Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಅನನ್ಯ ರಂಗಕರ್ಮಿ ಜಿ. ಕೆ. ಐತಾಳ್

    June 25, 2025

    ವಿಶೇಷ ಲೇಖನ – ಗ್ರಂಥಾಲಯ ವಿಜ್ಞಾನದ ಸಾಧಕ ಡಾ. ಎಸ್. ಆರ್. ಗುಂಜಾಳ

    June 25, 2025

    ‘ಕರ್ನಾಟಕದ ಶತಾಯುಷಿಗಳು’ ಕೃತಿ ಲೋಕಾರ್ಪಣೆ ಸಮಾರಂಭ | ಜೂನ್ 25

    June 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ಯಕ್ಷಗಾನ ಅಕಾಡಮಿಯ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆ
    Yakshagana

    ಕರ್ನಾಟಕ ಯಕ್ಷಗಾನ ಅಕಾಡಮಿಯ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆ

    April 26, 2024Updated:April 27, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಉಡುಪಿ ಜಿಲ್ಲಾ ಹೊಟೇಲ್ ಮಾಲಕಾರ ಸಹಕಾರ ಸಂಘ, ರಂಗಭೂಮಿ ಉಡುಪಿ ಹಾಗೂ ಜಾನಪದ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಕರ್ನಾಟಕ ಯಕ್ಷಗಾನ ಅಕಾಡಮಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

    ಯಕ್ಷಗಾನ ಕಲೆಯ ಬಗ್ಗೆ ಅತೀವ ಆಸಕ್ತಿ ಹೊಂದಿರುವ ಇವರು ಉಡುಪಿಯ ಯಕ್ಷಗಾನ ಕಲಾರಂಗದ ಅಧ್ಯಕ್ಷರಾಗಿದ್ದ ದಿನಗಳಲ್ಲಿ ತಲ್ಲೂರು ಶಿವರಾಮ ಶೆಟ್ಟರು “ಯಕ್ಷಗಾನ ಕಲಾವಿದರಲ್ಲ”ಎನ್ನುವ ಕೊಂಕು ಮಾತು ಕೇಳಿ ಬಂದಾಗ, ಅದನ್ನು ಸವಾಲಾಗಿ ಸ್ವೀಕರಿಸಿ, ತನ್ನ 60ನೇ ವಯಸ್ಸಿನಲ್ಲಿ ಯಕ್ಷಗಾನವನ್ನು ಖ್ಯಾತ ಗುರು ಬನ್ನಂಜೆ ಸಂಜೀವ ಸುವರ್ಣರಲ್ಲಿ ಅಭ್ಯಾಸ ಮಾಡಿ ಕಲಿಯುವಿಕೆಗೆ ವಯಸ್ಸಿನ ಮಿತಿಯಿಲ್ಲ ಎಂಬುದನ್ನು ಸಾಬೀತು ಪಡಿಸಿದರು. ಮತ್ತು ಈವರೆಗೆ 400 ಪಾತ್ರಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಅಭಿಮಾನಿಗಳ ಅತೀವ ಮೆಚ್ಚುಗೆಗೆ ಪಾತ್ರರಾದದ್ದು ಇವರ ಮಹತ್ತರ ಸಾಧನೆ ಎಂದರೆ ತಪ್ಪಾಗಲಾರದು. ಕಳೆದ 16 ವರ್ಷಗಳಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯುವ ಚಿಟ್ಟಾಣಿ ರಾಮಚಂದ್ರ ಹೆಗೆಡೆ ಯಕ್ಷಗಾನ ಸಪ್ತಾಹ, ಕೆ.ಗೋವಿಂದ ಭಟ್ಟ ಯಕ್ಷಗಾನ ಸಪ್ತಾಹ ಹಾಗೂ ಪ್ರಶಸ್ತಿ ಪ್ರದಾನ, ಮತ್ತು ಖ್ಯಾತ ಭಾಗವತ ಶ್ರೀ ಸುಬ್ರಹ್ಮಣ್ಯ ಧಾರೇಶ್ವರ ಅವರ `ಧಾರೇಶ್ವರ ಅಷ್ಟಾಹ’ ಕಾರ್ಯಕ್ರಮಗಳ ನೇತೃತ್ವ ವಹಿಸಿ ಮುನ್ನಡೆಸಿದ ಖ್ಯಾತಿ ಇವರದು.

    ತನ್ನ ಪೂಜ್ಯ ಮಾತಾಪಿತರ ನೆನಪಿನಲ್ಲಿ ‘ತಲ್ಲೂರು ಕನಕಾ – ಅಣ್ಯಯ್ಯ ಶೆಟ್ಟಿ ಪ್ರಶಸ್ತಿ’ಯನ್ನು ಪ್ರತೀ ವರ್ಷ ನೀಡುತ್ತಾ ಬಂದಿದ್ದು ಈವರೆಗೆ 8 ಮಂದಿ ಪ್ರಸಿದ್ಧ ಯಕ್ಷಗಾನ ವಿದ್ವಾಂಸರಿಗೆ ಅರ್ಪಿಸಲಾಗಿದೆ.ಉಡುಪಿ ಕುಂಜಿಬೆಟ್ಟಿನ ಯಕ್ಷಗಾನ ಕೇಂದ್ರದ ಮುಖ್ಯ ಪೋಷಕರಾಗಿ, ಉಡುಪಿಯ ಪ್ರತಿಷ್ಠಿತ ಯಕ್ಷಗಾನ ಕಲಾರಂಗದ ಅಧ್ಯಕ್ಷರಾಗಿ ಸಂಸ್ಥೆಯನ್ನು ಮುನ್ನಡೆಸಿದ ಅನುಭವ ಇವರಿಗಿದೆ.ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸುವಂತೆ ಮಾಡಿರುವುದು ಸದ್ರಿಯವರ ಸಾಧನೆಯಲ್ಲೊಂದಾಗಿದೆ.ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಮತ್ತು ಯಕ್ಷನಿಧಿಯ ಅಧ್ಯಕ್ಷರಾದ ನಂತರ 1,000 ವಿದ್ಯಾರ್ಥಿಗಳಿಗೆ 70 ಲಕ್ಷ ರೂ. ವಿದ್ಯಾರ್ಥಿ ವೇತನ ನೀಡಿರುವುದು ದಾಖಲೆಯಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleವ್ಯಕ್ತಿ ಪರಿಚಯ | ಭಾಗವತಿಕೆಯ ಘನತೆಯನ್ನು ಎತ್ತರಿಸಿದ ಗಾನಗಾರುಡಿಗ ಧಾರೇಶ್ವರ           
    Next Article ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ವತಿಯಿಂದ ಒಂದು ದಿನದ ‘ನೃತ್ಯ ಕಾರ್ಯಾಗಾರ’
    roovari

    Add Comment Cancel Reply


    Related Posts

    ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಧ್ರುವ – ಯಕ್ಷಶಿಕ್ಷಣ ಉದ್ಘಾಟನೆ

    June 24, 2025

    ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 25

    June 23, 2025

    ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

    June 23, 2025

    ಗೋವಾ ಪಣಜಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದ್ವಿತೀಯ ವಾರ್ಷಿಕೋತ್ಸವ

    June 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.