Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಾಪೋಕ್ಲುವಿನಲ್ಲಿ ತಾಲೂಕು ಮಟ್ಟದ ‘ಪ್ರತಿಭಾ ಕಾರಂಜಿ’ ಸ್ಪರ್ಧೆ
    Bharathanatya

    ನಾಪೋಕ್ಲುವಿನಲ್ಲಿ ತಾಲೂಕು ಮಟ್ಟದ ‘ಪ್ರತಿಭಾ ಕಾರಂಜಿ’ ಸ್ಪರ್ಧೆ

    December 12, 2024Updated:January 7, 2025No Comments4 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ನಾಪೋಕ್ಲು : ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 04 ಡಿಸೆಂಬರ್ 2024ರಂದು ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    5ರಿಂದ 7ನೇ ತರಗತಿ ವಿಭಾಗದಲ್ಲಿ ಕನ್ನಡ ಕಂಠಪಾಠ ವಿಭಾಗದಲ್ಲಿ ಪೆರಾಜೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರತೀಕ್, ಮಕ್ಕಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ರಕ್ಷಾ ಹಾಗೂ ಎಕ್ಸೆಲ್ ಶಾಲೆಯ ಎಂ.ಲಕ್ಷ್ಮಣ್ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ. ಇಂಗ್ಲೀಷ್ ಕಂಠಪಾಠ ಸ್ಪರ್ಧೆಯಲ್ಲಿ ಬೆಟ್ಟಗೇರಿಯ ಉದಯ ಆಂಗ್ಲ ಮಾಧ್ಯಮ ಶಾಲೆಯ ಬಿ. ನಿಹಾರಿಕಾ ಪ್ರಥಮ, ಪೆರಾಜೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸ್ನೇಹ ದ್ವಿತೀಯ, ಮಡಿಕೇರಿಯ ಸಂತ ಮೈಕಲ್ಸ್ ಶಾಲೆಯ ಅಶೋಕ್ ಜೋಶ್ವ ತೃತೀಯ ಸ್ಥಾನವನ್ನು ಗಳಿಸಿದ್ದಾರೆ. ಹಿಂದಿ ಕಂಠಪಾಠದಲ್ಲಿ ಚೇರಂಬಾಣೆಯ ಅರುಣ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿ, ಬೇತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂ.ಆರ್. ನವೀನ್, ಸಿದ್ದಾಪುರ ಸಂತ ಅನ್ನಮ್ಮ ಶಾಲೆಯ ಟಿ.ಆರ್. ಅಭಿನವ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ.

    ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಸಂಸ್ಕೃತದಲ್ಲಿ ಸಿದ್ದಾಪುರ ಬಿಜಿಎಸ್ ಪಬ್ಲಿಕ್ ಶಾಲೆಯ ಆದಿತ್ಯ ಭಟ್, ಮೂರ್ನಾಡಿನ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ನಿಹಾರಿಕಾ ಭಟ್, ಚೆಂಬು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಯಶಿಕಾ ಗೌಡ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದ್ದಾರೆ. ಅರೇಬಿಕ್ ಧಾರ್ಮಿಕ ಪಠಣದಲ್ಲಿ ಕಕ್ಕಬೆ ಕೆಸಿಎನ್ ಶಾಲೆಯ ಮಹಮ್ಮದ್ ಜಹೀರ್, ಕೊಟ್ಟಮುಡಿ ರಾಫೆಲ್ ಶಾಲೆಯ ಹಾಯಿಜ್ ಹಾಗೂ ಸಿದ್ದಾಪುರ ಸಂತ ಅನ್ನಮ್ಮ ಶಾಲೆಯ ಇಸ್ಮಾಯಿಲ್  ಹಾಕಿಮ್ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ. ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಅಮೆಚೂರು ಪೆರಾಜೆ ಸರ್ಕಾರಿ ಪ್ರಾಥಮಿಕ ಶಾಲೆಯ ರಿಷಿಕಾ, ಚೇರಂಬಾಣೆ ರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ವರುಣಿಕಾ ಹಾಗೂ ಮಡಿಕೇರಿಯ ನಂತ ಮೈಕೆಲರ ಶಾಲೆಯ ಸಮೃದ್ಧ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದ್ದಾರೆ.

