Subscribe to Updates

    Get the latest creative news from FooBar about art, design and business.

    What's Hot

    ನಾದಸ್ವರ ವಿದ್ವಾನ್ ಆರ್. ಶ್ರೀರಾಮುಲು ನಿಧನ

    July 5, 2025

    ಬಡಗ ಎಕ್ಕಾರಿನ ಸರಕಾರಿ ಪ್ರೌಢ ಶಾಲೆಯಲ್ಲಿ ಉದ್ಘಾಟನೆಗೊಂಡ ಯಕ್ಷಶಿಕ್ಷಣ

    July 5, 2025

    Book review | The Gory Account of Genocide in the Heaven of India

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೂರನೇ ವರ್ಷದ ಯಕ್ಷಧ್ರುವ ಯಕ್ಷಶಿಕ್ಷಣ ಮುಲ್ಲಕಾಡು ಸರಕಾರಿ ಶಾಲೆಯಲ್ಲಿ ಪ್ರಾರಂಭ
    Yakshagana

    ಮೂರನೇ ವರ್ಷದ ಯಕ್ಷಧ್ರುವ ಯಕ್ಷಶಿಕ್ಷಣ ಮುಲ್ಲಕಾಡು ಸರಕಾರಿ ಶಾಲೆಯಲ್ಲಿ ಪ್ರಾರಂಭ

    July 5, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಕ್ಕಳಿಗೆ ಯಕ್ಷಗಾನ ಕಲಿಸುವ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಮಹತ್ವಾಕಾಂಕ್ಷೆಯ ನಿಟ್ಟಿನಲ್ಲಿ ಯಕ್ಷಧ್ರುವ- ಯಕ್ಷಶಿಕ್ಷಣವು ಮುಲ್ಲಕಾಡು ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ದಿನಾಂಕ 04 ಜುಲೈ 2025ರಂದು ಉದ್ಘಾಟನೆಗೊಂಡಿತು. ಮೂರನೇ ವರ್ಷದ ಯಕ್ಷ ಶಿಕ್ಷಣವನ್ನು ಮಂಗಳೂರು ಪಟ್ಲ ಪೌಂಡೇಶನ್ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕೃಷ್ಣ ಶೆಟ್ಟಿ ತಾರೆಮಾರ್ ದೀಪ ಬೆಳಗಿಸಿ ಉದ್ಘಾಟಿಸಿ “ಯಕ್ಷಗಾನವು ಪಠ್ಯದ ಒಂದು ಅಧ್ಯಾಯವಾಗಿ ಮಕ್ಕಳಿಗೆ ಭೋದನೆಯಾಗಬೇಕು” ಎಂದು ಆಗ್ರಹಿಸಿದರು.

    ಯಕ್ಷಶಿಕ್ಷಣದ ಪ್ರಧಾನ ಸಂಚಾಲಕ, ರುವಾರಿ ಪಣಂಬೂರು ಶ್ರೀ ವಾಸುದೇವ ಐತಾಳ್ ಪ್ರಸ್ತಾವನೆಗೈದು, “ಯಕ್ಷಗಾನ ಮಕ್ಕಳ ಮಾನಸಿಕ ದೃಡತೆಯೊಂದಿಗೆ ಏಕಾಗ್ರತೆ ಹೆಚ್ಚಿಸಿ ಮಕ್ಕಳು ಉತ್ತಮ ಅಂಕ ಪಡೆಯಲು ಸಹಕಾರಿಯಾಗುತ್ತದೆ. ಮುಲ್ಲಕಾಡು ಶಾಲೆಯಲ್ಲಿ ಯಕ್ಷ ಶಿಕ್ಷಣ ಪಡೆದು ಶಾಲಾ ವ್ಯಾಸಂಗದಲ್ಲಿ ಉನ್ನತ ಶ್ರೇಣಿಯನ್ನು ಪಡೆದ ಬಾಲಕಿ ಕುಮಾರಿ ಸುಜಾತ ಮಾದರಿ” ಎಂದು ತಿಳಿಸಿದರು.

