Subscribe to Updates

    Get the latest creative news from FooBar about art, design and business.

    What's Hot

    ಪರಿಚಯ | ಯಕ್ಷ ಪ್ರತಿಭೆಯ ಕಲಾವಲ್ಲರಿ – ಶ್ರುತಿ ಭಟ್ ಮಾರಣಕಟ್ಟೆ

    July 6, 2025

    ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅವಿಭಜಿತ ದ. ಕ. ಜಿಲ್ಲಾ ಅಧ್ಯಕ್ಷರಾಗಿ ಕಲಾಶ್ರೀ ರಾಜಶ್ರೀ ಉಳ್ಳಾಲ್ ಆಯ್ಕೆ

    July 5, 2025

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೌನೇಶ್ ವಿಶ್ವಕರ್ಮ ಇವರ ‘ತಂತ್ರಜ್ಞಾನದ ಮಾಯೆ’ ನಾಟಕ – ಅತ್ಯುತ್ತಮ ಕೃತಿ ಪ್ರಶಸ್ತಿಗೆ ಆಯ್ಕೆ
    Awards

    ಮೌನೇಶ್ ವಿಶ್ವಕರ್ಮ ಇವರ ‘ತಂತ್ರಜ್ಞಾನದ ಮಾಯೆ’ ನಾಟಕ – ಅತ್ಯುತ್ತಮ ಕೃತಿ ಪ್ರಶಸ್ತಿಗೆ ಆಯ್ಕೆ

    October 30, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಚಿತ್ರದುರ್ಗ ಜಿಲ್ಲೆಯ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಜಿಲ್ಲಾಮಟ್ಟದ ವಿಜ್ಞಾನ ನಾಟಕ‌ ಸ್ಪರ್ಧೆಯಲ್ಲಿ ಮೌನೇಶ ವಿಶ್ವಕರ್ಮ ಇವರು ರಚಿಸಿದ ‘ತಂತ್ರಜ್ಞಾನದ ಮಾಯೆ’ ವಿಜ್ಞಾನ ನಾಟಕ ಪ್ರಥಮ ಸ್ಥಾನಗಳಿಸಿದ್ದು, ಜಿಲ್ಲಾಮಟ್ಟದ ಅತ್ಯುತ್ತಮ ಕೃತಿ ಪ್ರಶಸ್ತಿಗೂ ಆಯ್ಕೆಯಾಗಿದೆ.
    ಚಿತ್ರದುರ್ಗ ತಾಲೂಕು ಮಟ್ಟ ಹಾಗೂ ಚಿತ್ರದುರ್ಗ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಚವಲಿಹಟ್ಟಿಯ ಗೊಲ್ಲರಹಟ್ಟಿ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ‘ತಂತ್ರಜ್ಞಾನದ ಮಾಯೆ’ ವಿಜ್ಞಾನ ನಾಟಕವನ್ನು ಅಭಿನಯಿಸಿ ಪ್ರಥಮ ಸ್ಥಾನಗಳಿಸಿ, ಬೆಂಗಳೂರು ವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ನಾಟಕವನ್ನು ಶಾಲೆಯ ವಿಜ್ಞಾನ ಶಿಕ್ಷಕರಾದ ಸಿ.ಜಿ.ಹಾಲೇಶ್ ಇವರು‌ ನಿರ್ದೇಶಿಸಿದ್ದು, ಉತ್ತಮ ನಿರ್ದೇಶನ, ಉತ್ತಮ‌ ನಟಿ ಪ್ರಶಸ್ತಿಗೂ ಗೊಲ್ಲರಹಟ್ಟಿ ಶಾಲೆಯ ಮಕ್ಕಳ ತಂಡ ಆಯ್ಕೆಯಾಗಿದೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಡೆದ ವಿಜ್ಞಾನ ನಾಟಕ ಸ್ಪರ್ಧೆಗೆ ಮೌನೇಶ ವಿಶ್ವಕರ್ಮ ಇವರು ಐದು ನಾಟಕಗಳನ್ನು ನಿರ್ದೇಶಿಸಿದ್ದರು. ಪುತ್ತೂರಿನಲ್ಲಿ ಸುದಾನ ವಸತಿ ಶಾಲೆಯಲ್ಲಿ ‘ರೋಗಗಳ ಮಾಯದಾಟ’, ಸವಣೂರು ಸರ್ಕಾರಿ ಪ್ರೌಢಶಾಲೆಯಲ್ಲಿ ‘ಸಿರಿಧಾನ್ಯ ಮಹಾತ್ಮೆ’ ಹಾಗೂ ಪೆರಿಯಡ್ಕದ‌ ಸರ್ವೋದಯ ಅನುದಾನಿತ ಪ್ರೌಢಶಾಲೆಯಲ್ಲಿ ‘ಡಿಜಿಟಲ್ ಮಾಯೆ’, ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ‘ಆರೋಗ್ಯ ಸಿರಿ’, ಸುಳ್ಯತಾಲೂಕಿನ ಎಣ್ಮೂರು ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ ‘ಅಜ್ಞಾನದಿಂದ ವಿಜ್ಞಾನದೆಡೆಗೆ’ ಎನ್ನುವ ನಾಟಕಗಳನ್ನು ನಿರ್ದೇಶಿಸಿದ್ದು, ರಂಗಾಯಣ ಪದವೀಧರ ರಾಕೇಶ್ ಆಚಾರ್ಯ ನಿರ್ದೇಶನದಲ್ಲಿ ಸಹಕರಿಸಿದ್ದರು.

