ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಪಾಕ್ಷಿಕ ತಾಳಮದ್ದಳೆ ಹಾಗೂ ಯಕ್ಷ ಗುರು ದಶಾವತಾರಿ ಸೂರಿಕುಮೇರು ಕೆ. ಗೋವಿಂದ ಭಟ್ಟರಿಗೆ ನುಡಿನಮನ ಕಾರ್ಯಕ್ರಮವು ದಿನಾಂಕ 21 ಮಾರ್ಚ್ 2026ರಂದು ದೇವಿದಾಸ ವಿರಚಿತ ‘ಪಾರ್ಥ ಸಾರಥ್ಯ’ ಎಂಬ ಆಖ್ಯಾನದೊಂದಿಗೆ ಬೊಳುವಾರು ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ಆನಂದ ಸವಣೂರು, ಚೆಂಡೆ ಮದ್ದಳೆಗಳಲ್ಲಿ ಶರಣ್ಯ ನೆತ್ತರಕೆರೆ, ಸಮರ್ಥ ವಿಷ್ಣು ಕಡಂಬಳಿಕೆ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ ಮತ್ತು ಕಿಶೋರಿ ದುಗ್ಗಪ್ಪ ನಡುಗಲ್ಲು (ಶ್ರೀ ಕೃಷ್ಣ), ಗುಂಡ್ಯಡ್ಕ ಈಶ್ವರ ಭಟ್ (ದುರ್ಯೋಧನ), ಗುಂಡಪ್ಪ ಬಲ್ಯ (ಬಲರಾಮ), ಪ್ರೇಮಲತಾ ರಾವ್ ಮತ್ತು ಅಚ್ಯುತ ಪಾಂಗಣ್ಣಾಯ (ಅರ್ಜುನ) ಸಹಕರಿಸಿದರು. ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮದ ನಂತರ ನಿನ್ನೆ ಅಸ್ತಂಗತರಾದ ಯಕ್ಷ ಗುರು ದಶಾವತಾರಿ ಸೂರಿಕುಮೇರು ಕೆ. ಗೋವಿಂದ ಭಟ್ಟರಿಗೆ ಸಂಘದ ಹಿರಿಯ ಕಲಾವಿದ ಗುಂಡ್ಯಡ್ಕ ಈಶ್ವರ ಭಟ್ ನುಡಿ ನಮನ ಸಲ್ಲಿಸಿದರು. ಕಡಂಬಳಿಕೆ ಸತ್ಯನಾರಾಯಣ ಕೇಕುಣ್ಣಾಯ ಪ್ರಾಯೋಜಿಸಿದರು. ಸಂಘದ ಗೌರವ ಕಾರ್ಯದರ್ಶಿ ರಂಗನಾಥ ರಾವ್ ಮತ್ತು ನಗರ ಸಭೆಯ ಮಾಜಿ ಉಪಾಧ್ಯಕ್ಷೆ ಶ್ರೀಮತಿ ವಿದ್ಯಾಗೌರಿ ಉಪಸ್ಥಿತರಿದ್ದರು.

