ಸ್ವರ ಕುಡ್ಲ’ ಸೀಸನ್-5 ಸಂಗೀತ ಸ್ಪರ್ಧೆ ಉದ್ಘಾಟನೆ

    September 21, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವತಿಯಿಂದ ದಿ. ಲಿಯಾಂಡರ್ ವರ್ನನ್ ನೊರೊನ್ಹಾ ಸಂಸ್ಮರಣೆಯ ಸಹ ಪ್ರಾಯೋಜಕತ್ವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಏರ್ಪಡಿಸಿದ್ದ ‘ಸ್ವರ ಕುಡ್ಲ ಸೀಸನ್ -5’ ಸಂಗೀತ ಸ್ಪರ್ಧೆಯ ಉದ್ಘಾಟನಾ ಸಮಾರಂಭವು ದಿನಾಂಕ 17-09-2023ರಂದು ನಡೆಯಿತು.

    ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರ್ನಲ್ ಶರತ್ ಭಂಡಾರಿ ನಿಟ್ಟೆಗುತ್ತು ಇವರು ಮಾತನಾಡುತ್ತಾ “ಸಂಗೀತ ಕೇಳುವುದರಿಂದ ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯುತ್ತದೆ. ಉತ್ತಮ ಸಂಗೀತಗಳು ಮನಸ್ಸಿಗೆ ಮುದ ನೀಡುತ್ತವೆ. ಸಂಗೀತ ಕೇಳುವುದು ಉತ್ತಮ ಅಭ್ಯಾಸ” ಎಂದು ಅಭಿಪ್ರಾಯಪಟ್ಟರು.

    ಖ್ಯಾತ ಗಾಯಕ ಟಾಗುರ್ ದಾಸ್ ಅವರು ಸ್ಪರ್ಧೆಗೆ ಚಾಲನೆ ನೀಡಿದರು. ಒಕ್ಕೂಟದ ಅಧ್ಯಕ್ಷ ಮೋಹನ್ ಪ್ರಸಾದ್ ನಂತೂರು ಅಧ್ಯಕ್ಷತೆ ವಹಿಸಿದ್ದರು. ಸಿಂಫನಿ ಮ್ಯೂಸಿಕಲ್ ಇನ್ ಸ್ಟ್ರುಮೆಂಟ್ ಮಳಿಗೆಯ ಮಾಲಕರು ಲೊಯ್‌ ನೊರೊನ್ಹಾ ದಂಪತಿ ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮೋಹನ್ ರಾವ್, ಒಕ್ಕೂಟದ ಸ್ಥಾಪಕ ಅಧ್ಯಕ್ಷ ಸದಾಶಿವ ದಾಸ್ ಪಾಂಡೇಶ್ವರ್ ಅತಿಥಿಗಳಾಗಿ ಭಾಗವಹಿಸಿದ್ದರು.

    ಒಕ್ಕೂಟದ ಪೂರ್ವಾಧ್ಯಕ್ಷ ತೋನ್ಸೆ ಪುಷ್ಕಳ ಕುಮಾರ್‌, ಪ್ರಮುಖರಾದ ಮುರಳಿಧರ ಕಾಮತ್, ಮಹಮ್ಮದ್ ಇಕ್ಬಾಲ್, ರಮೇಶ್ ಸಾಲ್ಯಾನ್, ಆರ್.ಜೆ. ಮೋಹಿತ್, ಐವನ್ ಡಿಸೋಜ, ಖಜಾಂಚಿ ಧನ್‌ರಾಜ್, ಜಗದೀಶ್ ಶೆಟ್ಟಿ, ನವಗಿರಿ ಗಣೇಶ್‌, ಮಲ್ಲಿಕಾ ಶೆಟ್ಟಿ, ಕೇಶವ ಕನಿಲ, ಹುಸೇನ್‌ ಕಾಟಿಪಳ್ಳ, ರಂಜನ್‌ ದಾಸ್, ದಿನಕರ್ ಎನ್.ಎಂ., ಸಂತೋಷ್ ಅಂಚನ್, ಉಡುಪಿ ಘಟಕದ ಸುಭಾಷಿತ್, ರಾಧಾಕೃಷ್ಣ ಭಟ್, ಮುಕ್ತ ರಾವ್‌ ಮತ್ತಿತರರು ಉಪಸ್ಥಿತರಿದ್ದರು. ಸಂಗೀತ ಕಲಾವಿದರಾದ ಗಣೇಶ್ ಪ್ರಸಾದ್ ಹಾಗೂ ಜಲೀಲ್ ಪಾಶಾ ಬೆಂಗಳೂರು ತೀರ್ಪುಗಾರರಾಗಿ ಸಹಕರಿಸಿದರು. ಪ್ರಧಾನ ಕಾರ್ಯದರ್ಶಿ ದೀಪಕ್ ರಾಜ್ ಉಳ್ಳಾಲ್ ಸ್ವಾಗತಿಸಿದರು. ಕೃಷ್ಣಪ್ರಸಾದ್ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಎಡನೀರು ಮಠದಲ್ಲಿ ಸಾಹಿತ್ಯ ಗಾನ ನೃತ್ಯ ವೈಭವ
    Next Article ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನಬೈಲ್ ನಿಧನ
    roovari

    Add Comment Cancel Reply


    Related Posts

    ಮಂಗಳೂರಿನ ರಾಮಕೃಷ್ಣ ಮಠದ ಅಮೃತ ಭವನದಲ್ಲಿ ‘ಆರಾಧನೋತ್ಸವ 2026’ | ಜನವರಿ 17 ಮತ್ತು 18

    January 15, 2026

    ಮಂಗಳೂರಿನ ಪುರಭವನದಲ್ಲಿ ‘ಸ್ವರ ಸಂಕ್ರಾಂತಿ’ ಹಿಂದೂಸ್ಥಾನಿ ಸಂಗೀತ ಕಛೇರಿ | ಜನವರಿ 14

    January 13, 2026

    ಶಕ್ತಿನಗರದ ಸರಕಾರಿ ವಿದ್ಯಾ ಸಂಸ್ಥೆಯಲ್ಲಿ ‘ರಂಗೋಲಿ ಸ್ಪರ್ಧೆ’ | ಜನವರಿ 18

    January 13, 2026

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.