Subscribe to Updates

    Get the latest creative news from FooBar about art, design and business.

    What's Hot

    ಪರಿಚಯ | ಯಕ್ಷ ಪ್ರತಿಭೆಯ ಕಲಾವಲ್ಲರಿ – ಶ್ರುತಿ ಭಟ್ ಮಾರಣಕಟ್ಟೆ

    July 6, 2025

    ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅವಿಭಜಿತ ದ. ಕ. ಜಿಲ್ಲಾ ಅಧ್ಯಕ್ಷರಾಗಿ ಕಲಾಶ್ರೀ ರಾಜಶ್ರೀ ಉಳ್ಳಾಲ್ ಆಯ್ಕೆ

    July 5, 2025

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿಚಾರ ಸಂಕಿರಣ ಮತ್ತು ಪುಸ್ತಕ ಲೋಕಾರ್ಪಣೆ
    Book Release

    ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿಚಾರ ಸಂಕಿರಣ ಮತ್ತು ಪುಸ್ತಕ ಲೋಕಾರ್ಪಣೆ

    September 9, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳೂರು ವಿವಿ, ವಿಶ್ವವಿದ್ಯಾನಿಲಯ ಕಾಲೇಜು, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ರಾಷ್ಟ್ರೀಯ ಸೇವಾ ಯೋಜನೆ, ಕಜೆಮಾರು ಕೆದಂಬಾಡಿ ಕುಂಬ್ರ ಜತ್ತಪ್ಪ ರೈ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ಆಯೋಜಿಸಲಾದ ಸರ್ವ ಸಮಾನತೆ-ಗಾಂಧೀಜಿ ವಿಚಾರಧಾರೆಯ ಪ್ರಸ್ತುತತೆ, ನಾಗರಿಕ ಸೇವೆಯಲ್ಲಿ ಸ್ವಚ್ಛತೆ ಮತ್ತು ಪ್ರಾಮಾಣಿಕತೆ ಕುರಿತ ವಿಚಾರ ಸಂಕಿರಣ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮವು ದಿನಾಂಕ 01-09-2023ರಂದು ನಡೆಯಿತು.

    ಈ ಕಾರ್ಯಕ್ರಮವನ್ನು ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಉದ್ಘಾಟಿಸಿ, ಮುಖ್ಯ ಅತಿಥಿಯಾಗಿ ಸಿ.ಪಿ.ಎಂ ಪಾಲಿಟ್ ಬ್ಯೂರೋ ಸದಸ್ಯ ಕೇರಳದ ಮಾಜಿ ಸಚಿವ ಎಂ.ಎ.ಬೇಬಿ ಭಾಗವಹಿಸಿದರು. ಮಾಜಿ ಸಂಸದ ಪಿ.ಕರುಣಾಕರನ್, ನಿವೃತ್ತ ಸೆಂಟ್ರಲ್ ಆಡಳಿತ ಟ್ರಿಬ್ಯೂನಲ್ ಸದಸ್ಯ ಸುಧೀರ್ ಕುಮಾರ್ ಉಪಸ್ಥಿತರಿದ್ದು, ಮಂಗಳೂರು ವಿವಿ.ಉಪ ಕುಲಪತಿ ಪ್ರೊ.ಜಯರಾಜ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ‘ಸಮಾನತೆಗಾಗಿ ಸಂಘರ್ಷ’ (ಹೋರಾಟದಲ್ಲೇ ಕೃಷ್ಣ ಶೆಟ್ಟಿ ಬದುಕು) ಕೃತಿಯನ್ನು ಸಂಸತ್‌ ಮಾಜಿ ಸದಸ್ಯ ಪಿ.ಕರುಣಾಕರನ್ ಅವರ ಪತ್ನಿ ಲೈಲಾ ಕರುಣಾಕರನ್ ಹಾಗೂ ಕೆ. ಪ್ರಮೋದ್ ಕುಮಾರ್ ರೈ ಅವರ ಸರ್ಕಾರಿ ಸೇವೆಯಿಂದ ಹೊಲದೆಡೆಗಿನ ನಡೆ ಎಂಬ ‘ಮಣ್ಣಿಗೆ ಮರಳುವ ಮುನ್ನ’ ಕೃತಿಯನ್ನು ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ವಿ.ಬಾಲಸುಬ್ರಹ್ಮಣ್ಯನ್ ಅವರು ಬಿಡುಗಡೆಗೊಳಿಸಿದರು.

    ಕುಂಬ್ರ ಜತ್ತಪ್ಪ ರೈ ಪ್ರತಿಷ್ಠಾನದ ಪ್ರಮುಖರಾದ ಪ್ರಮೋದ್ ರೈ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಜತಿನ್ ಕೃಷ್ಣ ಹಾಗೂ ಕೋನಾರ್ಕ್ ರೈ ಅತಿಥಿಗಳನ್ನು ಗೌರವಿಸಿದರು. ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ ವಂದಿಸಿದರು. ಮಂಗಳೂರು ವಿವಿ ಕಾಲೇಜಿನ ಯುವ ರೆಡ್‌ ಕ್ರಾಸ್ ಅಧಿಕಾರಿ ಡಾ.ಭಾರತಿ ಪಿಲಾರ್, ಮಂಗಳೂರು ವಿವಿಯ ರಾಷ್ಟ್ರೀಯ ಸೇವಾ ಯೋಜನಾ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ವಿಶ್ವ ಬಂಟ ಪ್ರತಿಷ್ಠಾನ ಪ್ರಶಸ್ತಿ’ಗೆ ಜಪ್ಪು ದಯಾನಂದ ಶೆಟ್ಟಿ ಆಯ್ಕೆ
    Next Article ಮಂಗಳೂರಿನಲ್ಲಿ ಭಾಷಣ ಮತ್ತು ಭಕ್ತಿಗೀತೆ ಸ್ಪರ್ಧೆ | ಸೆಪ್ಟೆಂಬರ್ 12ರಂದು
    roovari

    Add Comment Cancel Reply


    Related Posts

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025

    Book review | The Gory Account of Genocide in the Heaven of India

    July 5, 2025

    ಕೆನರಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ 108ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    July 5, 2025

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    July 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.