Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಅನುವಾದಿತ ಕೃತಿ ಬಿಡುಗಡೆ
    Book Release

    ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಅನುವಾದಿತ ಕೃತಿ ಬಿಡುಗಡೆ

    December 29, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ಮೂಡುಬಿದಿರೆಯ ಆಳ್ವಾಸ್ ಕಾಲೇಜು (ಸ್ವಾಯತ್ತ)ನ ಕನ್ನಡ ವಿಭಾಗ ಹಾಗೂ ಗಾಂಧಿ ವಿಚಾರ ವೇದಿಕೆಗಳ ಜಂಟಿ ಆಶ್ರಯದಲ್ಲಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ದಿನಾಂಕ 19 ಡಿಸೆಂಬರ್ 2025ರಂದು ಉದಯ ಕುಮಾರ್ ಹಬ್ಬು ಇವರ ‘ಉತ್ತರ ಸತ್ಯಾಗ್ರಹ ಗೀತಾ’ ಅನುವಾದಿತ ಕೃತಿ ಬಿಡುಗಡೆಗೊಂಡಿತು.

    ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ “ಮಹಾತ್ಮಾ ಗಾಂಧೀಜಿಯವರ ಚಿಂತನೆಗಳು ಇಂದಿನ ಕಾಲಘಟ್ಟದಲ್ಲಿ ಪ್ರಸ್ತುತವಾಗಿದ್ದು, ಯುವ ಸಮುದಾಯ ಗಾಂಧೀಜಿಯವರ ಚಿಂತನೆಗಳನ್ನು ಅಧ್ಯಯನ ಮಾಡಬೇಕಾಗಿದೆ. ಮಹಾರಾಷ್ಟ್ರದ ಕವಯಿತ್ರಿ ಪಂಡಿತಾ ಕ್ಷಮಾರಾವ್ 1948ರಲ್ಲಿ ಸಂಸ್ಕೃತದಲ್ಲಿ ಬರೆದ ‘ಉತ್ತರ ಸತ್ಯಾಗ್ರಹ ಗೀತಾ’ ಕಾವ್ಯವು 1931ರಿಂದ 1944ರವರೆಗಿನ ಸತ್ಯಾಗ್ರಹದ ಹೋರಾಟದ ಕಥನವನ್ನು ಒಳಗೊಂಡಿದ್ದು ಹಿರಿಯ ಸಾಹಿತಿ ಉದಯ ಕುಮಾರ್ ಹಬ್ಬು ಕನ್ನಡಕ್ಕೆ ಗದ್ಯಾನುವಾದ ಮಾಡಿದ್ದು ಕನ್ನಡ ಸಾಹಿತ್ಯಕ್ಕೆ ವಿಶಿಷ್ಟ ಕೊಡುಗೆಯಾಗಿದೆ. ಗಾಂಧೀಜಿಯವರ ರಾಜಕೀಯ, ಸಾಮಾಜಿಕ, ಆರ್ಥಿಕ ಹಾಗೂ ಆಧ್ಯಾತ್ಮಿಕ ಚಿಂತನೆಗಳು ಈ ಕೃತಿಯಲ್ಲಿ ಒಡ ಮೂಡಿದ್ದು ಆಧುನಿಕ ಭಾರತದ ಇತಿಹಾಸದ ಘಟನೆಗಳು ಕಾವ್ಯ ರೂಪದಲ್ಲಿ ಪ್ರಕಟವಾಗಿದೆ. ಸತ್ಯಾಗ್ರಹದ ಮಹತ್ವವನ್ನು, ಗಾಂಧೀಜಿಯವರ ದೃಢ ನಿಲುವುಗಳನ್ನು ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ನಾಯಕರ ತ್ಯಾಗವನ್ನು ಅರಿತುಕೊಳ್ಳಲು ಈ ಕೃತಿ ಸಹಕಾರಿಯಾಗಿದೆ” ಎಂದು ನುಡಿದರು.

    ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ “ಬ್ರಿಟಿಷ್ ಆಡಳಿತ ನಿರ್ಮಿಸಿದ ಸ್ವಾರ್ಥ ಪರವಾದ ರಾಜಕೀಯ ವ್ಯವಸ್ಥೆಯನ್ನು ಮೀರಿ ಜನಪರ ವಾದ ಆಡಳಿತ ವ್ಯವಸ್ಥೆಯನ್ನು ಗಾಂಧಿಜೀ ರೂಪಿಸಲು ಶ್ರಮಿಸಿದರು” ಎಂದರು. ಅಧ್ಯಕ್ಷತೆ ವಹಿಸಿದ್ದ ಗಾಂಧಿ ವಿಚಾರ ವೇದಿಕೆಯ ಶ್ರೀಧರ್ ಜಿ. ಭಿಡೆ ಮಾತನಾಡಿ “ವರ್ತಮಾನ ಭಾರತ ಗಾಂಧೀಜಿಯವರ ಚಿಂತನೆಗಳನ್ನು ಅರಿತು ಅನುಷ್ಠಾನಗೊಳಿಸಬೇಕಾಗಿದೆ. ಗಾಂಧೀಜಿಯವರ ಚಿಂತನೆಗಳು ವಿಶ್ವ ಶಾಂತಿಗೆ ಪ್ರೇರಣೆ ಕೊಡಬಲ್ಲದು” ಎಂದರು.

    ಲೇಖಕ ಉದಯ ಕುಮಾರ್ ಹಬ್ಬು ಮಾತನಾಡಿ “ಉತ್ತರ ಸತ್ಯಾಗ್ರಹ ಗೀತಾ ಕೃತಿಯು ಸ್ವಾತಂತ್ರ್ಯ ಹಾಗೂ ಸ್ವಾಭಿಮಾನದ ಸಂಕೇತವಾಗಿದ್ದು ಓದುಗರನ್ನು ತಲುಪ ಬೇಕಾಗಿದೆ” ಎಂದರು. ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ಸ್ವಾಗತಿಸಿ, ವಿದ್ಯಾರ್ಥಿನಿ ಸೌಮ್ಯ ನಿರೂಪಿಸಿದರು.

    baikady Book release Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಹಾಭಾರತ ನಾಟಕಗಳ ಆಧಾರಿತ ರಂಗರೂಪ | ಡಿಸೆಂಬರ್ 29
    Next Article ಅನುಷ್ಕಾ ಪ್ರಕಾಶನದಿಂದ ನಾಲ್ಕು ಕೃತಿಗಳು ಲೋಕಾರ್ಪಣಾ ಸಮಾರಂಭ
    roovari

    Add Comment Cancel Reply


    Related Posts

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026

    ಮಂಗಳೂರಿನ ಪುರಭವನದಲ್ಲಿ ‘ಸ್ವರ ಸಂಕ್ರಾಂತಿ’ ಹಿಂದೂಸ್ಥಾನಿ ಸಂಗೀತ ಕಛೇರಿ | ಜನವರಿ 14

    January 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.