Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಂಜಿಬೆಟ್ಟು ಏಡನ್ ಇನ್ ಹೋಮ್ ಸ್ಟೇ ಆವರಣದಲ್ಲಿ ಲೋಕಾರ್ಪಣೆಗೊಂಡ ‘ತಂಬೂರಿ’ ಮತ್ತು ‘ಕಾಯ ತಂಬೂರಿ’
    Book Release

    ಕುಂಜಿಬೆಟ್ಟು ಏಡನ್ ಇನ್ ಹೋಮ್ ಸ್ಟೇ ಆವರಣದಲ್ಲಿ ಲೋಕಾರ್ಪಣೆಗೊಂಡ ‘ತಂಬೂರಿ’ ಮತ್ತು ‘ಕಾಯ ತಂಬೂರಿ’

    March 24, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ಮತ್ತು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ‘ತಂಬೂರಿ’ ಕವನ ಸಂಕಲನ ಹಾಗೂ ‘ಕಾಯ ತಂಬೂರಿ’ ನಾಟಕ ಕೃತಿಗಳು ಕುಂಜಿಬೆಟ್ಟು ಏಡನ್ ಇನ್ ಹೋಮ್ ಸ್ಟೇ ಆವರಣದಲ್ಲಿ ದಿನಾಂಕ 21 ಮಾರ್ಚ್ 2025ರಂದು ನಡೆದ ಸಮಾರಂಭದಲ್ಲಿ ಲೋಕಾರ್ಪಣೆಗೊಂಡಿತು.

    ಈ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಕವಿ ಎಚ್. ಡುಂಡಿರಾಜ್ “ಪ್ರತಿಭೆ, ಸ್ಛೂರ್ತಿ ಎರಡೂ ಕವಿಗೆ ಅಗತ್ಯವಿದ್ದು ಕಾವ್ಯ ಸಂವೇದನೆ ಬೆಳೆಸಿಕೊಳ್ಳದಿದ್ದರೆ ಉತ್ತಮ ಕವಿತೆ ರಚನೆಯಾಗದು. ಸಹಜವಾಗಿ ಬರೆದರೆ ಅದು ಕಾವ್ಯಮಯ, ಯಾರದೋ ಒತ್ತಾಯಕ್ಕೆ ಬರೆದರೆ ಕಾವ್ಯ ಮಾಯ. ದೊಡ್ಡ ದೊಡ್ಡ ಶಬ್ದ, ಪ್ರಾಸ, ಛಂದಸ್ಸು, ಲಯಬದ್ಧವಾಗಿ ಬರೆದದ್ದೂ ಕೆಲವೊಮ್ಮೆ ಕವಿತೆಗಳಾಗೋದಿಲ್ಲ. ಕವಿತೆ ಸರಳವಾಗಿದ್ದು ಕೇಳುಗರ, ಓದುಗರ ಗಮನ ಸೆಳೆಯುವಂತಿರಬೇಕು. ಹಾಡು, ನಾಟಕ ಬರೆಯುವವರಿಗೆ ಇಂದು ಪ್ರೋತ್ಸಾಹ ವಿರಳವಾಗಿದೆ. ನಳ್ಳಿ ತಿರುಗಿಸಿದರೆ ನೀರು ಬರೋದಿಲ್ಲ. ಆದರೆ ವಾಟ್ಸ್ಯಾಪ್ ಆನ್ ಮಾಡಿದರೆ ನೂರಾರು ಕವಿತೆಗಳು ಬರುತ್ತವೆ. ಕವಿತೆ ತಪಸ್ಸು, ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ” ಎಂದು ಹೇಳಿದರು.

    ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ಪ್ರೊಫಸರ್ ಶಂಕರ್, ಉದ್ಯಮಿ ವಿಶ್ವನಾಥ ಶೆಣೈ, ಲೇಖಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಉಪಸ್ಥಿತರಿದ್ದರು. ಲಹರಿ ಪ್ರಾರ್ಥಿಸಿ, ಶಿಲ್ಪಾ ಜೋಶಿ ಸ್ವಾಗತಿಸಿ, ಪೂರ್ಣಿಮಾ ಜನಾರ್ದನ್ ನಿರೂಪಿಸಿ, ಜನಾರ್ದನ ಕೊಡವೂರು ವಂದಿಸಿ, ಕ.ಸಾ.ಪ. ಘಟಕ ಅಧ್ಯಕ್ಷ ರವಿರಾಜ ಎಚ್.ಪಿ. ಪ್ರಾಸ್ತಾವಿಕ ಮಾತನಾಡಿದರು.

     

    baikady Book release Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಉದ್ಘಾಟನೆಗೊಂಡ ‘ಸಿರಿ ಚಾವಡಿ’
    Next Article ಅಂತರ್ಕಾಲೇಜು ಯಕ್ಷಗಾನ ಸ್ಪರ್ಧೆ ‘ಯಕ್ಷೋತ್ಸವ-2025’ ಉದ್ಘಾಟನಾ ಸಮಾರಂಭ
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.