Subscribe to Updates

    Get the latest creative news from FooBar about art, design and business.

    What's Hot

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ನಾಟ್ಯಾರಾಧನಾ ತ್ರಿಂಶೋತ್ಸವ – 1994-2024’ | 10 ಫೆಬ್ರವರಿ
    Bharathanatya

    ‘ನಾಟ್ಯಾರಾಧನಾ ತ್ರಿಂಶೋತ್ಸವ – 1994-2024’ | 10 ಫೆಬ್ರವರಿ

    February 8, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ನಾಟ್ಯಾರಾಧನಾ ಕಲಾ ಕೇಂದ್ರ (ರಿ) ಉರ್ವ, ಮಂಗಳೂರು ಇದರ ಸುರತ್ಕಲ್ ಗೋವಿಂದದಾಸ ಕಾಲೇಜು ಶಾಖೆ, ನಾಟ್ಯಾರಾಧನಾ ತ್ರಿಂಶೋತ್ಸವ ಸಮಿತಿ ಮತ್ತು ನಾಟ್ಯಾರಾಧನಾ ತ್ರಿಂಶೋತ್ಸವ ವಿದ್ಯಾರ್ಥಿ ಸಮಿತಿ ಪ್ರಸ್ತುತಪಡಿಸುವ ‘ನಾಟ್ಯಾರಾಧನಾ ತ್ರಿಂಶೋತ್ಸವ – 1994-2024’ ಸರಣಿ ನೃತ್ಯ ಕಾರ್ಯಕ್ರಮಗಳು ದಿನಾಂಕ 10-02-2024ರ ಶನಿವಾರ ಸಂಜೆ ಘಂಟೆ 5.00ರಿಂದ ಸುರತ್ಕಲ್ ಗೋವಿಂದದಾಸ ಕಾಲೇಜಿನ ಕಲಾ ಮಂದಿರದಲ್ಲಿ ನಡೆಯಲಿದೆ.

    ಲಲಿತ ಕಲಾ ಸಂಘ, ಗೋವಿಂದದಾಸ ಕಾಲೇಜು, ಸುರತ್ಕಲ್ ಇವರ ಸಹಯೋಗದೊಂದಿಗೆ ನಡೆಯಲಿರುವ ಈ ಸರಣಿ ನೃತ್ಯ ಕಾರ್ಯಕ್ರಮದಲ್ಲಿ ನೃತ್ಯಾಮೃತ-1 ‘ಭರತನಾಟ್ಯ ರಸಗ್ರಹಣ’ ಈ ಅವಧಿಯಲ್ಲಿ ಭರತನಾಟ್ಯ ಕಲೆಯ ಅರ್ಥೈಸುವಿಕೆ ಮತ್ತು ಪ್ರೇಕ್ಷಕ ದೃಷ್ಟಿಯೆಂಬ ವಿಷಯದ ಬಗ್ಗೆ ನೃತ್ಯ ಪ್ರಾತ್ಯಕ್ಷಿಕೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ಕಲಾವಿದರಾಗಿ ಪುತ್ತೂರಿನ ಶ್ರೀ ಮೂಕಾಂಬಿಕ ಕಲ್ಬರಲ್ ಅಕಾಡೆಮಿ ರಿ. ಇದರ ನಿರ್ದೇಶಕರಾದ ವಿದ್ವಾನ್ ದೀಪಕ್ ಕುಮಾರ್ ಪುತ್ತೂರು, ಮಂಗಳೂರಿನ ಗಾನ ನೃತ್ಯ ಅಕಾಡೆಮಿ ಇದರ ನಿರ್ದೇಶಕರಾದ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಹಾಗೂ ಮಂಗಳೂರಿನ ನಾಟ್ಯಾರಾಧನಾ ಕಲಾ ಕೇಂದ್ರ ರಿ. ಉರ್ವ ಇದರ ನಿರ್ದೇಶಕರಾದ ವಿದುಷಿ ಸುಮಂಗಲಾ ರತ್ನಾಕರ್ ರಾವ್ ಭಾಗವಹಿಸಲಿದ್ದಾರೆ.

