ಕಾಸರಗೋಡು : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇವರ ವತಿಯಿಂದ ಶ್ರೀ ರಾಮ ನವಮಿ ಉತ್ಸವದ ಅಂಗವಾಗಿ ಕಾಸರಗೋಡು ಸಮೀಪದ ಕೂಡ್ಲು ‘ರಾಮಧಾಮ’ದಲ್ಲಿ ದಿನಾಂಕ 27 ಮಾರ್ಚ್ 2026ರಂದು ತಾಳಮದ್ದಳೆ ಕೂಟ ಪಾರ್ತಿಸುಬ್ಬ ವಿರಚಿತ ‘ಶ್ರೀ ರಾಮ ವನಗಮನ’ ಎಂಬ ಆಖ್ಯಾನದೊಂದಿಗೆ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ನಾರಾಯಣ ಶರ್ಮ ಕಾಟುಕುಕ್ಕೆ, ಚೆಂಡೆ ಮದ್ದಳೆಗಳಲ್ಲಿ ರಾಜೇಂದ್ರ ಪ್ರಸಾದ್ ಪುಂಡಿಕಾಯಿ, ಲಕ್ಷ್ಮೀಶ ಬೇಂಗ್ರೋಡಿ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಜೆ.ಸಿ. ಅಡಿಗ (ಕೈಕೇಯಿ), ಕಿಶೋರಿ ದುಗ್ಗಪ್ಪ ನಡುಗಲ್ಲು (ದಶರಥ), ಗಾಯತ್ರಿ ಹೆಬ್ಬಾರ್ (ಮಂಥರೆ), ಶಾರದಾ ಅರಸ್ (ಶ್ರೀ ರಾಮ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ್ ಬಾರ್ಯ ಸ್ವಾಗತಿಸಿ, ವಂದಿಸಿದರು. ಕಲಾವಿದ ತೋನ್ಸೆ ಪುಷ್ಕಳ ಕುಮಾರ್ ಪ್ರಶಂಸಾ ನುಡಿಗಳನ್ನಾಡಿದರು. ಹರಿದಾಸ ಮಹಾಬಲ ಶೆಟ್ಟಿ (ದೇವಕೀತನಯ) ಪ್ರಾಯೋಜಿಸಿದರು.

