Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನೈಜ ಪ್ರತಿಭೆಯ ಪ್ರೋತ್ಸಾಹ ಸಮಾಜದ ಕರ್ತವ್ಯ
    Theatre

    ನೈಜ ಪ್ರತಿಭೆಯ ಪ್ರೋತ್ಸಾಹ ಸಮಾಜದ ಕರ್ತವ್ಯ

    January 20, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪೆರ್ಲ : ರಂಗ ಚಿನ್ನಾರಿ ಕಾಸರಗೋಡು ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು. ನಾಲಂದ ಕಾಲೇಜು ಆಡಳಿತ ಮಂಡಳಿ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ರಂಗ ಸಂಸ್ಕೃತಿ ಕಾರ್ಯಾಗಾರವು ದಿನಾಂಕ 17 ಜನವರಿ 2025ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಸಂಪ ನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪ್ರಶಸ್ತಿ ಪುರಸ್ಕೃತ ಸಿನಿಮಾ ನಟ, ನಿರ್ದೇಶಕ ಹಾಗೂ ರಂಗಕರ್ಮಿ ಕಾಸರಗೋಡು ಚಿನ್ನಾ ಮಾತನಾಡಿ “ನಟನೆ ತುಂಬಾ ಸುಲಭ. ಆದರೆ ನಟನೆಯ ಅನುಕರಣೆ ಕಷ್ಟ. ರಂಗ ಕಲೆಯಲ್ಲಿ ನಟನಾ ಕೌಶಲ್ಯ, ವಾಕ್ ಸ್ಪುಟತೆ, ಉಚ್ಚಾರ ಸ್ಪಷ್ಟತೆಯ ಸಂಭಾಷಣೆ, ಪಾತ್ರಕ್ಕೆ ತಕ್ಕ ಹಾವ ಭಾವ, ಸಂಜ್ಞೆಗಳ ಅಭಿನಯ ಮೂಲಕ ಪ್ರೇಕ್ಷಕರ ಮನ ತಣಿಸಬೇಕು. ರಂಗ ಕಲೆ ‘ನಾನು ಅಲ್ಲ ನಾವು’ ಎಂಬುದನ್ನು ಕಲಿಸಿಕೊಡುತ್ತದೆ. ಒಂದು ತಿಂಗಳ ರಂಗ ತರಬೇತಿಯಲ್ಲಿ ಭಾಗವಹಿಸುವ ಮಕ್ಕಳು ಜಾತಿ, ಮತ, ಬೇಧ, ಭಾವವಿಲ್ಲದೆ ಪರಸ್ಪರ ಬೆರೆಯುತ್ತಾರೆ. ಇದರಿಂದ ಮನುಷ್ಯ ಸಂಬಂಧ ಬಲಗೊಳ್ಳುತ್ತದೆ. ಮಕ್ಕಳಲ್ಲಿನ ಸುಪ್ತ ಪ್ರತಿಭೆ ಅನಾವರಣಗೊಳಿಸಲು ಹೆತ್ತವರು ಮತ್ತು ಶಿಕ್ಷಕರು ಬೆಂಬಲ ನೀಡಬೇಕು. ನೈಜ ಪ್ರತಿಭೆಯನ್ನು ಪ್ರೋತ್ಸಾಹಿಸುವುದು ಸಮಾಜದ ಕರ್ತವ್ಯ” ಎಂದರು.


    ಕಾಲೇಜಿನ ಪ್ರಾಂಶುಪಾಲರಾದ ಶಂಕರ ಖಂಡಿಗೆ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೇರಳ ರಾಜ್ಯ ಕಿರು ಕೈಗಾರಿಕಾ ಘಟಕ ಕಾಸರಗೋಡು ಇದರ ಜಿಲ್ಲಾ ಅಧ್ಯಕ್ಷರಾದ ರಾಜಾರಾಮ ಪೆರ್ಲ ಮಾತನಾಡಿ “ಸಾಂಸ್ಕೃತಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಕಾಸರಗೋಡು ಚಿನ್ನಾ ಎಲೆಮರೆಯ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ಮೂಲಕ ಕಲೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ” ಎಂದರು.

