Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಾಂಗಣದಿಂದ ತಾಳಮದ್ದಳೆ ಸಪ್ತಾಹ ಕಾರ್ಯಕಾರಿಣಿ ಸಭೆ
    Yakshagana

    ಯಕ್ಷಾಂಗಣದಿಂದ ತಾಳಮದ್ದಳೆ ಸಪ್ತಾಹ ಕಾರ್ಯಕಾರಿಣಿ ಸಭೆ

    November 7, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿಶ್ವವಿದ್ಯಾನಿಲಯ ಡಾ. ದಯಾನಂದ ಪೈ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷ ಭಾರತಿ (ರಿ.) ಪುತ್ತೂರು ಸಹಯೋಗದೊಂದಿಗೆ ನಡೆಸುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮದ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ -2023’ ಏಕಾದಶ ಸರಣಿ ‘ಹನ್ನೊಂದನೇ ವರ್ಷದ ನುಡಿ ಹಬ್ಬ’ ದಿನಾಂಕ 19-11-2023ರಿಂದ 25-11-2023ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ಜರಗಲಿದೆ.

    ದಿನಾಂಕ 31-10-2023ರಂದು ನಗರದ ಖಾಸಗಿ ಹೋಟೆಲಿನಲ್ಲಿ ಜರಗಿದ ಯಕ್ಷಾಂಗಣದ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರು ‘ಸಪ್ತಾಹದಲ್ಲಿ ಏಳು ಜನಪ್ರಿಯ ಪ್ರಸಂಗಗಳ ತಾಳಮದ್ದಳೆ ಮತ್ತು ಗತಿಸಿದ ಹಿರಿಯರ ಸಂಸ್ಮರಣಾ ಕಾರ್ಯಕ್ರಮಗಳನ್ನು ನಡೆಸಲಾಗುವುದು’ ಎಂದರು.

    ಯಕ್ಷಾಂಗಣದ ಆಶ್ರಯದಲ್ಲಿ ‘ಶ್ರೀಹರಿ ಚರಿತ್ರೆ’ ಎಂಬ ಪರಿಕಲ್ಪನೆಯೊಂದಿಗೆ ಜರಗುವ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2023’ ನವೆಂಬರ್ 19ನೇ ಭಾನುವಾರ ಉದ್ಘಾಟನೆಗೊಳ್ಳಲಿದ್ದು ಅಂದಿನಿಂದ ಕ್ರಮವಾಗಿ ‘ಧ್ರುವ ಚರಿತ್ರೆ, ರುಕ್ಮಾಂಗದ ಚರಿತ್ರೆ, ಪ್ರಹ್ಲಾದ ಚರಿತ್ರೆ, ಅಂಬರೀಶ ಚರಿತ್ರೆ, ಅಜಾಮಿಳ ಚರಿತ್ರೆ, ಚಂದ್ರಹಾಸ ಚರಿತ್ರೆ’ – ಹೀಗೆ ಆರು ಕನ್ನಡ ಪ್ರಸಂಗಗಳನ್ನು ಸಂಯೋಜಿಸಲಾಗಿದೆ. ದಿನಾಂಕ 25 ರಂದು ಶನಿವಾರ ಸಮಾರೋಪ ಸಮಾರಂಭದ ಅಂಗವಾಗಿ ‘ಕರ್ಣ ಚರಿತ್ರೆ: ಏಕಿನಿ ಕರ್ಣೆ – ದೇವೆರೆಗ್ ಅರ್ಪಣೆ’ ಎಂಬ ತುಳು ಯಕ್ಷಗಾನ ಪ್ರಸಂಗವನ್ನು ಪ್ರಸ್ತುತಪಡಿಸಲಾಗುವುದು. ಸುಮಾರು 75 ಕ್ಕೂ ಹೆಚ್ಚಿನ ಹೆಸರಾಂತ ಯಕ್ಷಗಾನ ಕಲಾವಿದರು ಇದರಲ್ಲಿ ಭಾಗವಹಿಸಲಿರುವರು.