    ಸಭೆಯ ಅಧ್ಯಕ್ಷೆ ಹಾಗೂ ಶಾಲಾ ಎಸ್.ಡಿ.ಸಿ. ಅಧ್ಯಕ್ಷೆ ಶ್ರೀಮತಿ ಗೀತಾ ಶೆಟ್ಟಿ ಮಾತನಾಡಿ ಯಕ್ಷ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ ಸಹಕರಿಸುತ್ತಿರುವ ಶಾಲಾ ಮುಖ್ಯೋಪಾದ್ಯರಾದ ಶ್ರೀ ಉಸ್ಮಾನ್ ಇವರಿಗೆ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

    ಕಳೆದ ಸಲ ನಡೆದ ಶಾಲಾಮಟ್ಟದ ಯಕ್ಷಗಾನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದ ಯಕ್ಷಗಾನ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ನೀಡಿದ ಯಕ್ಷ ಶಿಕ್ಷಕ ರಾಕೇಶ್ ರೈ ಅಡ್ಕ ಇವರನ್ನು ಸನ್ಮಾನಿಸಲಾಯಿತು. ಮುಖ್ಯೋಪಾದ್ಯಯರಾದ ಶ್ರೀ ಜಿ. ಉಸ್ಮಾನ್ ಇವರು ಸ್ವಾಗತಿಸಿದರು. ಕೇಂದ್ರ ಘಟಕದ ಸಂಘಟನಾ ಕಾರ್ಯದರ್ಶಿ ಶ್ರೀ ಪ್ರದೀಪ್ ಆಳ್ವ ಕದ್ರಿ, ಜೊತೆ ಕೋಶಾದಿಕಾರಿ ಶ್ರೀ ರವಿಚಂದ್ರ ಶೆಟ್ಟಿ ಅಶೋಕನಗರ, ಮಂಗಳೂರು ಘಟಕದ ಕೋಶಾಧಿಕಾರಿ ಶ್ರೀ ಗೋಪಿನಾಥ್ ಶೆಟ್ಟಿ ಹಾಗೂ ಸದಸ್ಯರಾದ ಶ್ರೀ ಸುಬ್ರಹ್ಮಣ್ಯ ಭಟ್, ಶ್ರೀ ಸಂತೋಷ್ ರೈ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ವೆಂಕಟರಮಣ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶ್ರೀಮತಿ ನಾಗೇಶ್ ಕಾರ್ವಿ ನಿರೂಪಿಸಿ, ಶ್ರೀ ನಾಗೇಶ್ ಕಾರ್ವಿ ವಂದನಾರ್ಪಣೆಗೈದರು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಶೇಷಾದ್ರಿಪುರಂನಲ್ಲಿ ದತ್ತಿ ಪ್ರಶಸ್ತಿ ಪ್ರದಾನ, ಪುಸ್ತಕ ಲೋಕಾರ್ಪಣೆ ಮತ್ತು ಕವಿಗೋಷ್ಠಿ | ಜೂನ್ 06
    Next Article ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ
    roovari

    Add Comment Cancel Reply


    Related Posts

    ನಾದಸ್ವರ ವಿದ್ವಾನ್ ಆರ್. ಶ್ರೀರಾಮುಲು ನಿಧನ

    July 5, 2025

    ಬಡಗ ಎಕ್ಕಾರಿನ ಸರಕಾರಿ ಪ್ರೌಢ ಶಾಲೆಯಲ್ಲಿ ಉದ್ಘಾಟನೆಗೊಂಡ ಯಕ್ಷಶಿಕ್ಷಣ

    July 5, 2025

    Book review | The Gory Account of Genocide in the Heaven of India

    July 5, 2025

    ನಿದೀಶ್ ಕುಮಾರ್ ಮಡಿಲಿಗೆ ಅಂತಾರಾಷ್ಟ್ರೀಯ ಗೋಲ್ಡ್ ಮೆಡಲ್

    July 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.