Subscribe to Updates

    Get the latest creative news from FooBar about art, design and business.

    What's Hot

    ಹೊಯಿಗೆಬಜಾರಿನಲ್ಲಿ ಮಾಧವ ತಿಂಗಳಾಯ ಜನ್ಮ ದಿನದ ನೆನಪು ಕಾರ್ಯಕ್ರಮ

    July 7, 2025

    ಬೆಂಗಳೂರಿನ ರಾಮಕೃಷ್ಣ ಮಠದಲ್ಲಿ ‘ರಾಮಕೃಷ್ಣ ಸಂಗೀತ ಸೌರಭ’ | ಜುಲೈ 11, 12 ಮತ್ತು 13

    July 7, 2025

    ಗೋವಿಂದದಾಸ ಪಿ. ಯು. ಸಿ. ಕಾಲೇಜಿನಲ್ಲಿ ಉದ್ಘಾಟನೆಗೊಂಡ ಸಾಹಿತ್ಯ ಸಂಘ

    July 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹೊಯಿಗೆಬಜಾರಿನಲ್ಲಿ ಮಾಧವ ತಿಂಗಳಾಯ ಜನ್ಮ ದಿನದ ನೆನಪು ಕಾರ್ಯಕ್ರಮ
    Drama

    ಹೊಯಿಗೆಬಜಾರಿನಲ್ಲಿ ಮಾಧವ ತಿಂಗಳಾಯ ಜನ್ಮ ದಿನದ ನೆನಪು ಕಾರ್ಯಕ್ರಮ

    July 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸಂಕೇತ ಮಂಗಳೂರು ಮತ್ತು ಸಿಂಗಾರ ಸುರತ್ಕಲ್ ಸಹಯೋಗದಲ್ಲಿ ಮಾಧವ ತಿಂಗಳಾಯ ಜನ್ಮ ದಿನದ ನೆನಪು ಕಾರ್ಯಕ್ರಮ ದಿನಾಂಕ 03 ಜುಲೈ 2025ರಂದು ಮಂಗಳೂರಿನ ಹೊಯಿಗೆಬಜಾರಿನಲ್ಲಿರುವ ಇಂದಿರಾಭವನದಲ್ಲಿ ನಡೆಯಿತು.
    ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷರಾದ ತಾರನಾಥ ಗಟ್ಟಿ ಮಾತನಾಡಿ “ಜನಸಾಮಾನ್ಯರಿಗೆ ಸಾಮಾಜಿಕ ಅರಿವು ಮೂಡಿಸುವ ನಿಟ್ಟಿನಲ್ಲಿ ನಾಟಕ ಕಲೆಯನ್ನು ಪರಿಣಾಮಕಾರಿಯಾಗಿ ಬಳಸಿದ ಮಾಧವ ತಿಂಗಳಾಯರು ತುಳುನಾಡಿನ ಮೊದಲ ನಾಟಕಗಾರರಾಗಿದ್ದಾರೆ. ಅವರ ‘ಜನಮರ್ಲ್’ ನಾಟಕವು ತುಳು ಭಾಷೆಯ ಮೊದಲ ಪ್ರಕಟಿತ ನಾಟಕವಾಗಿದ್ದು ಐತಿಹಾಸಿಕ ಮಹತ್ವವನ್ನು ಹೊಂದಿದೆ. ಯುವ ಜನತೆ ಯಲ್ಲಿ ತುಳು ಸಾಹಿತ್ಯದ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತುಳುನಾಡಿನ ಹಿರಿಯ ಸಾಧಕರನ್ನು ನೆನಪಿಸುವ ಕಾರ್ಯಕ್ರಮ ನಿರಂತರವಾಗಿ ಮಾಡಬೇಕು” ಎಂದರು.


