ಶಾಂತಿಗೋಡು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಹಾಗೂ ಶ್ರವಣ ರಂಗ ಪ್ರತಿಷ್ಠಾನ ಸವಣೂರು ಇವುಗಳ ಸಂಯೋಜನೆಯಲ್ಲಿ ನಡೆಯುವ ಪವಿತ್ರ ಅಧಿಕ ಮಾಸದಲ್ಲಿ ‘ಶ್ರೀ ಹರಿ ದರ್ಶನ’ ತಾಳಮದ್ದಳೆ ಅಭಿಯಾನ ‘ಯಕ್ಷ ಪುರುಷೋತ್ತಮ’ದ ಎರಡನೇ ತಾಳಮದ್ದಳೆ ಕೂಟವು ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಳದಲ್ಲಿ ‘ಹರಿ ಭಕ್ತ ಸುಧನ್ವ’ ಎಂಬ ಆಖ್ಯಾನದೊಂದಿಗೆ ದಿನಾಂಕ 25 ಮೇ 2026ರಂದು ನಡೆಯಿತು.
ಕೂಟದ ಹಿಮ್ಮೇಳದಲ್ಲಿ ಭಾಗವತರಾಗಿ ಸತೀಶ್ ಇರ್ದೆ, ಆನಂದ ಸವಣೂರು, ನಿತೀಶ್ ಎಂಕಣ್ಣಮೂಲೆ ಹಾಗೂ ಚೆಂಡೆ ಮದ್ದಳೆಗಳಲ್ಲಿ ಅಚ್ಯುತ ಪಾಂಗಣ್ಣಾಯ, ಸಮರ್ಥ ವಿಷ್ಣು ಕಡಂಬಳಿಕೆ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ (ಸುಧನ್ವ), ಗುಡ್ಡಪ್ಪ ಬಲ್ಯ (ಅರ್ಜುನ), ತಾರಾನಾಥ ಸವಣೂರು (ಶ್ರೀ ಕೃಷ್ಣ) ಸಹಕರಿಸಿದರು. ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಸ್ವಾಗತಿಸಿ, ತಾರಾನಾಥ ಸವಣೂರು ವಂದಿಸಿದರು. ಶ್ರೀ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಸುಬ್ರಹ್ಮಣ್ಯ ತೋಳ್ಪಾಡಿ ಸಂಯೋಜಿಸಿದ ಕಾರ್ಯಕ್ರಮಕ್ಕೆ ದೇವಳದ ಆಡಳಿತ ಮಂಡಳಿ ಸದಸ್ಯರು ಸಹಕರಿಸಿದರು.