    ಕ.ಸಾ.ಪ. ಬೆಂಗಳೂರು ಇದರ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾಕಾರ್ಯಕ್ರಮದಲ್ಲಿ ಶ್ರೀ ಧನಲಕ್ಷ್ಮೀ ಕನ್ಸ್‌ಟ್ರಕ್ಷನ್ಸ್, ಎಂ.ಆರ್.ಪಿ.ಎಲ್ ಇದರ ಮಾಲಕರಾದ ಶ್ರೀ ರಾಜಾರಾಮ್ ಸಾಲ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಸುರತ್ಕಲ್ಲಿನ ಹಿಂದೂ ವಿದ್ಯಾದಾಯಿನೀ ಸಂಘ ಇದರ ಅಧ್ಯಕ್ಷರಾದ ಶ್ರೀ ಎಚ್. ಜಯಚಂದ್ರ ಹತ್ವಾರ್, ಸುರತ್ಕಲ್ಲಿನ ವಿದ್ಯಾದಾಯಿನೀ ಪ್ರೌಢ ಶಾಲೆ ಇದರ ನಿವೃತ್ತ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಐ. ಉಮಾದೇವಿ, ಇಡ್ಯದ ಶ್ರೀ ಕ್ಷೇತ್ರ ಇಡ್ಕ ಇಲ್ಲಿನ ಕಲಾಪೋಷಕಿಯಾದ ಶ್ರೀಮತಿ ಶಕುಂತಲಾ ರಮಾನಂದ ಭಟ್, ಖಂಡಿಗೆ-ಚೇಳ್ಯಾರಿನ ನಾಟ್ಯಾಂಜಲಿ ಕಲಾ ಅಕಾಡೆಮಿ ಸುರತ್ಕಲ್ ಇದರ ನಿರ್ದೇಶಕರಾದ ವಿದ್ವಾನ್ ಚಂದ್ರಶೇಖರ ನಾವಡ, ಸುರತ್ಕಲ್ಲಿನ ಗೋವಿಂದದಾಸ ಕಾಲೇಜು ಇದರ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ, ಓರಿಯಂಟಲ್ ಇನ್ಸೂರೆನ್ಸ್ ಕಂಪೆನಿ ಲಿ. ಇದರ ಹಿರಿಯ ವಲಯ ಪ್ರಬಂಧಕರಾದ ಲಯನ್ ಯಾದವ ದೇವಾಡಿಗ, ಸುರತ್ಕಲ್ಲಿನ ಕಲಾನಿಧಿ ನೃತ್ಯನಿಲಯ ಇದರ ನಿರ್ದೇಶಕಿಯಾದ ವಿ. ಶೈಲಜಾ ಶಿವಶಂಕರ್ ಹಾಗೂ ನಾಟ್ಯಾರಾಧನಾ ಕಲಾಕೇಂದ್ರದ ಹಿರಿಯ ವಿದ್ಯಾರ್ಥಿನಿಯಾದ ವಿದುಷಿ ಶ್ರೀಮತಿ ಅನು ಧೀರಜ್ ಭಾಗವಹಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleವ್ಯಕ್ತಿ ಪರಿಚಯ | ಶತಾಯುಷಿ ಮೃದಂಗ ಮಾಂತ್ರಿಕ ಟಿ.ಕೆ. ಮೂರ್ತಿ  
    Next Article ವರ್ಕಾಡಿ ಶ್ರೀ ರವಿ ಅಲೆವೂರಾಯರ ಷಷ್ಠ್ಯಬ್ದಿ ಪ್ರಯುಕ್ತ ‘ಅಭಿನಂದನಾ ಕಾರ್ಯಕ್ರಮ’ | ಫೆಬ್ರವರಿ 11
    roovari

    Add Comment Cancel Reply


    Related Posts

    ಶ್ರೀ ನಾಟ್ಯಾಂಜಲಿ ಕಲಾ ಮಂದಿರದಲ್ಲಿ ‘ನಲ್ವತ್ತರ ನಲಿವು -11’ | ಮೇ 13

    May 12, 2025

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗದಲ್ಲಿ ‘ಸುಮಂಜುಳ’ | ಮೇ 10

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.