Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಪ್ಪಳದಲ್ಲಿ 10ನೇ ‘ಮೇ ಸಾಹಿತ್ಯ ಮೇಳ’ | ಮೇ 25 ಮತ್ತು 26
    Awards

    ಕೊಪ್ಪಳದಲ್ಲಿ 10ನೇ ‘ಮೇ ಸಾಹಿತ್ಯ ಮೇಳ’ | ಮೇ 25 ಮತ್ತು 26

    May 21, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೊಪ್ಪಳ : ಲಡಾಯಿ ಪ್ರಕಾಶನ ಗದಗ, ಕವಿ ಪ್ರಕಾಶನ ಕವಲಕ್ಕಿ, ಚಿತ್ತಾರ ಕಲಾ ಬಳಗ ಧಾರವಾಡ ಮತ್ತು ಮೇ ಸಾಹಿತ್ಯ ಮೇಳ ಬಳಗ ಕೊಪ್ಪಳ ಇವುಗಳ ಸಂಯುಕ್ತ ಆಶ್ರಯದಲ್ಲಿ 10ನೇ ‘ಮೇ ಸಾಹಿತ್ಯ ಮೇಳ’ವು ದಿನಾಂಕ 25-05-2024 ಮತ್ತು 26-05-2024ರಂದು ಕೊಪ್ಪಳದ ಶಿವಶಾಂತವೀರ ಮಂಗಲ ಭವನದಲ್ಲಿ ನಡೆಯಲಿದೆ.

    ದಿನಾಂಕ 25-05-2024ರಂದು ಬೆಳಗ್ಗೆ ಗಂಟೆ 10-00ಕ್ಕೆ ಬಳ್ಳಾರಿ ಸಿ. ಚನ್ನಬಸವಣ್ಣ ಇವರು ಬಿ.ಆರ್. ತುಬಾಕಿ ದೇವೇಂದ್ರಪ್ಪ ಡೊಳ್ಳಿನ ಪುಸ್ತಕ ಮಳಿಗೆ ಹಾಗೂ ಏಕಪ್ಪ ಚಿತ್ರಗಾರ ಇವರು ಕಾಳಪ್ಪ ಪತ್ತಾರ ಚಿತ್ರಕಲಾ ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 2-00 ಗಂಟೆಗೆ ಗೋಷ್ಠಿ 1ರಲ್ಲಿ ‘ಸಂವಿಧಾನ ಭಾರತ’, ಗೋಷ್ಠಿ 2ರಲ್ಲಿ ‘ವರ್ತಮಾನದಲ್ಲಿ ಧರ್ಮ ರಾಜಕರಣ’ ಹಾಗೂ ಗೋಷ್ಠಿ 3ರಲ್ಲಿ ‘’ಬದುಕು – ಹಾಡು’ ಎಂಬ ವಿಷಯಗಳ ಬಗ್ಗೆ ಸಂವಾದ ನಡೆಯಲಿದೆ. ಸಂಜೆ ಗಂಟೆ 7-00ರಿಂದ ಕವಿಗೋಷ್ಠಿ 1 ನಡೆಯಲಿದೆ.

    ದಿನಾಂಕ 26-05-2024ರಂದು ಬೆಳಗ್ಗೆ ಗಂಟೆ 9-00ಕ್ಕೆ ಕವಿಗೋಷ್ಠಿ 2 ಪ್ರಸ್ತುತಗೊಳ್ಳಲಿದೆ. ಗಂಟೆ 11-00ರಿಂದ ಗೋಷ್ಠಿ 4ರಲ್ಲಿ ‘ಚಳವಳಿ ಮತ್ತು ಧರ್ಮ ರಾಜಕಾರಣ’, ಗೋಷ್ಠಿ 5ರಲ್ಲಿ ‘ನಾವು ಮತ್ತು ನಾಳೆ’, ಗೋಷ್ಠಿ 6ರಲ್ಲಿ ‘ಅನುಭವ ಕಥನ’ ಎಂಬ ವಿಷಯಗಳ ಬಗ್ಗೆ ಸಂವಾದ ನಡೆಯಲಿದೆ. ಸಂಜೆ ಗಂಟೆ 4-00ರಿಂದ ಸಮಾರೋಪ ಸಮಾರಂಭ ನಡೆಯಲಿದೆ. ಇದೇ ಸಂದರ್ಭದಲ್ಲಿ ತೀರ್ಥಹಳ್ಳಿಯ ಸವಿರಾಜ್ ಆನಂದ್ ಇವರಿಗೆ ‘ವಿಭಾ ಸಾಹಿತ್ಯ ಪ್ರಶಸ್ತಿ’, ಧಾರವಾಡದ ಎಸ್.ಆರ್. ಹಿರೇಮಠ ಇವರಿಗೆ ‘ಬಂಡ್ರಿ ನರಸಪ್ಪ ಸಮಾಜಮುಖಿ ಶ್ರಮಜೀವಿ ಪ್ರಶಸ್ತಿ’, ಕೆರೆಕೋಣದ ಮಾಧವಿ ಭಂಡಾರಿ ಇವರಿಗೆ ‘ನವಲಕಲ್ ಬೃಹನ್ಮಠ ಶಾಂತವೀರಮ್ಮ ಮಹಾತಾಯಿ ಕಥಾ ಪ್ರಶಸ್ತಿ’, ಬೆಳಗಾವಿಯ ಶಿವಾಜಿ ಕಾಗಣೇಕರ್ ಇವರಿಗೆ ‘ನಿಂಗಪ್ಪ ಸಂಶಿ ರೈತಚೇತನ ಪ್ರಶಸ್ತಿ’, ಮೈಸೂರಿನ ಜನಾರ್ಧನ ಜನ್ನಿ ಇವರಿಗೆ ‘ಪಂಚಪ್ಪ ಸಮುದಾಯ ಮಾರ್ಗಿ ಪ್ರಶಸ್ತಿ’, ಬೆಂಗಳೂರಿನ ಇಂದೂಧರ ಹೊನ್ನಾಪುರ ಇವರಿಗೆ ಚಂದ್ರಶೇಖರ ಹೊಸಮನಿ ಅಂಬೇಡ್ಕರ್ ಪತ್ರಿಕಾ ಮಾರ್ಗಿ ಪ್ರಶಸ್ತಿ’ ಮತ್ತು ಕೊಪ್ಪಳದ ಹುಚ್ಚಮ್ಮ ಚೌಧರಿಯವರಿಗೆ ‘ಲಕ್ಷ್ಮೀಬಾಯಿ ಕಟ್ಟಿಮನಿ ಸಮಾಜಮುಖಿ ಮಹಿಳೆ ಪ್ರಶಸ್ತಿ’ಗಳನ್ನು ಪ್ರದಾನ ಮಾಡಲಾಗುವುದು.

     

    Share. Facebook Twitter Pinterest LinkedIn Tumblr WhatsApp Email
    Previous Articleಪರಿಚಯ ಲೇಖನ | ‘ಯಕ್ಷಮಾನಸಿ’ ರೇವತಿ ನವೀನ್
    Next Article ಬರಹಗಾರರಿಂದ ಲೇಖನಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 30
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.