ಬೆಳ್ತಂಗಡಿ : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ವತಿಯಿಂದ ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಕರಾಯ ಸಹಸ್ರ ಕಲಶ ಸಹಿತ ಅಷ್ಟಬಂಧ ಬ್ರಹ್ಮಕಲಶೋತ್ಸವ’ದ ಅಂಗವಾಗಿ ಶ್ರೀ ದೇವಳದಲ್ಲಿ ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಇವರ ನಿರ್ದೇಶನದಲ್ಲಿ ತಾಳಮದ್ದಳೆ ಕೂಟ ‘ಓಂ ನಮಃ ಶಿವಾಯ’ (ದಕ್ಷ ಯಜ್ಞ) ಎಂಬ ಆಖ್ಯಾನದೊಂದಿಗೆ ದಿನಾಂಕ 16 ಏಪ್ರಿಲ್ 2026ರಂದು ನಡೆಯಿತು.
ಹಿಮ್ಮೇಳದಲ್ಲಿ ಭಾಗವತರಾಗಿ ಕುಸುಮಾಕರ ಆಚಾರ್ಯ ಹಳೇನೇರಂಕಿ ಚೆಂಡೆ ಮದ್ದಳೆಗಳಲ್ಲಿ ಮೋಹನ್ ಶರವೂರು, ಶ್ರೀಪತಿ ಭಟ್ ಉಪ್ಪಿನಂಗಡಿ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಗಣೇಶ್ (ಈಶ್ವರ), ಕಿಶೋರಿ ದುಗ್ಗಪ್ಪ ನಡುಗಲ್ಲು (ದಾಕ್ಷಾಯಿಣಿ), ಪ್ರೇಮಲತಾ ರಾವ್ (ದೇವೇಂದ್ರ), ಹರಿಣಾಕ್ಷಿ ಜೆ. ಶೆಟ್ಟಿ (ದಕ್ಷ), ಶಾರದಾ ಅರಸ್ (ವೀರಭದ್ರ), ಮನೋರಮಾ ಜಿ. ಭಟ್ (ವೃದ್ಧ ವಿಪ್ರ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ಸುಧೀರ್ ಕುಮಾರ್ ಕೆ.ಯನ್. ವಂದಿಸಿದರು. ವಿಷ್ಣುಮೂರ್ತಿ ಕುದ್ದಣ್ಣಾಯ ಮತ್ತು ಗೀತಾ ಕುದ್ದಣ್ಣಾಯ ಕಲಾವಿದರನ್ನು ಗೌರವಿಸಿದರು. ದುರ್ಗೇಶ್ ಕೆದಿಲಾಯ ಸಹಕರಿಸಿದರು.