    ಮೌನೇಶ ವಿಶ್ವಕರ್ಮ ಇವರು ಪುತ್ತೂರಿನ ಸಂಪ್ಯ ನಿವಾಸಿಯಾಗಿದ್ದು, ಕಳೆದ 22 ವರ್ಷಗಳಿಂದ ಬಂಟ್ವಾಳದಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ರಂಗಭೂಮಿಯಲ್ಲಿ ಸಕ್ರೀಯರಾಗಿದ್ದು, ನಾಟಕ ರಚನೆ, ನಿರ್ದೇಶನ, ನಟನಾ ಕ್ಷೇತ್ರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ತರಬೇತುದಾರರಾಗಿ ಗುರುತಿಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿರುವ ಇವರು ‘ಸಂಸಾರ’ ಜೋಡುಮಾರ್ಗ ತಂಡವನ್ನು ಮುನ್ನಡೆಸುತ್ತಿದ್ದು, ರೋಟರಿ ಪುತ್ತೂರು ಎಲೈಟ್ ಇದರ ಸಕ್ರೀಯ ಸದಸ್ಯರಾಗಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleವಿದ್ಯಾ ರಾಮಕೃಷ್ಣ ಅವರಿಗೆ “ವ್ಯಾಸರಾಯ ಬಲ್ಲಾಳ ಅತ್ಯುತ್ತಮ ವಿದ್ಯಾರ್ಥಿ” ಪುರಸ್ಕಾರ
    Next Article ಶ್ರೀ ಶ್ರೀ ಕುರು ಅಂಬಾ ರಾಜರಾಜೇಶ್ವರಿ ಸುಬ್ರಮಣ್ಯ ದೇಗುಲದಲ್ಲಿ ‘ಇಳಾರಜತ’ ಯಕ್ಷಗಾನ
    roovari

    Add Comment Cancel Reply


    Related Posts

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025

    Book review | The Gory Account of Genocide in the Heaven of India

    July 5, 2025

    ನಿದೀಶ್ ಕುಮಾರ್ ಮಡಿಲಿಗೆ ಅಂತಾರಾಷ್ಟ್ರೀಯ ಗೋಲ್ಡ್ ಮೆಡಲ್

    July 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.