    ಪ್ರಬಂಧ ಸ್ಪರ್ಧೆಯಲ್ಲಿ ಮಡಿಕೇರಿಯ ಸಂತ ಜೋಸೆಫರ ಪ್ರೌಢಶಾಲೆಯ ಕೆ.ಯು. ಸಮೃದ್ದ ಪ್ರಥಮ ಸ್ಥಾನ ಗಳಿಸಿದರೆ, ಚೆಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಟಿ.ಪಿ. ಶ್ರದ್ಧಾ ದ್ವಿತೀಯ ಸ್ಥಾನ ಹಾಗೂ ಕಿಕ್ಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಮದ್ ನೂಹ್ ತೃತೀಯ ಸ್ಥಾನ ಗಳಿಸಿದರು. ಕಥೆ ಹೇಳುವ ಸ್ಪರ್ಧೆಯಲ್ಲಿ ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ನಿಹಾರಿಕ ಭಟ್ ಪ್ರಥಮ, ಹಳೆ ಚೆಂಬು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೆ.ಕೆ. ವಿನ್ಯಾಸ್ ದ್ವಿತೀಯ, ಕಗ್ಗೋಡ್ಲು ಸರ್ಕಾರಿ ಪ್ರಾಥಮಿಕ ಶಾಲೆಯ ವರುಣ್ ತೃತೀಯ ಸ್ಥಾನವನ್ನು ಗಳಿಸಿದ್ದಾರೆ. ಚಿತ್ರಕಲಾ ಸ್ಪರ್ಧೆಯಲ್ಲಿ ಉದಯ ಅಂಗ್ಲ ಮಾಧ್ಯಮ ಶಾಲೆಯ ಎ. ಮಾನ್ವಿ, ಜ್ಞಾನಜ್ಯೋತಿ ಶಾಲೆಯ ಗ್ರಂಥ ಹಾಗೂ ಸಂತ ಮೈಕಲ್ ಶಾಲೆಯ ಸಚಿನ್ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದ್ದಾರೆ. ಅಭಿನಯ ಗೀತೆ ಸ್ಪರ್ಧೆಯಲ್ಲಿ ಮಧ್ಯ ಪೆರಾಜೆಯ ನಿಶಾ, ಮೂರ್ನಾಡು ಜ್ಞಾನಜ್ಯೋತಿ ಶಾಲೆಯ ಗಣಿಕ್ ದರ್ಶಿ ಹಾಗೂ ಕೊಯನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೃಷಿ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿದ್ದಾರೆ.