    ಸಾಹಿತಿ ಪ್ರೇಮಚಂದ್ರ ಕೆ. ತಿಂಗಳಾಯ ಮಾತನಾಡಿ “ಹಿರಿಯ ಸಮಾಜ ಸುಧಾರಕ ಮೋಹನಪ್ಪ ತಿಂಗಳಾಯ, ಕೃಷ್ಣಪ್ಪ ತಿಂಗಳಾಯ ಮತ್ತು ಮಾಧವ ತಿಂಗಳಾಯರು ಶ್ರೀ ಜ್ಞಾನೋದಯ ಸಮಾಜದ ಮೂಲಕ ಸಾಮಾಜಿಕ ಪರಿವರ್ತನೆಗಾಗಿ ಮಾಡಿದ ಕಾರ್ಯಗಳು ಅನನ್ಯವಾದವುಗಳು” ಎಂದರು.
    ‘ಸಿಂಗಾರ ಸುರತ್ಕಲ್’ ಇದರ ಕಾರ್ಯದರ್ಶಿಯಾದ ಕೃಷ್ಣಮೂರ್ತಿ ಮಾತನಾಡಿ “ಮಾಧವ ತಿಂಗಳಾಯರು ಕನ್ನಡ ಮತ್ತು ತುಳು ಭಾಷೆಗಳಲ್ಲಿ ಬರೆದ ನಾಟಕಗಳು ಸಮಾಜದ ವಿಮರ್ಶೆ ಮಾಡುತ್ತಿದ್ದು ರಂಗಭೂಮಿಯಲ್ಲಿ ಯಶಸ್ಸು ಕಂಡ ನಾಟಕ ಗಳಾಗಿವೆ” ಎಂದರು.

    ಸಂಕೇತ ಮಂಗಳೂರು ಇದರ ಸಂಚಾಲಕ ಮತ್ತು ಕಲಾವಿದ ಜಗನ್ ಪವಾರ್ ಬೇಕಲ್ ಮಾತನಾಡಿ “ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಮಾಧವ ತಿಂಗಳಾಯರು ಯುವ ಜನತೆಗೆ ಸ್ಫೂರ್ತಿಯಾಗಿದ್ದರು. ಅವರ ನೆನಪು ಸದಾ ಉಳಿಯುವ ಕಾರ್ಯ ನಡೆಯಬೇಕು” ಎಂದರು. ಇಂಟಾಕ್ ಮಂಗಳೂರು ಚಾಪ್ಟರ್ ಇದರ ಸಂಯೋಜಕ ಸುಭಾಸ್ ಬಸು ಮಾತನಾಡಿ “ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆಗಳನ್ನು ರಚನಾತ್ಮಕವಾಗಿ ಮಾಡಬೇಕು” ಎಂದರು.
    ಹಿರಿಯ ಸಾಮಾಜಿಕ ನಾಯಕ ಪ್ರಫುಲ್ಲ ಚಂದ್ರ ತಿಂಗಳಾಯ, ಸಂಕೇತ ಮಂಗಳೂರು ಇದರ ಅಧ್ಯಕ್ಷರಾದ ಹರೀಶ್, ಕಲಾವಿದ ರಾಜೇಂದ್ರ ಕೇದಿಗೆ ಉಪಸ್ಥಿತರಿದ್ದರು.

    baikady drama roovari Tulu
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ರಾಮಕೃಷ್ಣ ಮಠದಲ್ಲಿ ‘ರಾಮಕೃಷ್ಣ ಸಂಗೀತ ಸೌರಭ’ | ಜುಲೈ 11, 12 ಮತ್ತು 13
    roovari

    Add Comment Cancel Reply


    Related Posts

    ಬೆಂಗಳೂರಿನ ರಾಮಕೃಷ್ಣ ಮಠದಲ್ಲಿ ‘ರಾಮಕೃಷ್ಣ ಸಂಗೀತ ಸೌರಭ’ | ಜುಲೈ 11, 12 ಮತ್ತು 13

    July 7, 2025

    ಗೋವಿಂದದಾಸ ಪಿ. ಯು. ಸಿ. ಕಾಲೇಜಿನಲ್ಲಿ ಉದ್ಘಾಟನೆಗೊಂಡ ಸಾಹಿತ್ಯ ಸಂಘ

    July 7, 2025

    ಲೇಖನ | ಐತುಮನೆ ತಾಳಮದ್ದಲೆ-ಆಷಾಢ ಏಕಾದಶಿಯ ಆಧ್ಯಾತ್ಮ ಮೇಳ

    July 7, 2025

    ಕೊಡಗು ಕನ್ನಡ ಭವನ ಮತ್ತು ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಮೂಕೊಂಡ ನಿತಿನ್ ಕುಶಾಲಪ್ಪರಿಗೆ ಸನ್ಮಾನ

    July 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.