    ಕಾಲೇಜು ಆಡಳಿತ ಮಂಡಳಿ ಸದಸ್ಯ ಹಾಗೂ ರಂಗಚಿನ್ನಾರಿ ನಿರ್ದೇಶಕರಾದ ಕೋಳಾರು ಸತೀಶ್ಚಂದ್ರ ಭಂಡಾರಿ ಮಾತನಾಡಿ “ಕಾಸರಗೋಡು ಚಿನ್ನಾ ಅವರು ಬೆಂಗಳೂರಿನ ಕಲಾವಿದರ ನೆರವಿನಲ್ಲಿ ಕಳೆದ 18 ವರ್ಷಗಳಲ್ಲಿ 50 ಶಾಲೆಗಳ ಐದು ಸಾವಿರ ಮಕ್ಕಳಿಗೆ ಕನ್ನಡದ ನಾಡ ಗೀತೆಗಳನ್ನು ತರಬೇತಿ ನೀಡಿ ಸುಶ್ರಾವ್ಯವಾಗಿ ಹಾಡಲು ಕಲಿಸಿದ್ದಾರೆ. ಇವರಲ್ಲಿ ಆಯ್ದ 600 ಮಕ್ಕಳಿಂದ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಕಾಲೇಜಿನಲ್ಲಿ ಹಾಡಿಸಲಾಗಿದೆ” ಎಂದು ಮಾಹಿತಿ ನೀಡಿದರು. ಆಡಳಿತ ಮಂಡಳಿ ಸದಸ್ಯ ರಾಜಶೇಖರ್ ಪೆರ್ಲ ಮಾತನಾಡಿ “ಜೀವನ ಅನುಭವವೇ ನೈಜ ಪಾಠ” ಎಂದರು. ಡಾ. ಶ್ರೀಪತಿ ಕಜಂಪಾಡಿ ಉಪಸ್ಥಿತರಿದ್ದರು.

    ಉಪನ್ಯಾಸಕಿ ನವ್ಯಶ್ರೀ ಸ್ವಾಗತಿಸಿ, ಉಪನ್ಯಾಸಕಿ ದಿಶಾ ನಿರೂಪಿಸಿ, ವಿದ್ಯಾರ್ಥಿನಿ ಹರ್ಷಿತಾ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಕ್ಕಳಿಗೆ ಚಿನ್ನಾ ನಿರ್ದೇಶನದಲ್ಲಿ ರಂಗ ಸಂಸ್ಕೃತಿ ಕಾರ್ಯಾಗಾರ ನಡೆಯಿತು.

    theatre workshop
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ‘ಲೀಕ್ ಔಟ್’ ಕನ್ನಡ ನಾಟಕ ಪ್ರದರ್ಶನ | ಜನವರಿ 22
    Next Article ಬೊಳ್ಳಜಿರ ಬಿ. ಅಯ್ಯಪ್ಪ ಇವರು ಕಾಸರಗೋಡು ಕನ್ನಡ ಭವನದ ಕೊಡಗು ಜಿಲ್ಲೆಯ ಅಧ್ಯಕ್ಷರಾಗಿ ಆಯ್ಕೆ.
    roovari

    Add Comment Cancel Reply


    Related Posts

    ಕಲ್ಯಾಣ್ಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ‘ವೊವಿಯೊ – ವೇರ್ಸ್’ ಕಾರ್ಯಾಗಾರ | ಜೂನ್ 29

    June 27, 2025

    ನೀನಾಸಂ ರಂಗ ಶಿಕ್ಷಣಕ್ಕೆ ಹಾರಂಬಿ ಯತಿನ್ ಆಯ್ಕೆ

    June 27, 2025

    ವಿಶೇಷ ಲೇಖನ | ರಂಗ ಗಾರುಡಿಗ ಸಿ.ಜಿ.ಕೆ.

    June 27, 2025

    ಉದ್ಘಾಟನೆಗೊಂಡ ತುಳು ನಾಟಕ ಕಾರ್ಯಾಗಾರ

    June 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.