Subscribe to Updates

    Get the latest creative news from FooBar about art, design and business.

    What's Hot

    ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಸಭಾಭವನದಲ್ಲಿ 81ನೆಯ ವಾರ್ಷಿಕೋತ್ಸವ | ಅಕ್ಟೋಬರ್ 25

    October 20, 2025

    ಶ್ರೀ ಬೆಣ್ಣೆಗಣಪತಿ ಸಭಾಭವನ ‘ಯಕ್ಷಶ್ರಾವ್ಯ’ ತಾಳಮದ್ದಲೆ ಕಾರ್ಯಕ್ರಮ | ಅಕ್ಟೋಬರ್ 25

    October 20, 2025

    ವಿದ್ಯಾರ್ಥಿ ಕವಿಗೋಷ್ಠಿಗೆ ಆಹ್ವಾನ | ಅಕ್ಟೋಬರ್ 23

    October 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ತಾಳಮದ್ದಳೆ
    Yakshagana

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ತಾಳಮದ್ದಳೆ

    December 2, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಅಲ್ಲಿನ ವಸ್ತು ಪ್ರದರ್ಶನ ಮಂಟಪದಲ್ಲಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ವಿಂಶತಿ ಸಂಭ್ರಮದ 15ನೇ ಸರಣಿ ತಾಳಮದ್ದಳೆಯು ಹಟ್ಟಿಯಂಗಡಿ ರಾಮ ಭಟ್ಟ ವಿರಚಿತ ‘ಶರಸೇತು ಬಂಧ’ ಎಂಬ ಆಖ್ಯಾನದೊಂದಿಗೆ ದಿನಾಂಕ 28 ನವೆಂಬರ್ 2024ರಂದು ಜರಗಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ಮುರಳೀಕೃಷ್ಣ ಶಾಸ್ತ್ರಿ ತೆಂಕಬೈಲು ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪಿ.ಟಿ. ಜಯರಾಮ್ ಭಟ್, ಪಿ.ಜಿ. ಜಗನ್ನಿವಾಸ ರಾವ್ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಅಡಿಗ (ಹನೂಮಂತ), ಪ್ರೇಮಲತಾ ರಾವ್ (ಶ್ರೀ ರಾಮ), ಕಿಶೋರಿ ದುಗ್ಗಪ್ಪ ನಡುಗಲ್ಲು (ಅರ್ಜುನ), ಹರಿಣಾಕ್ಷಿ ಜೆ. ಶೆಟ್ಟಿ (ವೃದ್ಧ ಬ್ರಾಹ್ಮಣ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಶ್ರೀ ಭುಜಬಲಿ ಧರ್ಮಸ್ಥಳ ಕಲಾವಿದರನ್ನು ಗೌರವಿಸಿದರು. ಶ್ರೀಕ್ಷೇತ್ರದ ಆಡಳಿತ ಮಂಡಳಿ ಸದಸ್ಯರು ಹಾಗೂ ಸ್ವಯಂ ಸೇವಕರು ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕೊಡಗು ವಿಶ್ವವಿದ್ಯಾಲಯದಲ್ಲಿ ‘ಕನ್ನಡ ಜಾನಪದ ರಾಜ್ಯೋತ್ಸವ ಮತ್ತು ಗೀತೋತ್ಸವ’ ಸಮಾರಂಭ
    Next Article ಶ್ರೀ ವಾಮನ್ ರಾವ್ ಬೇಕಲ್ ಇವರಿಗೆ ಗೌರವ ಡಾಕ್ಟರೇಟ್
    roovari

    Add Comment Cancel Reply


    Related Posts

    ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಸಭಾಭವನದಲ್ಲಿ 81ನೆಯ ವಾರ್ಷಿಕೋತ್ಸವ | ಅಕ್ಟೋಬರ್ 25

    October 20, 2025

    ಶ್ರೀ ಬೆಣ್ಣೆಗಣಪತಿ ಸಭಾಭವನ ‘ಯಕ್ಷಶ್ರಾವ್ಯ’ ತಾಳಮದ್ದಲೆ ಕಾರ್ಯಕ್ರಮ | ಅಕ್ಟೋಬರ್ 25

    October 20, 2025

    ಹಿರೇಮನೆಯಲ್ಲಿ ಸ್ಮರಣಾಂಜಲಿ, ಸ್ಮೃತಿ ಗೌರವ ಮತ್ತು ಯಕ್ಷಗಾನ ಪ್ರದರ್ಶನ | ಅಕ್ಟೋಬರ್ 24

    October 20, 2025

    ಪುರಂದರದಾಸರ ‘ಅನಸೂಯಾ ಚರಿತ್ರೆ’ ಯಕ್ಷಗಾನ ಕೃತಿ ಲೋಕಾರ್ಪಣೆ ಮತ್ತು ಗಾನಪ್ರಸ್ತುತಿ

    October 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.