Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾರ್ಕಳದ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯಲ್ಲಿ ‘ತಾಲೂಕು ಮಟ್ಟದ ಗಮಕ ಸಮ್ಮೇಳನ’ | ಜನವರಿ 25
    Gamaka

    ಕಾರ್ಕಳದ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯಲ್ಲಿ ‘ತಾಲೂಕು ಮಟ್ಟದ ಗಮಕ ಸಮ್ಮೇಳನ’ | ಜನವರಿ 25

    January 22, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕರ್ನಾಟಕ ಗಮಕ ಕಲಾ ಪರಿಷತ್ತು (ರಿ.) ಬೆಂಗಳೂರು, ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಇವರು ಕಾರ್ಕಳ ತಾಲೂಕು ಘಟಕದ ಮೂಲಕ ಸಂಯೋಜಿಸಿರುವ ‘ತಾಲೂಕು ಮಟ್ಟದ ಗಮಕ ಸಮ್ಮೇಳನ’ವು ದಿನಾಂಕ 25 ಜನವರಿ 2025ರಂದು ಪೂರ್ವಾಹ್ನ 9-00 ಗಂಟೆಗೆ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯ ಶ್ರೀ ವರದೇಂದ್ರ ಸದನ ಸಭಾಂಗಣದಲ್ಲಿ ನಡೆಯಲಿದೆ.

    ಶ್ರೀ ವ್ಯಾಸ ರಘುಪತಿ ಸಂಸ್ಕೃತ ವಿದ್ಯಾಶಾಲಾ ಫಂಡ್ (ರಿ.) ಕಾರ್ಕಳ ಇದರ ಅಧ್ಯಕ್ಷರಾದ ಶ್ರೀ ಎ. ಯೋಗೀಶ್ ಹೆಗ್ಡೆ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವ್ಯಾಖ್ಯಾನಕಾರರಾದ ಶ್ರೀ ಮುನಿರಾಜ ರೆಂಜಾಳ ಇವರು ಸಮ್ಮೇಳನಾಧ್ಯಕ್ಷತೆಯನ್ನು ವಹಿಸಲಿರುವರು. ಕಾರ್ಕಳದ ನಿವೃತ್ತ ಉಪನ್ಯಾಸಕರಾದ ಶ್ರೀ ರಾಮ ಭಟ್ ಎಸ್. ಇವರು ಶಿಖರ ಉಪನ್ಯಾಸ ನೀಡಲಿದ್ದಾರೆ. ಪೂರ್ವಾಹ್ನ ಗಂಟೆ 10-30ಕ್ಕೆ ‘ಸಾವಿತ್ರಿಯ ಬಾಲ್ಯ’ ಗಮಕ ವಾಚನ ವ್ಯಾಖ್ಯಾನದಲ್ಲಿ ಕಾರ್ಕಳ ಹಿರಿಯಂಗಡಿ ಎಸ್.ಎನ್.ವಿ. ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಆಶ್ರಿತಾ ಇವರು ವಾಚನ ಹಾಗೂ ಕಾರ್ಕಳ ಭುವನೇಂದ್ರ ಪ್ರಥಮ ದರ್ಜೆ ಕಾಲೇಜಿನ ಕುಮಾರಿ ಸ್ಮೃತಿ ರಾವ್ ಇವರು ವ್ಯಾಖ್ಯಾನಗೈಯಲಿದ್ದಾರೆ. ಪೂರ್ವಾಹ್ನ ಗಂಟೆ 11-00ಕ್ಕೆ ‘ಕರ್ಣ ಬೇದನ’ ಗಮಕ ವಾಚನ ವ್ಯಾಖ್ಯಾನದಲ್ಲಿ ಕಾರ್ಕಳ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಅನನ್ಯ ಪಿ. ಪಾಟಕ್ ಇವರು ವಾಚನ ಹಾಗೂ ಕಾರ್ಕಳ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಧಾರಿಣಿ ಉಪಾಧ್ಯ ಬಿ. ಇವರು ವ್ಯಾಖ್ಯಾನ ನೀಡಲಿದ್ದಾರೆ.

    ಪೂರ್ವಾಹ್ನ ಗಂಟೆ 11-30ಕ್ಕೆ ಗೋಷ್ಠಿ -1ರಲ್ಲಿ ಶ್ರೀಮತಿ ಸಾವಿತ್ರಿ ಮನೋಹರ ರಾವ್ ಇವರ ಅಧ್ಯಕ್ಷತೆಯಲ್ಲಿ ‘ಕಾವ್ಯೋಲ್ಲಾಸ’, ಅಪರಾಹ್ನ 2-00 ಗಂಟೆಗೆ ಮಂಚಿಯ ಶ್ರೀಮತಿ ಮಂಜುಳಾ ಸುಬ್ರಹ್ಮಣ್ಯ ಭಟ್ ಇವರ ನಿರ್ದೇಶನದಲ್ಲಿ ‘ಗಮಕ – ದೃಶ್ಯ ರೂಪಕ’ ಪ್ರಸ್ತುತಗೊಳ್ಳಲಿದೆ. ಗಂಟೆ 2-35ಕ್ಕೆ ‘ಊರ್ವಶಿಯ ಪ್ರಣಯ ಪ್ರಸಂಗ’ ಗಮಕ ವಾಚನ ವ್ಯಾಖ್ಯಾನದಲ್ಲಿ ಕೋಟ ಶ್ರೀ ವಿದ್ವಾನ್ ಶಂಭು ಭಟ್ ಮತ್ತು ಶ್ರೀಮತಿ ಪಲ್ಲವಿ ತುಂಗ ಇವರು ವಾಚನ ಹಾಗೂ ಪಡುಬಿದ್ರಿ ಡಾ. ರಾಘವೇಂದ್ರ ಭಟ್ ಇವರು ವ್ಯಾಖ್ಯಾನ ನೀಡಲಿದ್ದಾರೆ. ಬಳಿಕ ಸಮಾರೋಪ ಸಮಾರಂಭ ನಡೆಯಲಿದೆ.

    gamaka Literature Music
    Share. Facebook Twitter Pinterest LinkedIn Tumblr WhatsApp Email
    Previous Articleಸಾಲಿಗ್ರಾಮ ಗುರುನರಸಿಂಹ ದೇವಳದಲ್ಲಿ ‘ರಾಜಾ ದ್ರುಪದ’ ಯಕ್ಷಗಾನ ಪ್ರದರ್ಶನ
    Next Article ಸುರತ್ಕಲ್ ನಲ್ಲಿ ನಾಟಕಾಸಕ್ತರನ್ನು ರಂಜಿಸಿದ ‘ನೀನಾಸಂ ತಿರುಗಾಟ – 2024’
    roovari

    Add Comment Cancel Reply


    Related Posts

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025

    ಸಾಹಿತಿ ಸವಿತಾ ನಾಗಭೂಷಣ ಇವರ ಕೃತಿ ‘ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ

    May 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications