Subscribe to Updates

    Get the latest creative news from FooBar about art, design and business.

    What's Hot

    ಕಂಕನಾಡಿ ಗರೋಡಿಯಲ್ಲಿ ‘ತುಳು ತಾಳಮದ್ದಲೆ ಸಪ್ತಾಹ’ | ಡಿಸೆಂಬರ್ 7ರಿಂದ 13

    December 2, 2025

    ಬ್ಯಾರಿ ಅಕಾಡೆಮಿಯಿಂದ ಭಾಷಾಂತರ, ಭಾಷಣ ಸ್ಪರ್ಧೆ | ಕೊನೆಯ ದಿನಾಂಕ ಡಿಸೆಂಬರ್ 10

    December 2, 2025

    ಸೋಮವಾರಪೇಟೆ ತಾಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಪೂರ್ವಭಾವಿ ಸಭೆ

    December 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬ್ಯಾರಿ ಅಕಾಡೆಮಿಯಿಂದ ಭಾಷಾಂತರ, ಭಾಷಣ ಸ್ಪರ್ಧೆ | ಕೊನೆಯ ದಿನಾಂಕ ಡಿಸೆಂಬರ್ 10
    Beary

    ಬ್ಯಾರಿ ಅಕಾಡೆಮಿಯಿಂದ ಭಾಷಾಂತರ, ಭಾಷಣ ಸ್ಪರ್ಧೆ | ಕೊನೆಯ ದಿನಾಂಕ ಡಿಸೆಂಬರ್ 10

    December 2, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ದಿನಾಂಕ 14 ಡಿಸೆಂಬರ್ 2025ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ‘ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’ದ ಅಂಗವಾಗಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಭಾಷಾಂತರ ಸ್ಪರ್ಧೆ (ಕನ್ನಡದಿಂದ ಬ್ಯಾರಿಗೆ ಅಥವಾ ಬ್ಯಾರಿಯಿಂದ ಕನ್ನಡಕ್ಕೆ) ಮತ್ತು ಪದವಿ ವಿದ್ಯಾರ್ಥಿಗ-ಳಿಗೆ ವಿಷಯಾಧಾರಿತ ಭಾಷಣ ಸ್ಪರ್ಧೆ ಏರ್ಪಡಿಸಿದೆ.

    ಸ್ಪರ್ಧೆಯ ವಿಜೇತರಿಗೆ ಕ್ರಮವಾಗಿ ರೂ.3000/-, ರೂ.2,000 ಮತ್ತು ರೂ.1,000 ಮೊದಲ ಮೂರು ನಗದು ಬಹುಮಾನ ನಿಗದಿಪಡಿಸಲಾಗಿದೆ. ಭಾಗವಹಿಸುವ ಎಲ್ಲರಿಗೂ ಅಕಾಡೆಮಿ ವತಿಯಿಂದ ಪ್ರಮಾಣ ಪತ್ರ ನೀಡಲಾಗುವುದು.

    ಸ್ಪರ್ಧೆಯು ದಿನಾಂಕ 13 ಡಿಸೆಂಬರ್ 2025ರಂದು ಮಧ್ಯಾಹ್ನ 3-00 ಗಂಟೆಗೆ ಸೂರಲ್ಪಾಡಿ ಮಸೀದಿ ಬಳಿಯ ಅಲ್ ಖೈರ್ ಅಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ. ಭಾಷಾಂತರಕ್ಕೆ 150 ಪದಗಳ ಬರಹಕ್ಕೆ 30 ನಿಮಿಷ ಕಾಲಾವಕಾಶ ನೀಡಲಾಗುವುದು. ಭಾಷಣಕ್ಕೆ ನೀಡಲಾಗುವ ವಿಷಯಗಳನ್ನು ಆಯ್ಕೆ ಮಾಡಿ, ತಯಾರಿಗೆ 30 ನಿಮಿಷ ಮತ್ತು ಭಾಷಣಕ್ಕೆ 5 ನಿಮಿಷ ಕಾಲಾವಕಾಶ ನೀಡಲಾಗುವುದು.

    ಹೆಚ್ಚಿನ ಮಾಹಿತಿ ಮತ್ತು ಹೆಸರು ನೋಂದಾಯಿಸಲು ಸಲೀಂ ಹಂಡೇಲ್ ಮೊ. ಸಂ. 99021 94315 ಅಥವಾ ಖಲಂದ‌ರ್ ಬೀವಿ ಮೊ. ಸಂ. 81978 79889 ಇವರನ್ನು ದಿನಾಂಕ 10 ಡಿಸೆಂಬರ್ 2025ರ ಒಳಗಾಗಿ ಸಂಪರ್ಕಿಸಬಹುದು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್. ತಿಳಿಸಿದ್ದಾರೆ.

    baikady beary competition Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಸೋಮವಾರಪೇಟೆ ತಾಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಪೂರ್ವಭಾವಿ ಸಭೆ
    Next Article ಕಂಕನಾಡಿ ಗರೋಡಿಯಲ್ಲಿ ‘ತುಳು ತಾಳಮದ್ದಲೆ ಸಪ್ತಾಹ’ | ಡಿಸೆಂಬರ್ 7ರಿಂದ 13
    roovari

    Add Comment Cancel Reply


    Related Posts

    ಕಂಕನಾಡಿ ಗರೋಡಿಯಲ್ಲಿ ‘ತುಳು ತಾಳಮದ್ದಲೆ ಸಪ್ತಾಹ’ | ಡಿಸೆಂಬರ್ 7ರಿಂದ 13

    December 2, 2025

    ಸೋಮವಾರಪೇಟೆ ತಾಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಪೂರ್ವಭಾವಿ ಸಭೆ

    December 2, 2025

    ಬ್ರಹ್ಮಾವರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಸಮಾರಂಭ

    December 2, 2025

    ಮಂಚಿಯಲ್ಲಿ ಯಶಸ್ವಿಯಾಗಿ ಪ್ರಸ್ತುತಗೊಂಡ ‘ಕಲಾಧಾರಾ – 3’

    December 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.