    ಪ್ರೌಢಶಾಲಾ ವಿಭಾಗದ ಸ್ಪರ್ಧೆಗಳಲ್ಲಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಚೆಟ್ಟಳ್ಳಿ ಪ್ರೌಢ ಶಾಲೆಯ ಲಕ್ಷ್ಮಿ, ಕರಿಕೆ ಸರ್ಕಾರಿ ಪ್ರೌಢಶಾಲೆಯ ಪೂಜಾ, ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಶ್ರುತಿ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಮರ್ಕಜ್ ಪಬ್ಲಿಕ್ ಶಾಲೆಯ ಶಾಜಾ ಫಾತಿಮಾ, ಬೆಟಗೇರಿ ಉದಯ ಅಂಗ್ಲ ಮಾಧ್ಯಮ ಶಾಲೆಯ ಫಿದಾ ಫಾತಿಮಾ ಹಾಗೂ ಶ್ರೀರಾಮ ಟ್ರಸ್ಟ್ ಶಾಲೆಯ ಸಾನ್ವಿಕ ಕೆ.ಎಸ್. ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಹಿಂದಿ ಭಾಷಣ ಸ್ಪರ್ಧೆಯಲ್ಲಿ ಮಡಿಕೇರಿ ಸಂತ ಮೈಕಲ್ ಪ್ರೌಢಶಾಲೆಯ ಅವನಿಕ, ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಹರ್ಷಿತ ಹಾಗೂ ಚೇರಂಬಾಣೆಯ ಚಕ್ಷಾ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಜ್ಞಾನಜ್ಯೋತಿ ಪ್ರೌಢಶಾಲೆಯ ಭೂಮಿಕ, ಸಂತ ಜೋಸಫರ ಪ್ರೌಢಶಾಲೆಯ ವರ್ಷ, ಬಿ.ಜಿ.ಎಸ್. ಪ್ರೌಢಶಾಲೆಯ ದಿನೇಶ್ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಅರೇಬಿಕ್ ಧಾರ್ಮಿಕ ಪಠಣದಲ್ಲಿ ಕೊಟ್ಟ ಮುಡಿ ಮರ್ಕಜ್ ಶಾಲೆಯ ರಾಯಿಜ, ಪಾರಾಣೆ ಪ್ರೌಢಶಾಲೆಯ ರಂಶೀದ್ ಹಾಗೂ ಮಡಿಕೇರಿ ಸಂತ ಜೋಸೆಫ್ ಪ್ರೌಢಶಾಲೆಯ ಶಹಮ ಕ್ರಮವಾಗಿ ಪ್ರಥಮ, ದ್ವಿತೀಯ ತೃತೀಯ ಸ್ಥಾನ ಗಳಿಸಿದರು.

    ಜಾನಪದ ಗೀತೆ ಸ್ಪರ್ಧೆಯಲ್ಲಿ ಮಡಿಕೇರಿ ಸಂತಮ್ಮಕೆಲರ ಪದವಿ ಪೂರ್ವ ಕಾಲೇಜಿನ ಸಂಧ್ಯಾ, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಶರತ್, ಚೆಂಬು ಸರ್ಕಾರಿ ಪ್ರೌಢಶಾಲೆಯ ಚಿಂಚನ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಭಾವಗೀತೆ ಸ್ಪರ್ಧೆಯಲ್ಲಿ ಮಡಿಕೇರಿ ಸಂತ ಜೋಸೆಫರ ಪ್ರೌಢಶಾಲೆಯ ಚಿನ್ನಮ್ಮ ಪ್ರಥಮ ಸ್ಥಾನವನ್ನು, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಸುಮಿತ್ ದ್ವಿತೀಯ ಸ್ಥಾನವನ್ನು, ಎಕ್ಸೆಲ್ ಪ್ರೌಢಶಾಲೆಯ ಬಿಷನ್ ದ್ವಿತೀಯ ಸ್ಥಾನವನ್ನು ಗಳಿಸಿದರು. ಭರತನಾಟ್ಯ ಸ್ಪರ್ಧೆಯಲ್ಲಿ ಸಂತ ಮೈಕಲ್ ಶಾಲೆಯ ಸಿಂಧು, ಸಿದ್ದಾಪುರ ಬಿ.ಜಿ.ಎಸ್.ನ ಪ್ರತೀಕ್ಷಾ ಹಾಗೂ ಪ್ರಬಂಧ ರಚನೆ ಸ್ಪರ್ಧಿಯಲ್ಲಿ ಸರ್ಕಾರಿ ಪ್ರೌಢಶಾಲೆ ಹಾಕತ್ತೂರಿನ ಕಲ್ಪನಾ ಶರಣ ಹಾಗೂ ಬೆಟಗೇರಿ ಉದಯ ಪ್ರೌಢಶಾಲೆಯ ಭೂಮಿಕ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ಮೂರ್ನಾಡು ಸರ್ಕಾರಿ ಪ್ರೌಢಶಾಲೆಯ ತಸ್ಮಿಕ, ಕಡಗದ ಶಾಲೆಯ ಲಕ್ಷಿಯ ಹಾಗೂ ರಾಜರಾಜೇಶ್ವರಿ ಚೇರಮ್ಮನೆ ಶಾಲೆಯ ಜಸ್ಮಿತ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದರು.