    ತುಳುನಾಡಿನ ರಂಗಭೂಮಿ, ಸಾಹಿತ್ಯ, ಯಕ್ಷಗಾನಗಳಲ್ಲಿ ದುಡಿದ ತುಳು ನಾಟಕ ಬ್ರಹ್ಮ ದಿ.ಬೋಳೂರು ರಾಮ ಕಿರೋಡಿಯನ್ ಅವರು ಜನಿಸಿ ಪ್ರಸ್ತುತ ನೂರು ವರ್ಷಗಳಾದ ಸಂದರ್ಭದಲ್ಲಿ ಅವರ ಶತಮಾನದ ಸ್ಮರಣೆಯನ್ನು ಯಕ್ಷಾಂಗಣದ ವೇದಿಕೆಯಲ್ಲಿ ನಡೆಸಲಾಗುವುದು. ನವೆಂಬರ್ 25ರಂದು ಜರಗುವ ಈ ಕಾರ್ಯಕ್ರಮದಲ್ಲಿ ಅವರ ಆಪ್ತರು ಮತ್ತು ಬಂಧು ವರ್ಗದವರು ಭಾಗವಹಿಸುವರು. ಅದಲ್ಲದೆ ಇತರ ದಿನಗಳಲ್ಲಿ ಯಕ್ಷಗಾನಕ್ಕಾಗಿ ದುಡಿದ ಹಿರಿಯ ಚೇತನಗಳ ಸಂಸ್ಮರಣೆಯನ್ನು ಸಾಂದರ್ಭಿಕವಾಗಿ ನಡೆಸಲಾಗುವುದು’ ಎಂದು ಭಾಸ್ಕರ ರೈ ಕುಕ್ಕುವಳ್ಳಿ ನುಡಿದರು.

    ಸಭೆಯಲ್ಲಿ ಉಪಾಧ್ಯಕ್ಷ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ, ಸಂಚಾಲಕ ರವೀಂದ್ರ ಶೆಟ್ಟಿ ಉಳಿದೊಟ್ಟು, ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಹಾಗೂ ಪ್ರಮುಖರಾದ ಕೆ. ರವೀಂದ್ರ ರೈ ಕಲ್ಲಿಮಾರು, ಕರುಣಾಕರ ಶೆಟ್ಟಿ ಪಣಿಯೂರು, ಉಮೇಶ ಗೇರುಕಟ್ಟೆ, ಕರುಣಾಕರ ಶೆಟ್ಟಿ ಬೆಳ್ತಂಗಡಿ, ಕೆ.ಲಕ್ಷೀನಾರಾಯಣ ರೈ ಹರೇಕಳ, ನಿವೇದಿತಾ ಎನ್.ಶೆಟ್ಟಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleದಕ್ಷಿಣ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಾದ್ಯ ಕಲಾವಿದರ ಸಂಘದ ವತಿಯಿಂದ ‘ವಾದ್ಯ ಕಲಾ ಮೇಳ’
    Next Article ಕನ್ನಡದ ಹಿರಿಯ ಲೇಖಕಿ, ಕಾದಂಬರಿಗಾರ್ತಿ, ಕಥೆಗಾರ್ತಿ ಉಡುಪಿಯ ತಾರಾ ಭಟ್ ನಿಧನ
    roovari

    Add Comment Cancel Reply


    Related Posts

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ತಾಳಮದ್ದಳೆ ಜ್ಞಾನಯಜ್ಞ’ | ಮೇ 26

    May 24, 2025

    ಮಂಗಳೂರು ವಿಶ್ವವಿದ್ಯಾನಿಲಯದ ‘ಯಕ್ಷಮಂಗಳ ಪ್ರಶಸ್ತಿ’ ಪ್ರಕಟ

    May 24, 2025

    ಕರ್ನಾಟಕ ಯಕ್ಷ ಭಾರತಿಯಿಂದ ಸೂರ್ಯನಾರಾಯಣ ಭಟ್ ಸನ್ಮಾನ

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.