Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಡಾಲ್ ಹೌಸ್’ ನಾಟಕ ಪ್ರದರ್ಶನ | ಜೂನ್ 18

    June 16, 2026

    ‘ಮುದ್ದು ಮೂಡುಬೆಳ್ಳೆ’ ಕೃತಿ ಲೋಕಾರ್ಪಣೆ ಸಮಾರಂಭ | ಜೂನ್ 20

    June 16, 2026

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಂಞಣ್ಣ ರೈ ಜನ್ಮ ದಿನಾಚರಣೆ | ಜೂನ್ 21

    June 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ತಾಳಮದ್ದಳೆ ಸರಣಿ ಕಾರ್ಯಕ್ರಮಕ್ಕೆ ಚಾಲನೆ
    Music

    ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ತಾಳಮದ್ದಳೆ ಸರಣಿ ಕಾರ್ಯಕ್ರಮಕ್ಕೆ ಚಾಲನೆ

    June 16, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸಾಲಿಗ್ರಾಮ : ಯಶಸ್ವಿ ಕಲಾವೃಂದ ಕೊಮೆ ತೆಕ್ಕಟ್ಟೆ ಹಾಗೂ ಯಕ್ಷ ನುಡಿಸಿರಿ ಬಳಗ ಸಿದ್ಧಾಪುರ ಜಂಟಿ ಆಶ್ರಯದಲ್ಲಿ ಶ್ರೀ ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮ ಸಹಯೋಗದೊಂದಿಗೆ ತಿಂಗಳ ಸರಣಿ ತಾಳಮದ್ದಳೆ ಕಾರ್ಯಕ್ರಮ ಅರ್ಥಾಂಕುರ ದಿನಾಂಕ 13 ಜೂನ್ 2026ರಂದು ಸಾಲಿಗ್ರಾಮದಲ್ಲಿ ಚಾಲನೆಗೊಂಡಿತು.

    ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಸಿದ್ಧ ಅರ್ಥದಾರಿ ಪ್ರೊ. ಪವನ್ ಕಿರಣ್ ಕೆರೆ ಮಾತನಾಡಿ “ತಾಳಮದ್ದಳೆ ಕಾರ್ಯಕ್ರಮಗಳು ಬಡಗಿನ ಪ್ರಾಂತ್ಯದಲ್ಲಿ ಅತೀ ವಿರಳವಾಗುತ್ತಿರುವ ಕಾಲಘಟ್ಟದಲ್ಲಿ ಪ್ರತೀ ತಿಂಗಳು ಗುರುನರಸಿಂಹ ದೇಗುಲ ಸಾಲಿಗ್ರಾಮದಲ್ಲಿ ಕಾರ್ಯಕ್ರಮ ಆಯೋಜಿಸಿಕೊಂಡು ಎಷ್ಟೋ ಕಲಾವಿದರಿಗೆ ತಾಳಮದ್ದಳೆಯಲ್ಲಿ ಅರ್ಥ ಹೇಳಿಸುವಲ್ಲಿ ಅಭಿರುಚಿ ಮೂಡಿಸುತ್ತಿರುವ ವಿಚಾರ ಸಂತೋಷದಾಯಕವಾದದ್ದು. ಅರ್ಥಾಂಕುರ ನಿಜಕ್ಕೂ ಅರ್ಥಪೂರ್ಣ. ನಿರಂತರ ಕಾರ್ಯಕ್ರಮದ ಕಾರಣದಿಂದ ಪ್ರೇಕ್ಷಕ ವರ್ಗವೂ ದಿನೇ ದಿನೇ ಬೆಳೆಯುತ್ತದೆ ಎನ್ನುವುದರಲ್ಲಿ ಸಂಶಯವಿಲ್ಲ. ಅವಕಾಶ ಕಲ್ಪಿಸುತ್ತಿರುವ ದೇಗುಲದ ಆಡಳಿತ ಮಂಡಳಿಯ ಎಲ್ಲಾ ಸದಸ್ಯರಿಗೂ ಅಭಿನಂದನೆ ಸಲ್ಲಿಸಿಕೊಳ್ಳೋಣ” ಎಂದು ಅಭಿಪ್ರಾಯಪಟ್ಟರು.

    ದೇವಳದ ಸಮಿತಿ ಸದಸ್ಯ ತಾರಾನಾಥ ಹೊಳ್ಳ, ಆ್ಯಂಡ್ರು ಡಿಸಿಲ್ವ, ಲಂಬೋದರ ಹೆಗಡೆ, ಎನ್.ಜಿ. ಹೆಗಡೆ ಉಪಸ್ಥಿತರಿದ್ದರು. ದೇವಳದ ಸಿಬ್ಬಂದಿ ನಾಗಾರಾಜ ಹಂದೆ ಅತಿಥಿಗಳನ್ನು ಅಭಿನಂದಿಸಿದರು. ಉಪನ್ಯಾಸಕ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಬಳಿಕ ತಾಳಮದ್ದಳೆ ‘ಶರಸೇತು ಬಂಧ’ ರಂಗ ಪ್ರಸ್ತುತಿಗೊಂಡಿತು.

    baikady Music roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಪಂಚಾಯತ್ ಸಭಾಂಗಣದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಸಮಾಲೋಚನಾ ಸಭೆ
    Next Article ಪಂಚ ದ್ರಾವಿಡ ಭಾಷಾ ಕವಿ ಸಂಗಮಡ್ ತುಲುವೆರ್
    roovari

    Add Comment Cancel Reply


    Related Posts

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಡಾಲ್ ಹೌಸ್’ ನಾಟಕ ಪ್ರದರ್ಶನ | ಜೂನ್ 18

    June 16, 2026

    ‘ಮುದ್ದು ಮೂಡುಬೆಳ್ಳೆ’ ಕೃತಿ ಲೋಕಾರ್ಪಣೆ ಸಮಾರಂಭ | ಜೂನ್ 20

    June 16, 2026

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಂಞಣ್ಣ ರೈ ಜನ್ಮ ದಿನಾಚರಣೆ | ಜೂನ್ 21

    June 16, 2026

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲೂಕು ಘಟಕದ ವತಿಯಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆ

    June 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.