    ಮಿಮಿಕ್ರಿ ಸ್ಪರ್ಧೆಯಲ್ಲಿ ಕಡಗದಾಳು ಸರ್ಕಾರಿ ಪ್ರೌಢಶಾಲೆಯ ನಿಶಾನ್, ಸಂಪಾಜೆ ಪ್ರೌಢಶಾಲೆಯ ಯಜ್ಞೇಶ್, ಮೂರ್ನಾರು ಜ್ಞಾನಜ್ಯೋತಿ ಪ್ರೌಢಶಾಲೆಯ ಕೃತಿಕಾ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಚರ್ಚಾ ಸ್ಪರ್ಧೆಯಲ್ಲಿ ಪ್ರೌಢಶಾಲೆಯ ಕೃತಿಕಾ, ಸಂತ ಮೈಕಾರರ ಪದವಿ ಪೂರ್ವ ಕಾಲೇಜಿನ ನಿಖಿಲ್, ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಮಹಮದ್ ರಿಯಾಜ್ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ರಂಗೋಲಿ ಸ್ಪರ್ಧೆಯಲ್ಲಿ ಅಂಬೇಡ್ಕರ್ ವಸತಿ ಶಾಲೆಯ ವಿಲನ, ಸರ್ಕಾರಿ ಪ್ರೌಢಶಾಲೆ ಚಂಬುವಿನ ವನಶ್ರೀ, ಸಿದ್ದಾಪುರ ಪ್ರೌಢಶಾಲೆಯ ಭುವನೇಶ್ವರಿ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಆಶುಭಾಷಣ ಸ್ಪರ್ಧೆಯಲ್ಲಿ ಸಂತ ಮೈಕಲ್ ಪ್ರೌಢಶಾಲೆಯ ಹೃತ್ಪೂರ್ವಕ, ಸಂಪಾದ ಪ್ರೌಢಶಾಲೆಯ ಧನ್ಯಶ್ರೀ ಹಾಗೂ ರಾಜರಾಜೇಶ್ವರಿ ಪ್ರೌಢಶಾಲೆಯ ಜಯರಾಮಯ್ಯ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಜಾನಪದ ನೃತ್ಯ ಸ್ಪರ್ಧೆಯಲ್ಲಿ ಸಂತಮಿಕಲ ಪ್ರೌಢಶಾಲೆಯ ತಂಡ ಪ್ರಥಮ ಸ್ಥಾನ ಗಳಿಸಿದರೆ ಜ್ಯೋತಿ ಪ್ರೌಢಶಾಲೆಯ ತಂಡ ದ್ವಿತೀಯ ಸ್ಥಾನ ಹಾಗೂ ಸಿದ್ದಾಪುರ ಪ್ರೌಢಶಾಲೆಯ ತಂಡ ತೃತೀಯ ಸ್ಥಾನ ಗಳಿಸಿತು. ರಸಪ್ರಶ್ನೆ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಪ್ರಥಮ ಸ್ಥಾನವನ್ನು, ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ತಂಡ ದ್ವಿತೀಯ ಸ್ಥಾನವನ್ನು ಗಳಿಸಿತು. ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನ ನಟನ ರಂಗಶಾಲೆಯಲ್ಲಿ ‘ಮಧುರ ಮಂಡೋದರಿ’ ಏಕವ್ಯಕ್ತಿ ನಾಟಕ ಪ್ರದರ್ಶನ | ಡಿಸೆಂಬರ್ 15
    Next Article ಪಂಡಿತ್ ವಿಶ್ವ ಮೋಹನ್ ಭಟ್ ಇವರಿಗೆ ‘ಡಾ. ಕದ್ರಿ ಗೋಪಾಲನಾಥ್ ಜೀವಮಾನ ಸಾಧನೆ ಶ್ರೇಷ್ಠ ಪ್ರಶಸ್ತಿ’
    roovari

    Add Comment Cancel Reply


    Related Posts

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಸುರತ್ಕಲ್ಲಿನ ಅನುಪಲ್ಲವಿಯಲ್ಲಿ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ | ಮೇ 17

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.