Subscribe to Updates

    Get the latest creative news from FooBar about art, design and business.

    What's Hot

    ಇಳಕಲ್ಲಿನ ಸುವರ್ಣ ರಂಗಮಂದಿರದಲ್ಲಿ ಸಿ. ಜಿ. ಕೆ. ಪ್ರಶಸ್ತಿ ಪ್ರದಾನ

    July 23, 2025

    ಅಶೋಕ ನಗರದಲ್ಲಿರುವ ಗೋಕುಲ ಕಲ್ಯಾಣ ಮಂಟಪದಲ್ಲಿ ‘ಆಷಾಢ ಶ್ರಾವ್ಯ’

    July 23, 2025

    ಕಾರ್ಕಳದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ | ಜುಲೈ 24

    July 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ ಪಾತಾಳ – ಶೆಟ್ಟಿಗಾರ್ ಇವರಿಗೆ ಶ್ರದ್ಧಾಂಜಲಿ
    Commemoration

    ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ ಪಾತಾಳ – ಶೆಟ್ಟಿಗಾರ್ ಇವರಿಗೆ ಶ್ರದ್ಧಾಂಜಲಿ

    July 23, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಯಕ್ಷೋತ್ಸವ ಸಮಿತಿ ಮತ್ತು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಸಮಿತಿ ವತಿಯಿಂದ ದಿನಾಂಕ 21 ಜುಲೈ 2025ರಂದು ಕಾಲೇಜು ಸಭಾಂಗಣದಲ್ಲಿ ಪಾತಾಳ ವೆಂಕಟರಮಣ ಭಟ್ ಮತ್ತು ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಇವರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಸಂಸ್ಮರಣಾ ಜ್ಯೋತಿ ಬೆಳಗಿ ನುಡಿ ನಮನ ಸಲ್ಲಿಸಿದ ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ‌. ಭಾಸ್ಕರ ರೈ ಕುಕ್ಕುವಳ್ಳಿ “ಯಕ್ಷಗಾನ ರಂಗಕ್ಕೆ ವಿಶಿಷ್ಟ ಕೊಡುಗೆ ನೀಡಿದ ಮಾರ್ಗದರ್ಶಕ ಕಲಾವಿದರಿಬ್ಬರನ್ನು ಕೇವಲ ಎರಡು ದಿನಗಳ ಅಂತರದಲ್ಲಿ ಕಳೆದುಕೊಂಡಿದ್ದೇವೆ. ಶತಮಾನದ ಹಾದಿಯಲ್ಲಿದ್ದ 92ರ ಹರೆಯದ ಪಾತಾಳ ವೆಂಕಟರಮಣ ಭಟ್ಟರು ಯಕ್ಷಗಾನದ ವೇಷ ಭೂಷಣ, ನೃತ್ಯಾಭಿನಯಗಳಲ್ಲಿ ಹೊಸ ಪ್ರಯೋಗಶೀಲತೆಯ ಮೂಲಕ ಪರಂಪರೆಯನ್ನು ಎತ್ತಿ ಹಿಡಿದವರು; ಹಾಗೆಯೇ ಇನ್ನೂ ಬದುಕಿ ರಂಗದಲ್ಲಿ ಮೆರೆಯಬೇಕಾಗಿದ್ದ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರರು ಬಣ್ಣದ ವೇಷಗಾರಿಕೆಯಲ್ಲಿ ಸೃಜನಶೀಲತೆಯನ್ನು ತೋರಿದವರು.ಇವರ ಕಣ್ಮರೆ ಯಕ್ಷಗಾನ ವಲಯದಲ್ಲಿ ಬಹುದೊಡ್ಡ ನಿರ್ವಾತವನ್ನು ಸೃಷ್ಟಿಸಿದೆ” ಎಂದು ಹೇಳಿದರು.

    ಯಕ್ಷೋತ್ಸವ ಸಮಿತಿ ಸಂಚಾಲಕ ಮತ್ತು ಪ್ರಾಧ್ಯಾಪಕ ಪ್ರೊ. ಪುಷ್ಪರಾಜ್ ಕೆ. ಇವರು ಪ್ರಾಸ್ತಾವಿಕ ಮಾತಿನೊಂದಿಗೆ ಅಗಲಿದ ಕಲಾವಿದದ್ವಯರ ಗುಣಗಾನ ಮಾಡಿದರು. ಹಿರಿಯ ಯಕ್ಷಗಾನ ಕಲಾವಿದ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಗತಿಸಿದ ಇಬ್ಬರು ಕಲಾವಿದರೊಂದಿಗಿನ ತನ್ನ ಒಡನಾಟವನ್ನು ಸ್ಮರಿಸಿ ಶ್ರದ್ಧಾಂಜಲಿ ಸಮರ್ಪಿಸಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಅಧ್ಯಕ್ಷ ಡಾ. ಮಂಜುನಾಥ ಎಸ್. ರೇವಣ್ಕರ್ ನುಡಿ ನಮನ ಸಲ್ಲಿಸಿದರು. ಯಕ್ಷಗಾನದ ಅಭಿಮಾನಿಗಳು ಮತ್ತು ಯಕ್ಷೋತ್ಸವ ಸಮಿತಿ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು. ಕೊನೆಯಲ್ಲಿ ಅಗಲಿದ ಕಲಾವಿದರಿಗೆ ಮೌನ ಪ್ರಾರ್ಥನೆಯ ಮೂಲಕ ಸದ್ಗತಿ ಕೋರಲಾಯಿತು.

    baikady commemoration roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ | ಜುಲೈ 26
    Next Article ಮೂಡುಬಿದಿರೆಯ ಶ್ರೀಜೈನ ಮಠದಲ್ಲಿ ಪಾಕ್ಷಿಕ ತಾಳಮದ್ದಳೆ ಸರಣಿ | ಜುಲೈ 24
    roovari

    Add Comment Cancel Reply


    Related Posts

    ಇಳಕಲ್ಲಿನ ಸುವರ್ಣ ರಂಗಮಂದಿರದಲ್ಲಿ ಸಿ. ಜಿ. ಕೆ. ಪ್ರಶಸ್ತಿ ಪ್ರದಾನ

    July 23, 2025

    ಅಶೋಕ ನಗರದಲ್ಲಿರುವ ಗೋಕುಲ ಕಲ್ಯಾಣ ಮಂಟಪದಲ್ಲಿ ‘ಆಷಾಢ ಶ್ರಾವ್ಯ’

    July 23, 2025

    ಕಾರ್ಕಳದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ | ಜುಲೈ 24

    July 23, 2025

    ಲೇಖನ – ಯಕ್ಷಗಾನದ ವಿವಿಧ ಆಯಾಮಗಳಲ್ಲಿ ವಿಜ್ರಂಭಿಸಿದ ರಂಗಪ್ರತಿಭೆ – ಕೀರಿಕ್ಕಾಡು ಗಣೇಶ ಶರ್ಮ

    July 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.